Homeಮುಖಪುಟಅಕ್ಷಯ್ ಕುಮಾರ್ ನಟನೆಯ 'ಲಕ್ಷ್ಮಿ' ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

'ತಮಿಳಿನ ಕಾಂಚನಾ ಚಿತ್ರದ ಬಾಲಿವುಡ್ ರೀಮೆಕ್ ಚಿತ್ರ 'ಲಕ್ಷ್ಮಿ', ಲವ್ ಜಿಹಾದ್‌ಗೆ ಬೆಂಬಲ ನಿಡುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ' ಹಾಗಾಗಿ ಇದನ್ನು ಬ್ಯಾನ್ ಮಾಡಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ ‘ಲಕ್ಷ್ಮಿ’ ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ ಭಕ್ತರು ಈ ಅಭಿಯಾನವನ್ನು ಹುಟ್ಟುಹಾಕಿದ್ದರು.

ಈ ಚಿತ್ರವು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಎಂಬ ಕಾರಣಕ್ಕೆ ಬ್ಯಾನ್ ಮಾಡಬೇಕು ಎಂಬು ಕೂಗು ಕೇಳಿಬರುತ್ತಿದೆ. ಈ ಚಿತ್ರ ಇದೇ ನವೆಂಬರ್ 9 ರಂದು ಬಿಡುಗಡೆಯಾಗುತ್ತಿದೆ.

 

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ಅರ್ಚನಾ ಘಾನ್ವತ್ ಎಂಬುವವರು ಟ್ವೀಟ್ ಮಾಡಿ, “#LaxmmiBomb ಅನ್ನು ಸ್ವೀಕರಿಸಲಾಗುವುದಿಲ್ಲ! ಅಥವಾ ದೇವತೆ “# ಲಕ್ಷ್ಮಿ” ಹೆಸರು ಸ್ವೀಕಾರಾರ್ಹವಲ್ಲ !!. ಈ ಚಿತ್ರವನ್ನು ಬ್ಯಾನ್ ಮಾಡಿ. ಇದು ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುತ್ತದೆ ಮತ್ತು ಇದು ಲವ್ ಜಿಹಾದ್‌ ಅನ್ನು ಬೆಂಬಲಿಸುತ್ತದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈ ಚಿತ್ರವು ತಮಿಳು ಆವೃತ್ತಿಯಲ್ಲಿ ‘ಕಾಂಚನಾ’, ನಾಯಕ-ರಾಘವ, ನಾಯಕಿ-ಪ್ರಿಯಾ ಆಗಿದ್ದಾರೆ. ಆದರೆ ಹಿಂದಿಯಲ್ಲಿ ನಾಯಕ-ಆಸಿಫ್, ನಾಯಕಿ-ಪ್ರಿಯಾ ಎಂದು ಬದಲಾಗಿದೆ. ಇದು ಕಾಕತಾಳೀಯವಲ್ಲ. ಇದು ಲವ್ ಜಿಹಾದ್‌ ಅನ್ನು ