Homeಅಂಕಣಗಳುಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

- Advertisement -
- Advertisement -

ಗೌರಿ ಮೇಡಂ ಜೊತೆಗಿನ ನನ್ನ ಒಡನಾಟಕ್ಕೆ ಈ ವರ್ಷಕ್ಕೆ 20 ತುಂಬುತ್ತದೆ. ಅದರಲ್ಲಿ ಅವರು ಜೊತೆಗಿಲ್ಲದೇ ಕಳೆದ 3 ವರ್ಷಗಳನ್ನೂ ಸೇರಿಸಿದ್ದೇನೆ, ಏಕೆಂದರೆ ಅವರ ಸಾವಿನ ನಂತರ ಅವರ ವಿಚಾರ, ಆಶಯ, ಗುರಿ ಅವನ್ನು ಮುಟ್ಟಬಹುದಾದ ದಾರಿ ಇವುಗಳೊಂದಿಗೆ ಹಿಂದೆಂದಿಗಿಂತಲೂ ಹೆಚ್ಚು ಬೆಸೆದುಕೊಂಡಿದ್ದೇನೆ. ಇಂಥದೇ ವಿಚಾರಗಳಿಂದ ಕೂಡಿದ ಒಂದಿಡೀ ಉತ್ಸಾಹಿ ತಂಡದೊಂದಿಗೆ ಗುರುತಿಸಿಕೊಂಡಾಗಿನಿಂದ ಜೀವನ ಹೆಚ್ಚು ಪ್ರಸ್ತುತವೆನಿಸುತ್ತದೆ.

ಗೌರಿ ಮೇಡಂ, ಪತ್ರಕರ್ತೆಯಿಂದ ಆಕ್ಟಿವಿಸ್ಟ್ ಆಗಿ ಬೆಳೆದ ಅವರ ಪ್ರಯಾಣದ ಎಲ್ಲ ಹಂತದಲ್ಲಿ ಅವರ ಜೊತೆ ಇದ್ದು ಅವರು ಆ ಬೆಳವಣಿಗೆಯ ಆಳ-ಅಗಲ ಅರ್ಥವಾಗುವಷ್ಟರಲ್ಲಿ ಅವರನ್ನು ಕಳೆದುಕೊಂಡಾಗ, ನನ್ನದೇ ವ್ಯಕ್ತಿತ್ವದ ಒಂದು ಭಾಗ ಕಿತ್ತುಹೋದಂತಾಯ್ತು.

