Homeಕರ್ನಾಟಕರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ರೈತ ವಿರೋಧಿ ಕಾಯ್ದೆ: ಕರ್ನಾಟಕ ರೈತ ಸಂಘ (AIKKS) ವತಿಯಿಂದ ವಿಚಾರ ಸಂಕಿರಣ; ಜಾಥ

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಕೃಷಿ ಮತ್ತು ಭೂ ಸುಧಾರಣಾ ಕಾಯ್ದೆಗಳ ಕುರಿತ ವಿಚಾರ ಸಂಕಿರಣವನ್ನು ಕರ್ನಾಟಕ ರೈತ ಸಂಘ (AIKKS), ರಾಯಚೂರು ವತಿಯಿಂದ ನವೆಂಬರ್ 7 ರಂದು ಹಮ್ಮಿಕೊಳ್ಳಲಾಗಿದ್ದು, ನವೆಂಬರ್ 9 ರಂದು ಮಾನ್ವಿ ತಾಲ್ಲೂಕಿನ ತಹಶೀಲ್ದಾರ್ ಕಛೇರಿಗೆ ಕಾಲ್ನಡಿಗೆ- ಚಾಥ ನಡೆಸಲಾಗುತ್ತಿದೆ.

ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾನು ಗೌರಿ.ಕಾಂ ಜೊತೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷರಾದ ಡಿ.ಎಚ್‌.ಪೂಜಾರ್ ಹೇಳಿದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ: SDPI ಪಕ್ಷದಿಂದ ’ಜಾಗೋ ಕಿಸಾನ್’ ಅಭಿಯಾನ ಆರಂಭ

“ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಕೃಷಿ ಕ್ಷೇತ್ರವನ್ನು ಕಾಪೋರೇಟ್ ಕಂಪನಿಗಳಿಗೊಪ್ಪಿಸಿದೆ. ಎಪಿಎಂಸಿ, ಭೂ ಸುಧಾರಣೆ, ಕಾಂಟ್ರಾಕ್ಟ್ ಪಾರ್ಫಿರಿಗ್, ವಿದ್ಯುತ್ ಇತರೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದ್ದರಿಂದ ದೇಶದ ಶೇ 86 ರಷ್ಟು ಸಣ್ಣ ಮಧ್ಯಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಇಷ್ಟು ಮಾತ್ರವಲ್ಲ ವಿದೇಶಿ ಕಂಪನಿಗಳು ಆಹಾರ ಕ್ಷೇತ್ರದ ಮೇಲೆ ಏಕಸ್ವಾಮ್ಯತೆ ಸಾಧಿಸಲಿವೆ. ರೈತರು-ಇತರೆ ವರ್ಗದ ಜನರು, ಆಹಾರ ಕ್ಷೇತ್ರದ ಮೇಲಿನ ಸಾರ್ವಭೌಮತ್ವ ಕಳೆದುಕೊಳ್ಳಲಿದ್ದಾರೆ. ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆಗಳಿಗೆ ಕಳೆದ ವರ್ಷಕ್ಕಿಂತ ಅರ್ಧದಷ್ಟು ಬೆಲೆ ಕಡಿಮೆಯಾಗಿದೆ. ಇನ್ನು ಮುಂದೆ ಬೆಂಬಲ ಬೆಲೆ ನಿಗದಿ ಮಾಡುವ ಮತ್ತು ಖರೀದಿ ಕೇಂದ್ರ ತೆರೆಯುವ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಲಿದೆ. ಈಗಾಗಲೆ ಒಂದು ತಿಂಗಳಿಂದ ಮೆಕ್ಕೆ ಜೋಳ, ಸಜ್ಜೆ ಇತರೆ ಬೆಳೆ ಕಟಾವು ಮಾಡುತ್ತಿದ್ದರೂ ಖರೀದಿ ಕೇಂದ್ರ ತೆರೆದಿಲ್ಲ. ಹಾಗಾಗಿ, ವೈಜ್ಞಾನಿಕ ಬೆಲೆ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಲು ಒತ್ತಾಯ 250 ಕ್ಕೂ ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿವೆ. ನವೆಂಬರ್ 26,27.2020 ರಂದು ರಾಷ್ಟ್ರ ಮಟ್ಟದಲ್ಲಿ ಪುನಃ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರು ಮತ್ತು ಪ್ರಜ್ಞಾವಂತ ಜನರು ಆಯಾ ಕ್ಷೇತ್ರದ ಸಂಸದರು, ಶಾಸಕರ ಮೇಲೆ ಒತ್ತಾಯ ಹೇರಬೇಕಾಗಿದೆ. ಹಾಗಾಗಿ ಇದನ್ನು ಹೋರಾಟದ ಭಾಗವಾಗಿ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ನಮ್ಮ ಹಕ್ಕೊತ್ತಾಯಗಳು:

