Homeಅಂತರಾಷ್ಟ್ರೀಯಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಪಾಕ್: ಉದ್ರೇಕಿತರಿಂದ ಹಿಂದೂಗಳ ಮೇಲೆ ದಾಳಿ; ದೊಡ್ಡ ಅಪಾಯ ತಡೆದ ಮುಸ್ಲಿಂ ಕುಟುಂಬಗಳು!

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು

- Advertisement -
- Advertisement -

ಉದ್ರೇಕಿತ ಜನಸಮೂಹವೊಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹಿಂದೂ ದೇವಾಲಯವೊಂದನ್ನು ಧ್ವಂಸಗೊಳಿಸಿದೆ. ಅದು 300 ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದು, ಆದರೆ ಮುಸ್ಲಿಮರು ತಮ್ಮ ನೆರೆಹೊರೆಗೆ ಪ್ರವೇಶಿಸದಂತೆ ಆ ಗುಂಪನ್ನು ತಡೆದರು ಎಂದು ಮಾಧ್ಯಮ ವರದಿ ತಿಳಿಸಿದೆ.

ಶೀತಲ್ ದಾಸ್ ಕಾಂಪೌಂಡ್‌ನಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ 300 ಹಿಂದೂ ಮತ್ತು 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹಲವಾರು ಪುರುಷರು ಕಾಂಪೌಂಡ್‌ನ ಏಕೈಕ ಗೇಟ್‌ನ ಹೊರಗೆ ಒಟ್ಟುಗೂಡಿದ್ದರು ಮತ್ತು ಅವರಲ್ಲಿ ಅನೇಕರು ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಉದ್ದೇಶಿಸಿದ್ದರು” ಎಂದು ನೆರೆಹೊರೆಯ ನಿವಾಸಿಗಳು ಹೇಳಿದರು.

“ಆದಾಗ್ಯೂ, ಕಾಂಪೌಂಡ್ ಮತ್ತು ಅದರ ಸುತ್ತಮುತ್ತ ವಾಸಿಸುವ ಮುಸ್ಲಿಂ ಕುಟುಂಬಗಳು ಉದ್ರೇಕಿತ ಜನಸಮೂಹವನ್ನು ಆ ಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಮುಂದಾಗಿದ್ದರು. ಪೊಲೀಸರು ಸಹ ಅವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದರು” ಎಂದು ಅನಾಮಧೇಯ ಹಿಂದೂ ವ್ಯಕ್ತಿಯೊಬ್ಬರು ಹೇಳಿದರು.

ಇದನ್ನೂ ಓದಿ: ವಿಜಯವಾಡದಲ್ಲಿ ತಲೆಯೆತ್ತಲಿದೆ 125 ಅಡಿಯ ಅಂಬೇಡ್ಕರ್ ಕಂಚಿನ ಪ್ರತಿಮೆ!

ಅವರು ಕಾಂಪೌಂಡ್‌ನ ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡಲು ಬಯಸಿದ್ದರು. ಆದರೆ ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದರು. ಆದಾಗ್ಯೂ, ಇತರ ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಸಮಯದಲ್ಲಿ ಮೂರು ವಿಗ್ರಹಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

“ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ಉದ್ರೇಕಿತ ಜನಸಮೂಹದ ದಾಳಿಯನ್ನು ತಡೆದಿದ್ದು ಈ ಪ್ರದೇಶದ ಮುಸ್ಲಿಂ ಕುಟುಂಬಗಳು. ಮುಸ್ಲಿಂ ಕುಟುಂಬಗಳಿಗಲ್ಲದೇ ಮತ್ತೊಬ್ಬರಿಗೆ ಈ ದಾಳಿಯನ್ನು ತಡೆಯುವು ಅಸಾಧ್ಯವಾಗಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಈ ಘಟನೆಯ ನಂತರ 60 ಕ್ಕೂ ಹೆಚ್ಚು ಹಿಂದೂ ಕುಟುಂಬಗಳು ಮಂಗಳವಾರದ ವೇಳೆಗೆ ನಗರದ ಇತರ ಪ್ರದೇಶಗಳಿಗೆ ಸ್ಥಳಾಂತರಗೊಂಡಿವೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಭಯ ಇನ್ನೂ ಇದೆ. ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತವೆಂದು ಭಾವಿಸುವ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ” ಎಂದು ನಿವಾಸಿಯೊಬ್ಬರು ಹೇಳಿದರು.

ಹಿಂದೂ ಸಮುದಾಯದ ಹಿರಿಯರೊಬ್ಬರು, “ನನ್ನ ಜೀವನದುದ್ದಕ್ಕೂ ಆ ಕಾಂಪೌಂಡ್‌ನಲ್ಲಿ ಬದುಕಿದ್ದೇನೆ. ಆದರೆ ಇದುವರೆಗೂ ಈ ರೀತಿಯ ದಾಳಿಯನ್ನು ನೋಡಿಲ್ಲ” ಎಂದು ಹೇಳಿದರು.

ಮುಸ್ಲಿಂ ಬಹುಸಂಖ್ಯಾತ ಪಾಕಿಸ್ತಾನದ 220 ದಶಲಕ್ಷ ಜನಸಂಖ್ಯೆಯಲ್ಲಿ ಹಿಂದೂಗಳು ಶೇಕಡಾ 2 ರಷ್ಟಿದ್ದಾರೆ. ಹೆಚ್ಚಿನ ಹಿಂದೂಗಳು ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿಯೊಂದು ದೇಶದಲ್ಲಿಯೂ ಅಲ್ಪಸಂಖ್ಯಾತರು ನಿರ್ಬೀತಿಯಿಂದ ಬದುಕುವಂತಾಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...