Homeಮುಖಪುಟಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

ಅಲಿಬಾಗ್ ಪೊಲೀಸರ ತಂಡ, ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ಬಂಧಿಸಲು ಹೋದಾಗ ಮಹಿಳಾ ಪೊಲೀಸ್‌ ಮೇಲೆ ಅರ್ನಾಬ್, ಪತ್ನಿ ಮತ್ತು ಮಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ.

- Advertisement -
- Advertisement -

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2018 ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿಯನ್ನು ಬೆಳಿಗ್ಗೆ ಬಂಧಿಸಲು ಅಲಿಬಾಗ್ ಪೊಲೀಸರ ತಂಡ ಹೋದಾಗ ಈ ಘಟನೆ ನಡೆದಿದೆ.

ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ನಂತರ, ಅರ್ನಾಬ್ ಗೋಸ್ವಾಮಿ ಮತ್ತು ಇತರರ ವಿರುದ್ಧ ಮುಂಬೈನ ಎನ್ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಸ್ 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯ ನಿರ್ವಹಣೆಯಿಂದ ತಡೆದು ಹಲ್ಲೆ), 504 (ಉದ್ದೇಶಪೂರ್ವಕ ಶಾಂತಿ ಕದಡುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೋಲಿಸ್ ವ್ಯಾನ್‌ಗೆ ತಳ್ಳಲ್ಪಟ್ಟಿದ್ದ ಅರ್ನಾಬ್ ಗೋಸ್ವಾಮಿ, ತನ್ನ ಮನೆಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಹೇಳಿಕೊಂಡರು.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

ಈ ಪ್ರಕರಣದಲ್ಲಿ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅರ್ನಾಬ್‌‌ನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದು, ಮುಂಬೈಯಲ್ಲಿ ಅರ್ನಾಬ್ ವಿರುದ್ಧ ಟಿಆರ್‌ಪಿ ಹಗರಣ ತನಿಖೆ ನಡೆಯುತ್ತಿರುವ ಸಮಯದಲ್ಲೇ ಈ ಬಂಧನ ನಡೆದಿದೆ.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

2018 ರಲ್ಲಿ ಅಲಿಬಾಗ್ ಪೊಲೀಸರು ಪ್ರಕರಣ ದಾಖಲಿಸಿದ್ದರಾದರೂ 2019 ರಲ್ಲಿ ಪ್ರಕರಣವನ್ನು ರಾಯಗಡ್ ಪೊಲೀಸರು ಮುಚ್ಚಿದ್ದರು.

2020 ಮೇ ತಿಂಗಳಲ್ಲಿ ಅನ್ವಯ್ ನಾಯಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಸಂಪರ್ಕಿಸಿ, ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ತನಿಖೆ ನಡೆಸಿಲ್ಲ ಎಂದು ದೂರಿದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.

ಅನ್ವಯ್ ನಾಯಕ್ ಕಾನ್ಕಾರ್ಡ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಕಂಪೆನಿಯು ರಿಪಬ್ಲಿಕ್ ಟಿವಿಗೆ ಕೆಲವು ಸೇವೆಗಳನ್ನು ನೀಡಿತ್ತು. ಅನ್ವಯ್ ಅವರ ತಾಯಿ ಸಹ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿದ್ದರು. ಅನ್ವಯ್ ಅವರ ಪತ್ನಿ ಸೂಸೈಡ್ ನೋಟ್‌‌ನಲ್ಲಿ ಇರುವ ಹೆಸರಿನ ಆಧಾರದಲ್ಲಿ ಅರ್ನಾಬ್ ಸೇರಿದಂತೆ ಇತರರ ಮೇಲೆ ಕೇಸು ದಾಖಲಿಸಿದ್ದರು.

ಆ ಸಮಯದಲ್ಲಿ ರಿಪಬ್ಲಿಕ್ ಟಿವಿಯು ತನ್ನ ಬಾಕಿ ಪಾವತಿಯ ಆರೋಪಗಳನ್ನು ರದ್ದುಗೊಳಿಸಿ, ಇದು ದುರುದ್ದೇಶಪೂರಿತ ಅಭಿಯಾನ ಎಂದು ಹೇಳಿತ್ತು. ಒಪ್ಪಂದದ ಪ್ರಕಾರ ಪಾವತಿಸಬೇಕಾದ ಎಲ್ಲಾ ಮೊತ್ತವನ್ನು ರಿಪಬ್ಲಿಕ್ ಟಿವಿ ಕನ್‌ಕಾರ್ಡ್ ಡಿಸೈನ್ಸ್‌‌ಗೆ ಪಾವತಿಸಿದೆ ಎಂದು ಅದು ಹೇಳಿಕೊಂಡಿತ್ತು.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಅರ್ನಾಬ್ ಗೋಸ್ವಾಮಿಯ ಬಂಧನವು ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾಯಿತು. ಬಿಜೆಪಿಯ ಉನ್ನತ ನಾಯಕರು ಇದರ ವಿರುದ್ಧ ಕಿಡಿ ಕಾರಿದ್ದು, ಇದು ಕಾಂಗ್ರೆಸ್ ಮತ್ತು ಶಿವಸೇನೆಯ ಪ್ರಜಾಪ್ರಭುತ್ವವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಇದನ್ನು ಅಘೋಷಿತ ತುರ್ತು ಪರಿಸ್ಥಿತಿ ಎಂದು ಕರೆದಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಶಿವಸೇನೆ, “ಇದು ಪತ್ರಿಕೋದ್ಯಮ ಮತ್ತು ಪತ್ರಕರ್ತರ ಮೇಲಿನ ದಾಳಿಯಲ್ಲ. ಬದಲಿಗೆ ಅವರ ಮೇಲಿನ ವೈಯಕ್ತಿಕ ಆರೋಪಗಳ ಆಧಾರದ ಮೇಲೆ ಆಗಿರುವ ಬಂಧನವಾಗಿದ್ದು, ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸಲಿದೆ” ಎಂದು ಹೇಳಿದೆ.

ಇನ್ನು ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಬಿಜೆಪಿಯವರ ಪ್ರತಿರೋಧಗಳು ಅವಕಾಶವಾದಿತನದ್ದಾಗಿದೆ. ಇವರು ಎಲ್ಲಾ ಪ್ರಕರಣಗಳಲ್ಲೂ ಹೀಗೇ ವರ್ತಿಸುವುದಿಲ್ಲ” ಎಂದು ಬಿಜೆಪಿ ನಾಯಕರ ಕಾಲೆಳೆದಿದೆ.

ಇನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅರ್ನಾಬ್ ಬಂಧನದ ಬಗ್ಗೆ ಪರ-ವಿರೋಧದ ಚರ್ಚೆಗಳು ಭುಗಿಲೆದ್ದಿವೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...