Homeಬಹುಜನ ಭಾರತಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ...

- Advertisement -
- Advertisement -

ಚವಡರ್ ಕೆರೆಯ ನೀರನ್ನು ಮುಟ್ಟುವ ಮಹಾಡ್ ಸತ್ಯಾಗ್ರಹದ ಸಂದರ್ಭದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ಇತಿಹಾಸದ ಅಳಿಸಲಾಗದ ಘಟನೆ.

ಶೂದ್ರ-ಚಾಂಡಾಲ-ಮಹಿಳೆಯರನ್ನು ಅಮಾನವೀಯವಾಗಿ ಕಂಡು ಅವರ ಮೇಲೆ ಅಮಾನುಷ ಕಟ್ಟುಕಟ್ಟಳೆಗಳ ವಿಧಿಸಿರುವ ಕೃತಿ ಮನುಸ್ಮೃತಿ. ಕೌನ್ ಬನೇಗಾ ಕರೋಡಪತಿ ಎಂಬ ಶೀರ್ಷಿಕೆಯ ಜನಪ್ರಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸುಟ್ಟು ಹಾಕಿದ ಗ್ರಂಥ ಯಾವುದು ಎಂಬ ಪ್ರಶ್ನೆಯನ್ನು ಕೆಲ ದಿನಗಳ ಹಿಂದೆ ಕೇಳಲಾಗುತ್ತದೆ. ಈ ಪ್ರಶ್ನೆ ಕೇಳುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಕಾರ್ಯಕ್ರಮದ ನಿರೂಪಕ ಅಮಿತಾಭ್ ಬಚ್ಚನ್ ಅವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ.

ಹಾಗಿದ್ದರೆ ನೂರಾರು ವರ್ಷಗಳಿಂದ ಈ ದೇಶದ ತಳಸಮುದಾಯಗಳ ಕೋಟ್ಯಂತರ ಜನರನ್ನು ಪಶುಪ್ರಾಣಿಗಳಿಗಿಂತಲೂ ಕಡೆಯಾಗಿ ನಡೆಸಿಕೊಂಡು ಬರಲಾಗಿದೆ. ತಲೆಮಾರುಗಳಿಂದ ಅವರಲ್ಲಿ ಹೆಪ್ಪುಗಟ್ಟಿರುವ ನೋವು ಅವಮಾನದ ವಿಷಯವೇನು, ಅವುಗಳ ಕುರಿತು ಯಾರ ಮೇಲೆ ಎಫ್.ಐ.ಆರ್. ಹಾಕಬೇಕು ಎಂಬ ಪ್ರಶ್ನೆ ಕೇಳಿದರೆ ಉತ್ತರ ಹೇಳುವವರು ಯಾರು? ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟದ್ದು ವಾಸ್ತವ ಅಲ್ಲವೇ?

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

ಇತ್ತೀಚಿನ ವರ್ಷಗಳಲ್ಲಿ ಅಂಬೇಡ್ಕರ್ ಅವರನ್ನು ಹಿಂದು ಸಮಾಜದ ವೈದ್ಯರೆಂದೂ, ಸುಧಾರಕರೆಂದೂ ಬಣ್ಣಿಸುವ ಕೃತಿಗಳನ್ನು ಹೊರತರಲಾಗಿದೆ. ‘ವಿದೇಶ ಸಂಚಾರದಲ್ಲೂ ಹಿಂದುತ್ವದ ತಿರುಳು ಮೌಲ್ಯಗಳಿಗೆ ಬದ್ಧರಾಗಿಯೇ ಉಳಿದ ಅವರು ಮದಿರೆ-ಮಾಂಸವನ್ನು ಸೇವಿಸಲಿಲ್ಲ, ಭಗವದ್ಗೀತೆಯನ್ನು ಅವರು ಒಪ್ಪಿಕೊಂಡಿದ್ದರು. ಮನುಸ್ಮೃತಿಯನ್ನು ಸುಟ್ಟರೂ ಆನಂತರ ಮೂಲ ತತ್ವಗಳಲ್ಲಿ ತಮ್ಮ ವಿಶ್ವಾಸವನ್ನು ಪ್ರಕಟಿಸಿದರು’ ಎಂದೆಲ್ಲ ಹೇಳಲಾಗಿದೆ.