ನಾನು ಲಂಕೇಶ್ ಪತ್ರಿಕೆ ಆಫೀಸ್ ಪಕ್ಕದಲ್ಲಿಯೇ ಇದ್ದ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾಗ ನನ್ನ ಸ್ನೇಹಿತರೊಬ್ಬರು ‘ಲಂಕೇಶ್’ ಸತ್ತ ಸುದ್ದಿ ಹೇಳಿದರು. ಬೆಂಗಳೂರಿಗೆ ಬಂದಾಗಿನಿಂದ ದಿನಾಲು ಲಂಕೇಶ್ ಪತ್ರಿಕೆ ಆಫೀಸ್ ನೋಡುತ್ತಿದ್ದೆನಾದರೂ ಒಳಗೆ ಹೋಗಿರಲಿಲ್ಲ. ಆದರೆ ಲಂಕೇಶ್ ಸಾವು, ಪತ್ರಿಕೆಯ ಭವಿಷ್ಯ ಇವುಗಳ ಬಗ್ಗೆ ಸ್ನೇಹಿತರೊಂದಿಗೆ ಮಾತಾಡುವಾಗ ತಡೆಯಲಾಗದೆ ಒಂದು ದಿನ ಕಾರಣವಿಲ್ಲದೇ ‘ಲಂಕೇಶ್ ಪತ್ರಿಕೆ’ ಆಫೀಸಿಗೆ ಹೋದೆ. ಪತ್ರಿಕೆ ಆಫೀಸಿನ ಮೆಟ್ಟಿಲುಗಳೇರಿದಾಗ ಎದುರಿಗೇ ಇರುವ ಒಂದು ಸಣ್ಣ ರೂಮಿನಲ್ಲಿ ಗೌರಿ ಹಣೆಗೆ ಕೈಹಚ್ಚಿ ಕುಳಿತಿದ್ದರು. ಒಳಗೆ ಹೋಗಿ ನನ್ನ ಪರಿಚಯ ಮಾಡಿಕೊಂಡೆ. ಅಂದಿನ ನನ್ನ ಸಣಕಲ ದೇಹ, ಶಾರ್ಟ್ ಹೇರ್‍ಕಟ್ ನೋಡಿ ಅವರಿಗೆ ಅದೇನನ್ನಿಸಿತೋ “ಕೂಡು ಮರಿ” ಅಂದರು. ನಂತರ ನನ್ನೂರು, ಕಾಲೇಜು ಎಲ್ಲದರ ಬಗ್ಗೆ ಮಾತಾಡಿದರು. ಆಗ ನಾನು ಕಾಲೇಜಲ್ಲಿದ್ದಾಗಲೇ ಬೆಳಗಿನ ಹೊತ್ತು “ಸಂಜೆವಾಣಿ” ಪತ್ರಿಕೆಯಲ್ಲಿ ಉಪ ಸಂಪಾದಕಳಾಗಿ ಕೆಲಸ ಮಾಡುತ್ತಿದ್ದೆ ಮತ್ತು ಕೆಲವು ಸಣ್ಣ ಕಥೆ, ಲೇಖನ ಎಲ್ಲಾ ಬರೆದಿದ್ದೆ. ನನ್ನ ಬ್ಯಾಗಿನಲ್ಲಿ ಕೆಲವೊಂದನ್ನು ಅಂದು ತೋರಿಸಿದೆ. ಅವರು ಒಂದುಕ್ಷಣ ಬಹಳ ಖುಷಿ ಪಟ್ಟು ಒಳಗಡೆ ಇದ್ದ ಚಂದ್ರೇಗೌಡರನ್ನ ಕರೆದು ತೋರಿಸಿದರು. ಗೌಡರೂ ಓದಿ ‘ಚಂದ ಬರಿದೀಯವ್ವಾ’ ಅಂದಾಗ ಗೌರಿ “ಇದನ್ನ ನೋಡಿದರೆ ಹೈಸ್ಕೂಲ್ ಹುಡುಗಿ ಹಂಗ ಕಾಣ್ತದ ಅಂತ ನಕ್ಕು” ನಮ್ಮೂರ ಕಡೆ ಪ್ರೀತಿಯಿಂದ ಚಿಕ್ಕವರನ್ನು ಅದು ಇದು ಅಂತ ಕರೀತಾರ ಬೇಜಾರ ಮಾಡ್ಕೋ ಬ್ಯಾಡರಿ ಅಂದರು. ಅವತ್ತಿನ ನಮ್ಮ ಮೊದಲ ಭೇಟಿ ಸುಮಾರು ಒಂದೂವರೆ ಗಂಟೆ ನಡೆಯಿತು. ಒಂದೆರಡು ಸಣ್ಣಕತೆ ಬರೆದುಕೊಂಡು ಬಾ ಎಂದು ಗೌರಿ ಹೇಳಿದಾಗ ಅತೀ ಸಂಭ್ರಮದಿಂದ ಅಲ್ಲಿಂದ ಬಂದಿದ್ದೆ. ಅದ್ಯಾವತ್ತೂ ಮೊದಲ ಭೇಟಿ ಅನಿಸಲೇ ಇಲ್ಲ. ಅಷ್ಟೊಂದು ಆತ್ಮೀಯತೆ, ಸ್ನೇಹ ಅವರಲ್ಲಿತ್ತು.