  1. ಹೂವಿನಬಾವಿ ಗ್ರಾಮದ ಸ.ನಂ.32,43 ಒಟ್ಟು 605 ಎಕರೆ ಭೂಮಿಯ ಪೈಕಿ 300 ಎಕರೆ ಭೂಮಿಯನ್ನು ಕುರಿ, ಮೇಕೆ, ದನಕರುಗಳನ್ನು ಮೇಯಿಸಲು ಮೀಸಲಿಡಬೇಕು. ಈ ಭೂಮಿಯಲ್ಲಿ ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುವ ಭೂ ರಹಿತ ಬಡವರಿಗೆ ಪಟ್ಟಾ ಕೊಡಬೇಕು.
  2. ಮದಕಿನಾಳ ಗ್ರಾಮದಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಿರುವ ಸಪ್ತಗಿರಿ ಸ್ಟೋನ್ ಕ್ರಷರ್ ಮಾಲಿಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಮತ್ತು ಗಣಿಗಾರಿಕೆಯನ್ನು ನಿಷೇಧಿಸಬೇಕು.
  3. ಕೃಷ್ಣ 5 ಎ ಮತ್ತು ಬಿ. ಸ್ಕೀಂ ಯೋಜನೆ ಅಡಿಯಲ್ಲಿ ಮಸ್ಕಿ ತಾಲೂಕಿನ ಎಲ್ಲಾ ಹಳ್ಳಿಗಳನ್ನು ಸಂಪೂರ್ಣ ನೀರಾವರಿಗೊಳಪಡಿಸಬೇಕು. ಕನಕನಾಲ ಜಲಾಶಯದ ಆಳು ತೆಗೆದು 14 ಹಳ್ಳಿಗಳ ಭೂಮಿಗೆ ನೀರಾವರಿ ಕಲ್ಪಿಸಬೇಕು.
  4. ತೀವ್ರ ಮಳೆಯಿಂದ ಸೂರ್ಯಕಾಂತಿ, ತೊಗರೆ, ಸಜ್ಜೆ, ಜೋಳ, ಭತ್ತ, ಈರುಳ್ಳಿ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿವೆ: ರೈತರ ಪ್ರತಿ ಎಕರೆ ಭೂಮಿಗೆ 30-50 ಸಾವಿರ ಪರಿಹಾರ ಒದಗಿಸಬೇಕು. ಕುಸಿದು ಬಿದ್ದಿರುವ ಮನೆಗಳನ್ನು ತೀವ್ರಗತಿಯಲ್ಲಿ ಪುನರ್ ನಿರ್ಮಾಣ ಮಾಡಬೇಕು.
  5. ಬಹುಗ್ರಾಮ ಯೋಜನೆ ಅಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  6. ಹಲವು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಶುದ್ದೀಕರಣ ಘಟಕಗಳು ಅನುಪಯುಕ್ತವಾಗಿವೆ. ಕಳಪೆ ಕಾಮಗಾರಿ ಮತ್ತು ತುಕ್ಕು ಹಿಡಿದಿರುವ ಯಂತ್ರಗಳ ಕುರಿತು ತನಿಖೆ ನಡೆಸಬೇಕು.
  7. ಮಸ್ಕಿ ತಾಲೂಕಿನ ಪಾಮನಕೆಲೂರ, ಕೋಟೆಕಲ್, ಹಾಲಪುರ, ರಾಮಲದಿನ್ನಿ, ಬೋಗಪುರ, ರತ್ನಾಪುರ ಹಟ್ಟಿ, ಗಂಟೆರ ಹಟ್ಟಿ, ವಿರಾಮರ ಇತರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರಿಗೆ ಪಟ್ಟಾ ಒದಗಿಸಬೇಕು. ತಾಲೂಕಿನ ಗ್ರಾಮಗಳಲ್ಲಿರುವ ಸ್ಮಶಾನದ ಸಮಸ್ಯೆಯನ್ನು ಪರಿಹರಿಸಬೇಕು.

ಈ ಮೇಲಿನ ಸಮಸ್ಯೆಗಳ ಪರಿಹರಿಸುವಿಕೆ ಸೇರಿದಂತೆ ಇನ್ನೂ ಹತ್ತಾರು ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅವುಗಳ ಆಧಾರದ ಮೇಲೆ ಕಾಲ್ನಡಿಗೆ ಜಾತವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...