Homeಮುಖಪುಟ’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

ನಾವು ಅವರ ಸಿದ್ಧಾಂತದ ವಿರುದ್ಧ, ಅವರ ಆಲೋಚನೆಗಳ ವಿರುದ್ಧ ಹೋರಾಡುತ್ತೇವೆ, ಅವರ ಆಲೋಚನೆಗಳನ್ನು ನಾವು ಸೋಲಿಸುತ್ತೇವೆ -ರಾಹುಲ್ ಗಾಂಧಿ

- Advertisement -
- Advertisement -

ಚುನಾವಣೆಗಳಲ್ಲಿ ಬಳಸಿದ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಮತ್ತು ಭಾರತೀಯ ಮಾಧ್ಯಮಗಳ ಬಗ್ಗೆ ಮತ್ತೊಂದು ಹೊಸ ವ್ಯಾಖ್ಯಾನ ನೀಡಿ ಬಿಹಾರದ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ

EVM-ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಅಂದ್ರೆ MVM -ಮೋದಿ ವೋಟಿಂಗ್ ಮಷಿನ್ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜೊತೆಗೆ ಎಂವಿಎಂ ಎಂದರೆ, ಮೋದಿಜಿ ಅವರ ಮೀಡಿಯಾ ಎಂದೂ ಹೇಳಿದ್ದಾರೆ.

ಇಂದು ಬಿಹಾರದ ಅರಾರಿಯಾದಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿ, “ಅದು ಎಂವಿಎಂ (ಮೋದಿ ವೋಟಿಂಗ್ ಮಷಿನ್) ಅಥವಾ ಮೋದಿ ಜಿ ಕಾ ಮೀಡಿಯಾ (ಮೋದಿಯ ಮಾಧ್ಯಮ) ಆಗಿರಲಿ, ನಾನು ಅವರಿಗೆ ಹೆದರುವುದಿಲ್ಲ.  ಸತ್ಯವೇ ಸತ್ಯ, ನ್ಯಾಯವೇ ನ್ಯಾಯ” ಎಂದಿದ್ದಾರೆ.

’ನಾನು ಅವರ ಸಿದ್ಧಾಂತದ ವಿರುದ್ಧ ಯುದ್ಧವನ್ನು ಮಾಡುತ್ತಿದ್ದೇನೆ. ನಾವು ಅವರ ಆಲೋಚನೆಗಳ ವಿರುದ್ಧ ಹೋರಾಡುತ್ತೇವೆ, ಅವರ ಆಲೋಚನೆಗಳನ್ನು ನಾವು ಸೋಲಿಸುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

2019 ರಲ್ಲಿ ಕೂಡ ರಾಹುಲ್ ಗಾಂಧಿ ಇವಿಎಂ ದುರುಪಯೋಗದ ಬಗ್ಗೆ ಆರೋಪಿಸಿದ್ದರು. ಜೊತೆಗೆ ಚುನಾವಣಾ ಆಯೋಗವು ಮೋದಿ ಮತ್ತು ಅವರ ಗ್ಯಾಂಗ್‌ಗೆ ಮೋದಲೇ ಶರಣಾಗಿತ್ತು ಎಂದಿದ್ದರು.

ರ್‍ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, “ನರೇಂದ್ರ ಮೋದಿ ಅವರು ತಮ್ಮ ಸಭೆಗಳಲ್ಲಿ ನನ್ನ ಬಗ್ಗೆ ಅಹಿತಕರ ಸಂಗತಿಗಳನ್ನು ಹೇಳುತ್ತಾರೆ. ಹೆಚ್ಚು ದ್ವೇಷವನ್ನು ಹರಡಲು ಅವರು ಪ್ರಯತ್ನಿಸುತ್ತಾರೆ. ಆದರೆ, ನಾನು ಯಾವಾಗಲೂ ಪ್ರೀತಿಯನ್ನು ಹರಡಲು ಪ್ರಯತ್ನಿಸುತ್ತೇನೆ. ದ್ವೇಷದಿಂದ ದ್ವೇಷವನ್ನು ಸೋಲಿಸಲು ಸಾಧ್ಯವಿಲ್ಲ, ಬದಲಿಗೆ ಪ್ರೀತಿಯಿಂದ ಮಾತ್ರ ಸಾಧ್ಯ” ಎಂದಿದ್ದಾರೆ.

“ಇಂದು ಯುವಕರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಾರ್ವಜನಿಕ ಸಭೆಗಳಲ್ಲಿ ಅವರೇ ಭರವಸೆ ನೀಡಿದ್ದ ಉದ್ಯೋಗಗಳ ಬಗ್ಗೆ ಕೇಳಿದರೆ ಅವರು ಬೆದರಿಕೆ ಹಾಕುತ್ತಾರೆ. ಯುವಜನತೆಯನ್ನು ಸ್ಥಳದಿಂದ ಓಡಿಸುತ್ತಾರೆ ಮತ್ತು ಅವರ ಮೇಲೆ ಹಲ್ಲೆ ನಡೆಸುತ್ತಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ನಿನ್ನೆ(ನ.3) ಮಧುಬನಿ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಲ್ಲು ಮತ್ತು ಈರುಳ್ಳಿ ಎಸೆದು ಅಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿತ್ತು.


ಇದನ್ನೂ ಓದಿ: ಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...