Homeಕರ್ನಾಟಕಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಶಿರಾ ಉಪಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳು ಏನು ಹೇಳುತ್ತವೆ?

ಈ ಮಟ್ಟದ ಹಣದ ಹೊಳೆ ಹರಿದಿರುವುದು ಶಿರಾ ಚುನಾವಣೆಯ ಇತಿಹಾಸದಲ್ಲೇ ಇದೇ ಮೊದಲು ಎನ್ನಲಾಗುತ್ತಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಮತದಾನ ಅಂತ್ಯಗೊಂಡಿದೆ. ಮೂರು ಪಕ್ಷದ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ದಾಖಲಾಗಿದೆ. ಉಪಚುನಾವಣೆಯಲ್ಲಿ ಶೇ.84.31 ರಷ್ಟು ಮತದಾನವಾಗಿದ್ದು ಎರಡು ಹೋಬಳಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗಳ ನಡುವೆ ಮತ್ತು ಗೌಡಗೆರೆ ಹೋಬಳಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಧಿಕ ಮತ ಗಳು ಹಂಚಿಕೆಯಾಗಿರುವುದು ಆಯಾ ಪಕ್ಷಗಳು ನಡೆಸಿರುವ ಆಂತರಿಕ ಸಮೀಕ್ಷೆಗಳಿಂದ ತಿಳಿದುಬಂದಿದೆ. ಕ್ಷೇತ್ರದಲ್ಲಿ ಮೂರು ಅಭ್ಯರ್ಥಿಗಳಲ್ಲಿ ಯಾರನ್ನೂ ನಿರ್ಲಕ್ಷಿಸುವಂತಿಲ್ಲ ಎನ್ನುತ್ತಾರೆ ಮತದಾರರು.

ಕೆಲವೊಂದು ಹಟ್ಟಿಗಳಲ್ಲಿ ಬಹುತೇಕ ಮತದಾರರ ಮತಗಳು ಹಾಗೂ ಶಿರಾ ನಗರದ ನಾಲ್ಕು ವಾರ್ಡುಗಳಲ್ಲಿ ಹೆಚ್ಚಿನ ಮತಗಳು ಬಿಜೆಪಿ ಪಾಲಾಗಿವೆ. ಉಳಿದ ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಮತಗಳು ಹಂಚಿಹೋಗಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದರೂ ಫಲಿತಾಂಶ ಬೇರೆಯೇ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಕಂಡುಬಂದಿದ್ದರೆ, ಜೆಡಿಎಸ್ 3 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಚುನಾವಣಾ ಪ್ರಚಾರ ಅಂತ್ಯಗೊಂಡ ದಿನದಂದು ನಡೆದ ಘಟನೆ ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡಲು ಕಾರಣ. ನವೆಂಬರ್ 1 ರಂದು ಶಿರಾ ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬಂದು ಗೌರಿಶಂಕರ್ ಅವರಿಗೆ ಭಾಷಣ ನಿಲ್ಲಿಸುವಂತೆ ತಾಕೀತು ಮಾಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಗೌರಿಶಂಕರ್ ಸಿಟ್ಟಾಗಿ ಮೈಕ್ ಎಸೆದು ವೇದಿಕೆಯಿಂದ ಇಳಿದು ಹೋಗಿದ್ದಾರೆ.