ಅಂದಿನಿಂದ ಶುರುವಾದ ಗೌರಿ ಜೊತೆಗಿನ ಒಡನಾಟ ನಿರಂತರವಾಗಿದೆ. ಇಂಗ್ಲಿಷ್ ಜರ್ನಲಿಸಂದಿಂದ ಕನ್ನಡಕ್ಕೆ ಒಗ್ಗಿಕೊಳ್ಳುವಲ್ಲಿ ಅವರು ಪಡುತ್ತಿದ್ದ ಪ್ರಯತ್ನಕ್ಕೆ, ಪತ್ರಿಕೆ ನಿರ್ವಹಿಸಲು ಹಣಕಾಸಿಗಾಗಿ ಗೌರಿ ಪಡುತ್ತಿದ್ದ ಕಷ್ಟ ನೋಡಿದ ಮೇಲೂ, ನಾವೊಂದಿಷ್ಟು ಜನ ಪತ್ರಿಕೆ ಮಾಡುವ ಸಾಹಸಕ್ಕೆ ಕೈಹಾಕಿ ಮೇಡಂ ಸಲಹೆ ಕೇಳಲು ಆಫೀಸಿಗೆ ಹೋಗಿ ಹಗುರಾಗಿ ಬೈಸಿಕೊಂಡು ಬಂದಿದ್ದೆವು. “ನನ್ನಪ್ಪನ ಹೆಸರು ಇದ್ದೂ, ರೆಡಿಮೇಡ್ ಆಫೀಸೂ ಇದ್ದು ನಾನೇ ಒದ್ದಾಡ್ತಾ ಇದ್ದಿನಿ, ಈಗ ತಾನೆ ಡಿಗ್ರಿ ಮುಗಿಸೀರಿ ನಿಮಗ್ಯಾಕೆ ಈ ಉಸಾಬರಿ” ಅಂದರೂ ಕೇಳುವ ವಯಸ್ಸಲ್ಲವಲ್ಲ. ಸ್ನೇಹಿತನ ಪತ್ರಿಕೆಯ ಹುಮ್ಮಸ್ಸಿಗೆ ನಾವೆಲ್ಲ ಭರವಸೆಯ ಮಳೆ ಸುರಿಸಿ ಹಂಗೂಹಿಂಗೂ ಒಂದುವರ್ಷ ಬಹಳ ಚೆನ್ನಾಗಿ ಪತ್ರಿಕೆ ನಡೆಸಿ, ಹಣಕಾಸಿನಲ್ಲಿ ಕೈಸುಟ್ಟ ಮೇಲೆ ಅದನ್ನು ನಿಲ್ಲಿಸಿ, ನಿಯತ್ತಿನಿಂದ ವೃತ್ತಿ ಜೀವನ ಶುರುಮಾಡಿಕೊಂಡಿವಿ. ಗೌರಿ ಮೇಡಂ ಜೊತೆ ಪ್ರತಿಯೊಂದು ಧರಣಿ, ಸತ್ಯಾಗ್ರಹ, ಎಲ್ಲ ಕಡೆ ಹೋಗುವುದು ಮಾತ್ರ ಹಾಗೇ ಮುಂದುವರೆದು ಅವರ ಲಂಕೇಶ್ ಪತ್ರಿಕೆ ಪ್ರಯಾಣ ಮುಗಿದು “ಗೌರಿ ಲಂಕೇಶ್” ಶುರುವಾದಾಗ ಉದ್ಘಾಟನಾ ಸಮಾರಂಭದಲ್ಲಿ ನಮ್ಮದೇ ಪತ್ರಿಕೆ ಶುರುವಾದಂಥ ಸಂಭ್ರಮದಲ್ಲಿ ಓಡಾಡಿದ್ದೆವು. ಅಲ್ಲಿಂದ ಮುಂದಿನ ಪ್ರಯಾಣ ಮಾತ್ರ ಬಹಳ ಜವಾಬ್ದಾರಿಯಿಂದ ಕೂಡಿದ್ದಾಗಿತ್ತು.