2016ರಲ್ಲಿ ಅಂಬೇಡ್ಕರ್ ಅವರ 125ನೆಯ ಜಯಂತಿ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿಯನ್ನು “ಅಖೈರು ಏಕೀಕರಣಕಾರ” (Ultimate Unifier) ಎಂದು ಹಾಡಿ ಹೊಗಳಿ, ‘ಆರ್ಗನೈಸರ್’ ಪತ್ರಿಕೆ ಹಲವು ಲೇಖನಗಳನ್ನು ಪ್ರಕಟಿಸುತ್ತದೆ. ‘ಅವರ ಲೋಕದೃಷ್ಟಿ ಮತ್ತು ಕ್ರಿಯೆಗಳು ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜವನ್ನು ಹೋಲುತ್ತಿದ್ದವು, ಶ್ರಮಿಕರ ಹಕ್ಕುಗಳನ್ನು ಬೆಂಬಲಿಸಿದವರು, ಬ್ರಾಹ್ಮಣ್ಯದ ವಿರೋಧಿಯೇ ವಿನಾ ಬ್ರಾಹ್ಮಣರ ವಿರೋಧಿಯಲ್ಲ, ಕಾಲಾತೀತ ನಾಯಕ’ ಎಂದೆಲ್ಲ ಈ ಲೇಖನಗಳಲ್ಲಿ ಅವರನ್ನು ಕೊಂಡಾಡಲಾಯಿತು.

ಹಿಂದೂ ಧರ್ಮದ ಜೀವವಿರೋಧದ ಅಂತರಾಳವನ್ನು ಮತ್ತು ಅದರ ಜಾತಿವ್ಯವಸ್ಥೆಯ ಕ್ರೌರ್ಯವನ್ನು ತಮ್ಮ ಕಡೆಯ ಉಸಿರಿನ ತನಕ ಜಾಲಾಡಿದರು ಬಾಬಾ ಸಾಹೇಬರು. ಬೆಕ್ಕುಗಳು ನಾಯಿಗಳು ಅಸ್ಪೃಶ್ಯರ ಎಂಜಲು ತಿನ್ನುತ್ತವೆ. ಮಕ್ಕಳ ಮಲವನ್ನೂ ತಿನ್ನುತ್ತವೆ. ಇದೇ ನಾಯಿ ಬೆಕ್ಕುಗಳು ಸ್ಪೃಶ್ಯರ ಮನೆಯನ್ನು ಪ್ರವೇಶಿಸಬಹುದು. ಹಾಗೆ ಪ್ರವೇಶಿಸಿದರೆ ಮೈಲಿಗೆಯಿಲ್ಲ. ಈ ಪ್ರಾಣಿಗಳನ್ನು ಸ್ಪೃಶ್ಯರು ಮುಟ್ಟುತ್ತಾರೆ, ಅಪ್ಪಿ ಮುದ್ದಾಡುತ್ತಾರೆ. ಅವು ಉಣ್ಣುವ ತಟ್ಟೆಗೆ ಬಾಯಿ ಹಾಕಿದರೂ ಅವರಿಗೆ ತಕರಾರಿಲ್ಲ. ಯಾವುದೋ ಚಾಕರಿಗೆಂದು ಮನೆಯ ಹೊರಗೆ ನಿಲ್ಲುವ ಅಸ್ಪೃಶ್ಯನನ್ನು ಕಂಡ ಸವರ್ಣೀಯ ಗದರುತ್ತಾನೆ- ದೂರ ನಿಲ್ಲು, ಮಗುವಿನ ಮಲವನ್ನು ಬಾಚಿ ಎಸೆಯುವ ಬೋಕಿ ಬಿಲ್ಲೆಯನ್ನು ಅಲ್ಲಿ ಇಡಲಾಗಿದೆ. ಅದನ್ನೂ ಮುಟ್ಟಿ ಮೈಲಿಗೆ ಮಾಡುತ್ತೀಯೇನು? ಎಂಬ ಹೃದಯವಿದ್ರಾವಕ ಸಾಲುಗಳನ್ನು ಬಾಬಾಸಾಹೇಬರು ಮೂಕನಾಯಕದ 1920ರ ಆಗಸ್ಟ್ ಸಂಚಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

