Homeಮುಖಪುಟಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳಿಗೆ ಹೋಲಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್‌, ಮುಂಬೈನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಕಂಗನಾ ವಿರುದ್ಧ ಮಾನಹಾನಿ ಪ್ರಕರಣದ ದೂರು ದಾಖಲಿಸಿದ್ದಾರೆ. ಇದಕ್ಕೆ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಈ ವಿಷಯವನ್ನು ಶಿವಸೇನೆ ಮುಖಂಡ ಸಂಜಯ್ ರಾವತ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ರಿಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್, “ಏಕ್ ಥಿ ಶೆರ್ನಿ… ಓರ್ ಏಕ್‌ ಭೆಡಿಯೋಂಕಾ ಝೂಡ್”  (ಒಬ್ಬಳು ಸಿಂಹಿಣಿ… ಮತ್ತು ಒಂದು ತೋಳಗಳ ಹಿಂಡು) ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ನಟಿ ಕಂಗನಾ ತನ್ನನ್ನು ಸಿಂಹಿಣಿಗೆ ಹೋಲಿಸಿಕೊಂಡಿದ್ದು, ಆಕೆಯ ವಿರುದ್ಧ ದೂರು ದಾಖಲಿಸುವವರು ಮತ್ತು ಟೀಕಿಸುತ್ತಿರುವವರನ್ನು ತೋಳಗಳ ಗುಂಪಿಗೆ ಹೋಲಿಸಿದ್ದಾರೆ.

​ಮುಂಬೈನ ಮೆಟ್ರೋಪಾಲಿಟನ್​​ ಕೋರ್ಟ್​​ನಲ್ಲಿ ಕಂಗನಾ ವಿರುದ್ಧ ಐಪಿಸಿ ಸೆಕ್ಷನ್​ 499 ಮತ್ತು 500 ಅಡಿಯಲ್ಲಿ ದೂರು ದಾಖಲಾಗಿದೆ. ನಿನ್ನೆ ಕೂಡ ಕಂಗನಾಗೆ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಇದನ್ನೂ ಓದಿ: ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

ಮಹಾರಾಷ್ಟ್ರದಲ್ಲಿ ಕಂಗನಾ ರಣಾವತ್ ಮತ್ತು ಆಡಳಿತರೂಢ ಶಿವಸೇನೆ ನಡುವೆ ಗುದ್ದಾಟ ನಡೆಯುತ್ತಿದ್ದು, ಇದು ಆಕೆಯ ಪರಸ್ಪರ ವಾಗ್ದಾಳಿಗೆ ಕಾರಣವಾಗಿದೆ. ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿನಿಂದ ಆರಂಭಗೊಂಡ ಈ ಗುದ್ದಾಟ, ಏಮ್ಸ್ ವೈದ್ಯರು ಅದು ಆತ್ಮಹತ್ಯೆ ಎಂದು ಪ್ರತಿಪಾದಿಸಿದರೂ ಸಹ ಇನ್ನು ನಿಂತಿಲ್ಲ. ನಟಿ ಕಂಗನಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನೆ, ಉದ್ಧವ್ ಠಾಕ್ರೆ ಸರ್ಕಾರವನ್ನು ನೆರವಾಗಿಯೇ ಟೀಕಿಸುತ್ತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇತ್ತಿಚೆಗೆ ಕಂಗನಾ ಹೆಸರೇಳದೆ ಅವರನ್ನು ಟೀಕಿಸಿದ್ದರು. “ಕೆಲವು ಜನರು ತಮ್ಮ ರಾಜ್ಯಗಳಲ್ಲಿ ಜೀವನೋಪಾಯಕ್ಕಾಗಿ ಏನೂ ಇಲ್ಲದೆ ಮುಂಬೈಗೆ ಬರುತ್ತಾರೆ ಮತ್ತು ದ್ರೋಹವೆಸಗುತ್ತಾರೆ. ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡುವ ಅಪಮಾನ. ಏಕೆಂದರೆ ಮೋದಿಯವರು ಪಾಕ್ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದಾಗಿ ವಾಗ್ದಾನ ಮಾಡಿದ್ದಾರೆ. ನಮ್ಮ ರಾಜ್ಯವನ್ನು ಹಳಿಯಲು ಕೆಲವರು ಯಾವ ಮಟ್ಟಕ್ಕೂ ಕೂಡ ಹೋಗಬಹುದು” ಎಂದು ಠಾಕ್ರೆ ಹೇಳಿದ್ದರು.

ಇತ್ತ ಕರ್ನಾಟಕದಲ್ಲಿಯೂ ಕಂಗನಾ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಕಂಗನಾ ರಣಾವತ್ ಟ್ವೀಟ್ ಮಾಡಿದ್ದನ್ನು ಉಲ್ಲೇಖಿಸಿ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...