ಕೋಮು ಸೌಹಾರ್ದ, ಅಲ್ಪಸಂಖ್ಯಾತ ಮತ್ತು ಲೈಂಗಿಕ ಶೋಷಿತರ ಹಕ್ಕುಗಳು, ಬಲಪಂಥ ವಿರೋಧ ಹೀಗೆ ಹಲವು ಹೋರಾಟಗಳಲ್ಲಿ ಭಾಗಿಯಾಗಿ, ಗೌರಿ ಅವರಲ್ಲಿ ಒಬ್ಬರಾಗಿ ಬೆರೆಯುತ್ತಾ ಹೋದೆವು. ಎಲ್ಲ ದಮನಿತರು ಒಂದೇ ಸೂತ್ರದಲ್ಲಿ ಸೇರಿಕೊಂಡವರು ಎಂಬ ಸೂಕ್ಷ್ಮ ಅಂಶವನ್ನು ಅರಿತಿದ್ದ ಗೌರಿ ಆ ಸೂತ್ರಗಳಲ್ಲಿ ಹಾದು ಹೊಕ್ಕರು. ಟೌನ್‍ಹಾಲ್ ಮೆಟ್ಟಿಲಮೇಲೆ ಕೂಡುವಷ್ಟೇ ಸಹಜವಾಗಿ ಕಂಡ ಹಳ್ಳಿಹಳ್ಳಿಗೆ ಹೋಗಿ ಬಂದರು. ಶೃಂಗೇರಿಯಲ್ಲೊಮ್ಮೆ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೋದಾಗ ಮಳೆಗಾಲದ ಮಲೆನಾಡನ್ನು ನೋಡಿ ನನಗೆ ವಿಚಿತ್ರವಾದ ಅನುಭವ. ಒಂದು ಕಡೆ ಜೀಪ್ ನಿಲ್ಲಿಸಿ ಗುಡ್ಡದಲ್ಲಿ ಹೋಗುವಾಗ ಗೌರಿ ಮೇಡಂ ಮತ್ತು ಇತರರ ಮಾತುಗಳನ್ನೇ ಕೇಳುತ್ತಾ ಹೋದ ಅನುಭವ ಮಾತ್ರ ಮರೆಯಲು ಸಾಧ್ಯವಿಲ್ಲ. ವಾಪಸ್ಸು ಬಂದು ನಿಂತಾಗ ಗೌರಿ ಮೇಡಂ ತಮಗೆ ಅಂಟಿಕೊಂಡು ರಕ್ತ ಹೀರುತ್ತಿದ್ದ ಜಿಗಣೆಗಳನ್ನು ಕಿತ್ತಲು ಹೇಳಿದಾಗ ನನ್ನ ಕೈ ನಡುಗುತಿತ್ತು. ಕಿತ್ತಿದಾಗ ಹರಿದ ರಕ್ತ ನೋಡಿ ಹೌಹಾರಿದ್ದೆ. ಗೌರಿ ನಕ್ಕು ಎಲ್ಲರಿಗೂ ಹೇಳಿದ್ದರು “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ” ಅಂತ.

ಜರ್ನಲಿಸ್ಟ್ ಗೌರಿ ಆಕ್ಟಿವಿಸ್ಟ್ ಆಗುವಷ್ಟರಲ್ಲಿ ಅವರ ಜೊತೆ ನಾನೂ ವಿದ್ಯಾರ್ಥಿ ದೆಸೆಯಿಂದ ಬೆಳೆದು ವಕೀಲಳಾಗಿ ಮುಂದೆ ಅವರದೇ ಪತ್ರಿಕೆಯಲ್ಲಿ ಅಂಕಣಕಾರಳಾಗಿ, ಕಾನೂನು ವಿಷಯಗಳಲ್ಲಿ ಅವರಿಗೆ ಆಗಾಗ ಸಲಹೆ ನೀಡುತ್ತ, ಅದೇ ಸಲುಗೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಕಾಮೆಂಟ್, ಟ್ರೋಲ್ ಮಾಡಿದವರಿಗೆ ಪ್ರತಿಕ್ರಿಯಿಸಿದಾಗ ಬೈಯುತ್ತಿದ್ದೆ. ಅದೊಂದು ನೆನಪುಗಳ ಸರಮಾಲೆ.

ಗೌರಿಯನ್ನು ಕೊಂದು ಅವರ ವಿಚಾರಗಳನ್ನು ನಾಶ ಮಾಡುತ್ತೇವೆ ಎಂದುಕೊಂಡವರಿಗೆ ಇಂದು ಆ ಹೆಸರಿನ ಹಿಂದೆ ಇರುವ ಸಮಾನ ಮನಸ್ಕರ ದಂಡು ನೋಡಿ ಗಾಬರಿ ಆಗಬೇಕು. ಗೌರಿ ಮುಗಿದಿಲ್ಲ, ಅವರಿನ್ನೂ ಬೆಳೆಯುತ್ತಾರೆ, ನಾವೂ ಬೆಳೆಯುತ್ತೇವೆ. ಜೊತೆಜೊತೆಯಾಗಿ.


ಇದನ್ನೂ ಓದಿ: ಗೌರಿ ಕಾರ್ನರ್: ಗೌರಿ ಲಂಕೇಶರ ಮೇಲೆ ಮತ್ತೆ ನೀಚಮಟ್ಟದ ದಾಳಿ- ನಾವು ಪ್ರತಿಕ್ರಿಯೆ ನೀಡುವುದು ಸರಿಯೇ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...