ಈ ಘಟನೆ ನಂತರ ಕಾರ್ಯಕರ್ತರು ಕೂಡ ಒಬ್ಬೊಬ್ಬರಾಗಿ ಹೊರಟು ಹೋದರೆಂದು, ಕೊನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡುವ ವೇಳೆಗೆ ಕೇವಲ 100 ಮಂದಿ ಕಾರ್ಯಕರ್ತರು ಮಾತ್ತ ಇದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಚಾರ ಮುಗಿದ ದಿನ ನಡೆದಿರುವ ಈ ಘಟನೆ ಮತದಾನದ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಜೆಡಿಎಸ್ ವರಿಷ್ಠರ ಶ್ರಮ ನೀರಿನಲ್ಲಿ ಹುಣಿಸೆಹಣ್ಣು ತೊಳೆದಂತೆ ವ್ಯರ್ಥವಾಗಿದೆ. ನಿಜವಾಗಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ ಮುಖಂಡರನ್ನು ಬಿಟ್ಟು ನಿಖಿಲ್ ಕುಮಾರಸ್ವಾಮಿ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಿದ್ದು ಕೂಡ ಸ್ಥಳೀಯ ಮುಖಂಡರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣ ಎಂದು ತಿಳಿದುಬಂದಿದೆ.  ಜೆಡಿಎಸ್ ಬೆಂಬಲಿಗರು ಮತ್ತು ಮುಖಂಡರು ಈ ಆರೋಪವನ್ನು ನಿರಾಕರಿಸುತ್ತಿದ್ದರೂ ಗೌರಿಶಂಕರ್ ಮತ್ತು ಇತರರನ್ನು ನಿರ್ಲಕ್ಷಿಸಿದ್ದೇ ಮತದಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ಕಾರಣ ಎಂದು ತಿಳಿದು ಬಂದಿದೆ.

ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪತಿಯ ಹುಟ್ಟೂರು ಭುವನಹಳ್ಳಿ ಗ್ರಾಮದಲ್ಲೇ ಅವರಿಗೆ ಕಡಿಮೆ ಮತಗಳು ಬಿದ್ದಿವೆ. ಹೆಚ್ಚಿನ ಮತಗಳು ಅಮ್ಮಾಜಮ್ಮ ಅವರ ವಿರುದ್ಧದ ಅಭ್ಯರ್ಥಿಗಳಿಗೆ ಬಿದ್ದಿವೆ ಎಂದು ಹೇಳಲಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇರುವ ಬಗ್ಗೆ ಬೆಟ್ಟಿಂಗ್ ಕೂಡ ನಡೆಯುತ್ತಿದೆ. ಹಣದ ಹರಿವಿನ ಬಗ್ಗೆ ಪ್ರಜ್ಞಾವಂತ ಮತದಾರರು ಅಚ್ಚರಿ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಯಾರ ಪರವಾಗಿಯಾದರೂ ಆಗಲಿ ಈ ಮಟ್ಟದ ಹಣದ ಹೊಳೆ ಹರಿದಿರುವುದು ಶಿರಾ ಚುನಾವಣೆಯ ಇತಿಹಾಸದಲ್ಲೇ ಇದೇ ಮೊದಲು ಎನ್ನುತ್ತಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಇವಿಎಂ ದೋಷದ ಬಗ್ಗೆ ಗಮನ ಸೆಳೆದಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿಯೂ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲಲ್ಲಿ ಮತ ಯಂತ್ರಗಳು ಕೈಕೊಟ್ಟಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನಾನು ಇವಿಎಂಗಳ ಕುರಿತು ಮುಂದಿನ ದಿನಗಳಲ್ಲಿ ಜೋರು ದನಿಯಲ್ಲಿ ಕೇಳುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ನವೆಂಬರ್ 3 ರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಗೆಲುವು ನೂರಕ್ಕೆ ನೂರರಷ್ಟು ಖಚಿತ. 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅತೀವ ವಿಶ್ವಾಸದಿಂದ ಬೀಗುತ್ತಿದೆ. ಈ ಉತ್ಸಾಹ ಬೇರೆಯವರಲ್ಲಿ ಕಂಡು ಬರುತ್ತಿಲ್ಲ.

ಇಷ್ಟಾಗಿಯೂ ಗೆಲುವು ಯಾರದು ಎಂಬ ಪ್ರಶ್ನೆಗೆ ನವೆಂಬರ್ 10ರಂದು ಉತ್ತರ ಸಿಗಲಿದೆ.

ಇದನ್ನೂ ಒದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...