Homeಮುಖಪುಟಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಅತ್ಮಹತ್ಯೆಗೊಳಗಾದ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದರಲ್ಲಿ ಅರ್ನಾಬ್ ಸೇರಿದಂತೆ ಇನ್ನಿಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ.

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೊಸ್ವಾಮಿಯನ್ನು ನಿನ್ನೆ ಮುಂಬೈ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಅನ್ವಯ್ ನಾಯಕ್ 2018 ರಲ್ಲಿ ಬರೆದಿದ್ದರು ಎನ್ನಲಾಗುವ ಆತ್ಮಹತ್ಯಾ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ (80 ಲಕ್ಷ), ಐಕಾಸ್ಟ್ ಎಕ್ಸ್‌ನ ಫಿರೋಜ್ ಶೇಖ್ (4 ಕೋಟಿ) ಮತ್ತು ಸ್ಮಾರ್ಟ್‌ವರ್ಕ್‌ ನಿತಿಶ್ ಸರ್ದಾ (55 ಲಕ್ಷ) ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದರಲ್ಲಿ ಮೂರು ಕಂಪನಿಗಳ ಮಾಲೀಕರು 5.35 ಕೋಟಿ ಹಣ ಪಾವತಿ ಮಾಡದೇ ಇರುವುದರಿಂದ ಈ ಕಠಿಣ ನಿರ್ಧಾರಕ್ಕೆ ಬರುತ್ತಿದ್ದೇವೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

2018 ರಲ್ಲಿ ನಡೆದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದೆ

ಜೊತೆಗೆ, ನಿನ್ನೆ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

2018 ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿಯನ್ನು ಬೆಳಿಗ್ಗೆ ಬಂಧಿಸಲು ಅಲಿಬಾಗ್ ಪೊಲೀಸರ ತಂಡ ಹೋದಾಗ ಈ ಘಟನೆ ನಡೆದಿದೆ.

ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ನಂತರ, ಅರ್ನಾಬ್ ಗೋಸ್ವಾಮಿ ಮತ್ತು ಇತರರ ವಿರುದ್ಧ ಮುಂಬೈನ ಎನ್ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ಸ್ 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯ ನಿರ್ವಹಣೆಯಿಂದ ತಡೆದು ಹಲ್ಲೆ), 504 (ಉದ್ದೇಶಪೂರ್ವಕ ಶಾಂತಿ ಕದಡುವಿಕೆ) ಮತ್ತು 506 (ಕ್ರಿಮಿನಲ್ ಬೆದರಿಕೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...