Homeಮುಖಪುಟಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳಿಗೆ ಹೋಲಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್‌, ಮುಂಬೈನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಕಂಗನಾ ವಿರುದ್ಧ ಮಾನಹಾನಿ ಪ್ರಕರಣದ ದೂರು ದಾಖಲಿಸಿದ್ದಾರೆ. ಇದಕ್ಕೆ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಷಯವನ್ನು ಶಿವಸೇನೆ ಮುಖಂಡ ಸಂಜಯ್ ರಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ರಿಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್, “ಏಕ್ ಥಿ ಶೆರ್ನಿ… ಓರ್ ಏಕ್‌ ಭೆಡಿಯೋಂಕಾ ಝೂಡ್”  (ಒಬ್ಬಳು ಸಿಂಹಿಣಿ… ಮತ್ತು ಒಂದು ತೋಳಗಳ ಹಿಂಡು) ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳ ಗುಂಪಿಗೆ ಹೋಲಿಸಿದ್ದಾರೆ.

​ಮುಂಬೈನ ಮೆಟ್ರೋಪಾಲಿಟನ್​​ ಕೋರ್ಟ್​​ನಲ್ಲಿ ಕಂಗನಾ ವಿರುದ್ಧ ಐಪಿಸಿ ಸೆಕ್ಷನ್​ 499 ಮತ್ತು 500 ಅಡಿಯಲ್ಲಿ ದೂರು ದಾಖಲಾಗಿದೆ. ನಿನ್ನೆ ಕೂಡ ಕಂಗನಾಗೆ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

ಮಹಾರಾಷ್ಟ್ರದಲ್ಲಿ ಕಂಗನಾ ರಣಾವತ್ ಮತ್ತು ಆಡಳಿತರೂಢ ಶಿವಸೇನೆ ನಡುವೆ ಗುದ್ದಾಟ ನಡೆಯುತ್ತಿದ್ದು, ಇದು ಆಕೆಯ ಪರಸ್ಪರ ವಾಗ್ದಾಳಿಗೆ ಕಾರಣವಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ. ನಟಿ ಕಂಗನಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನೆ, ಉದ್ಧವ್ ಠಾಕ್ರೆ ಸರ್ಕಾರವನ್ನು ನೆರವಾಗಿಯೇ ಟೀಕಿಸುತ್ತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತಿಚೆಗೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಇತ್ತ ಕರ್ನಾಟಕದಲ್ಲಿಯೂ ಕಂಗನಾ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಣಾವತ್ ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...