ಅಸ್ಪೃಶ್ಯತೆಯು ಮೊದಲು ಅಸ್ಪೃಶ್ಯರನ್ನು ಸರ್ವನಾಶ ಮಾಡಿದೆ. ನಂತರ ಹಿಂದೂ ಸವರ್ಣೀಯರನ್ನು ಸರ್ವನಾಶ ಮಾಡಿದೆ. ಅಂತಿಮವಾಗಿ ಅದು ಇಡೀ ದೇಶವನ್ನೇ ನಾಶ ಮಾಡಿದೆ… ಹಿಂದೂ ಧರ್ಮದಲ್ಲಿ ನಿಮ್ನ ವರ್ಗಗಳಿಗೆ ಗೌರವ, ಸಮಾನತೆ, ನ್ಯಾಯ ಸಿಗದೆ ಹೋದರೆ ಇವುಗಳು ಎಲ್ಲಿ ಸಿಗುತ್ತವೆಯೇ ಅಲ್ಲಿಗೆ ಅವರು ಹೋಗುವುದು ಹೇಗೆ ತಾನೆ ತಪ್ಪಾಗುತ್ತದೆ ಎಂಬ ಅಂಬೇಡ್ಕರ್ ಪ್ರಶ್ನೆಗೆ ಸಂಬಂಧಪಟ್ಟವರಿಂದ ಸಮಜಾಯಿಷಿ ಈಗಲೂ ದೊರೆತಿಲ್ಲ.

ಪ್ರಗತಿಪರ ಹಿಂದು ಸಂಹಿತೆ ವಿಧೇಯಕಗಳನ್ನು (Hindu Code Bill) ಬಲಪಂಥೀಯ ಒತ್ತಡದ ಕಾರಣ ವಿಳಂಬಗೊಳಿಸಲಾಗುತ್ತಿದೆ ಎಂದು ಪ್ರತಿಭಟಿಸಿ ಬಾಬಾ ಸಾಹೇಬರು 1951ರಲ್ಲಿ ನೆಹರೂ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಾರೆ. ಬಲಪಂಥೀಯ ಶಕ್ತಿಗಳು ಮತ್ತು ಕಾಂಗ್ರೆಸ್ಸಿನ ಪ್ರಬಲ ವರ್ಗವೊಂದು ಈ ಸುಧಾರಣೆಗಳನ್ನು ವಿರೋಧಿಸಿರುತ್ತದೆ. ಸ್ವಾತಂತ್ರ್ಯೋತ್ತರ ಭಾರತದ 70 ವರ್ಷಗಳಲ್ಲಿ ಬಾಬಾ ಸಾಹೇಬರ ಕುರಿತು ಕಟ್ಟರ್‌ವಾದಿ ಬಲಪಂಥೀಯ ಶಕ್ತಿಗಳು ತಮ್ಮ ನಿಲುವನ್ನು ಹೇಗೆಲ್ಲ ಬದಲಿಸುತ್ತ ಬಂದಿದೆ ಎಂಬುದನ್ನು ಇತಿಹಾಸಕಾರ ರಾಮಚಂದ್ರ ಗುಹಾ ಪುರಾವೆ ಸಹಿತ ನಿಚ್ಚಳವಾಗಿ ದಾಖಲಿಸಿದ್ದಾರೆ.

ಒಂದೆಡೆ ಅಂಬೇಡ್ಕರ್ ವಿಚಾರಗಳನ್ನು ಕಡೆಗಣಿಸಿ ಮತ್ತೊಂದೆಡೆ ಅವರ ಹೆಸರನ್ನು ತಲೆ ಮೇಲೆ ಹೊತ್ತು ಮೆರೆಸುತ್ತಿದ್ದೇವೆಂಬ ಇಬ್ಬಗೆಯ ಆಚರಣೆಯ ಅರ್ಥವೇನು ಎಂಬುದನ್ನು ಕಂಡುಕೊಳ್ಳಬೇಕಿದೆ.


ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...