Homeಮುಖಪುಟಡ್ರಗ್ ಕೇಸ್: ಎನ್‌ಸಿಬಿಯಿಂದ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್‌ ವಿಚಾರಣೆ

ಡ್ರಗ್ ಕೇಸ್: ಎನ್‌ಸಿಬಿಯಿಂದ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್‌ ವಿಚಾರಣೆ

ಕರಿಷ್ಮಾ ಅವರು ಬುಧವಾರ ಎನ್‌ಸಿಬಿ ಕಚೇರಿಗೆ ಬರುವ ಮುನ್ನವೇ ನಿರೀಕ್ಷಿತ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಕೆಯನ್ನು ನವೆಂಬರ್ 7 ರವರೆಗೆ ಬಂಧಿಸದಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.

- Advertisement -
- Advertisement -

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಅವರು ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಕರಿಷ್ಮಾ ನಿವಾಸದ ಮೇಲೆ ದಾಳಿ ನಡೆಸಿದಾಗ 1.7 ಗ್ರಾಂ ಮಾದಕ ವಸ್ತು ವಶಪಡಿಸಿಕೊಂಡಿದ್ದಾಗಿ ಕರಿಷ್ಮಾ ಪ್ರಕಾಶ್ ಅವರನ್ನು ಎನ್‌ಸಿಬಿ ಕರೆಸಿತ್ತು.

ಎನ್‌ಸಿಬಿ, ಕರಿಷ್ಮಾ ಪ್ರಕಾಶ್‌ಗೆ ಸಂಬಂಧಿಸಿರುವ ಮನೆ-ಕಚೇರಿಗಳಲ್ಲಿ ಶೋಧ ನಡೆಸಿ, ಆಕೆಗೆ ಸಮನ್ಸ್ ಜಾರಿಗೊಳಿಸಿತ್ತು. ಶೋಧದಲ್ಲಿ ಎನ್‌ಸಿಬಿ ಅಧಿಕಾರಿಗಳು ಆಕೆಯ ಮನೆಯಿಂದ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದರು. ಏಜೆನ್ಸಿಯ ಸಮನ್ಸ್‌ಗೆ ಉತ್ತರಿಸದೆ ಕರಿಷ್ಮಾ ಪ್ರಕಾಶ್ ನಾಪತ್ತೆಯಾಗಿದ್ದಾರೆ ಎಂದು ಈ ಹಿಂದೆ ಎನ್‌ಸಿಬಿ ಹೇಳಿತ್ತು.

ಕರಿಷ್ಮಾ ಅವರು ಬುಧವಾರ ಎನ್‌ಸಿಬಿ ಕಚೇರಿಗೆ ಬರುವ ಮುನ್ನವೇ ನಿರೀಕ್ಷಿತ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಕೆಯನ್ನು ನವೆಂಬರ್ 7 ರವರೆಗೆ ಬಂಧಿಸದಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.

ಇತ್ತ ಕರಿಷ್ಮಾ ಈಗಾಗಲೇ ಪ್ರತಿಭಾ ಸಂಸ್ಥೆ “ಕ್ವಾನ್‌”(KWAN Talent Management Agency Private Limited) ಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದ್ದರಿಂದ, ಇನ್ನು ಮುಂದೆ ದೀಪಿಕಾ ಪಡುಕೋಣೆ ಜೊತೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಕ್ವಾನ್ ಸಂಸ್ಥೆ ಹೇಳಿದೆ.

“ಕರಿಷ್ಮಾ ಪ್ರಕಾಶ್ ಅವರು ಅಕ್ಟೋಬರ್ 21 ರಂದು ತಮ್ಮ ರಾಜೀನಾಮೆ ನೀಡಿದ್ದಾರೆ. ಆಕೆಗೆ ಈಗ ಕ್ವಾನ್‌ ಅಥವಾ ದೀಪಿಕಾ ಪಡುಕೋಣೆ ಸೇರಿದಂತೆ ಏಜೆನ್ಸಿ ಪ್ರತಿನಿಧಿಸುವ ಯಾವುದೇ ಕಲಾವಿದರೊಂದಿಗೆ ಯಾವುದೇ ಸಂಬಂಧವಿಲ್ಲ. ನಡೆಯುತ್ತಿರುವ ತನಿಖೆಗಳು ಕರಿಷ್ಮಾ ಪ್ರಕಾಶ್ ಅವರ ಮೇಲೆ ನಡೆಯುತ್ತಿವೆ” ಕ್ವಾನ್‌ನ ಸಹ ಸಂಸ್ಥಾಪಕ ಮತ್ತು ಸಿಇಒ ವಿಜಯ್ ಸುಬ್ರಮಣ್ಯಂ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ…

ಎನ್‌ಸಿಬಿ ಬಾಲಿವುಡ್ ಚಿತ್ರರಂಗಕ್ಕೆ ಸಂಬಂಧಿಸಿರುವ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದು, ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್‌ಪ್ರೀತ್ ಸಿಂಗ್ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಹಲವಾರು ನಟ ನಟಿಯರನ್ನು ಪ್ರಶ್ನಿಸಿದೆ.

ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಿಯಾ ಚಕ್ರವರ್ತಿಯವರ ಫೋನ್‌ನಿಂದ ವಶಪಡಿಸಿಕೊಳ್ಳಲಾಗಿದ್ದ ಎಂದು ಹೇಳಲಾದ “ಡ್ರಗ್ ಚಾಟ್‌ಗಳ” ಹಿನ್ನೆಲೆಯಲ್ಲಿ ಎನ್‌ಸಿಬಿ ತನಿಖೆ ನಡೆಸುತ್ತಿದೆ.

ಅದೇ ಸಮಯದಲ್ಲಿ, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ವಾಟ್ಸಾಪ್ ಗುಂಪಿನಲ್ಲಿ ದೀಪಿಕಾ ಪಡುಕೋಣೆ ಮತ್ತು ಆಕೆಯ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಇಬ್ಬರ ಹೆಸರುಗಳೂ ಬಂದಿದ್ದವು ಎಂದು ಆರೋಪಿಸಿ ಎನ್‌ಸಿಬಿ ಈ ಸೆಪ್ಟೆಂಬರ್‌ನಲ್ಲಿ ಅವರನ್ನು ವಿಚಾರಿಸಿತ್ತು.


ಇದನ್ನೂ ಓದಿ: ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...