Homeಅಂತರಾಷ್ಟ್ರೀಯಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾದಲ್ಲಿ ಸುಮಾರು 3.45 ಮಿಲಿಯನ್ ಮುಸ್ಲಿಮರು ವಾಸಿಸುತ್ತಿದ್ದು, ಅಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 1.1 ರಷ್ಟಿದ್ದಾರೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಸುಮಾರು ಶೇಕಡ 69 ಪ್ರತಿಶತದಷ್ಟು ಮುಸ್ಲಿಂ ಮತದಾರರು ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್ ಪರ ಮತ ಚಲಾಯಿಸಿದ್ದು, ಶೇಕಡ 17 ರಷ್ಟು ಜನರು ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಿದ್ದಾರೆ ಎಂದು ಮುಸ್ಲಿಂ ನಾಗರಿಕ ಸ್ವಾತಂತ್ರ್ಯ ಮತ್ತು ವಕಾಲತ್ತು ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ದೇಶದ ಅತಿದೊಡ್ಡ ಮುಸ್ಲಿಂ ನಾಗರಿಕ ಹಕ್ಕುಗಳು ಮತ್ತು ವಕಾಲತ್ತು ಸಂಘಟನೆ, ಕೌನ್ಸಿಲ್ ಆನ್ ಅಮೇರಿಕನ್-ಇಸ್ಲಾಮಿಕ್ ರಿಲೇಶನ್ಸ್ (CAIR) ತನ್ನ 2020 ಮುಸ್ಲಿಂ ಮತದಾರರ ಅಧ್ಯಕ್ಷೀಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಮಂಗಳವಾರ ಬಿಡುಗಡೆ ಮಾಡಿತು. ದಾಖಲೆಯ ಶೇಕಡ 84 ರಷ್ಟು ಮುಸ್ಲಿಮರು ಮತಚಲಾವಣೆ ಮಾಡಿದ್ದಾರೆ ಎಂದು CAIR ನ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

CAIR ರಾಷ್ಟ್ರೀಯ ಕಾರ್ಯನಿರ್ವಾಹಕ ನಿರ್ದೇಶಕ ನಿಹಾದ್ ಅವದ್, “ರಾಷ್ಟ್ರಪತಿ ಚುನಾವಣೆ ಸೇರಿದಂತೆ ಈ ದೇಶದಾದ್ಯಂತ ಹಲವಾರು ಫಲಿತಾಂಶಗಳ ಮೇಲೆ ಪರಿಣಾಮ ಬೀರುವ ಮುಸ್ಲಿಂ ಸಮುದಾಯದ ಮಹತ್ವದ ಸಾಮರ್ಥ್ಯವನ್ನು ರಾಷ್ಟ್ರೀಯವಾಗಿ ಗುರುತಿಸಲಾಗಿದೆ” ಎಂದು ಹೇಳಿದರು.

ಸ್ಥಳೀಯ, ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಮುಸ್ಲಿಂ ಸಮುದಾಯವು ವಹಿಸುವ ಪಾತ್ರವನ್ನು ನಿರಾಕರಿಸುವಂತಿಲ್ಲ ಎಂದು CAIR ಸರ್ಕಾರಿ ವ್ಯವಹಾರಗಳ ನಿರ್ದೇಶಕ ರಾಬರ್ಟ್ ಎಸ್ ಮೆಕ್‌ಕಾವ್ ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಎಲ್ಲಾ ಅಮೆರಿಕನ್ನರ ನಾಗರಿಕ ಮತ್ತು ಧಾರ್ಮಿಕ ಹಕ್ಕುಗಳನ್ನು ಎತ್ತಿಹಿಡಿಯಲಾಗಿದೆ ಮತ್ತು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ಚುನಾಯಿತ ರಾಜಕಾರಣಿಗಳನ್ನು ಜವಾಬ್ದಾರಿಯುತವಾಗಿ ಆಯ್ಕೆ ಮಾಡುವ ಸಮಯ ಇದು” ಎಂದು ಮೆಕ್‌ಕಾವ್ ಹೇಳಿದರು.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

2016 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್‌ಗೆ ಆಗ ಶೇಕಡ 13 ರಷ್ಟು ಮುಸ್ಲಿಮರ ಬೆಂಬಲ ಇತ್ತು. 2020ರಲ್ಲಿ ಇದು ಶೇಕಡ 4 ರಷ್ಟು ಹೆಚ್ಚಿದ್ದು, ಈಗ 17 ರಷ್ಟಾಗಿದೆ.

ಪ್ಯೂ ರಿಸರ್ಚ್ ಸೆಂಟರ್ ಪ್ರಕಾರ, 2017 ರಲ್ಲಿ ಅಮೇರಿಕಾದಲ್ಲಿ ಸುಮಾರು 3.45 ಮಿಲಿಯನ್ ಮುಸ್ಲಿಮರು ವಾಸಿಸುತ್ತಿದ್ದು, ಅಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 1.1 ರಷ್ಟಿದ್ದಾರೆ.


ಇದನ್ನೂ ಓದಿ: US Election 2020 Results LIVE Updates: ಯಾರು ಗೆಲ್ಲಲಿದ್ದಾರೆ ಅಮೆರಿಕಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...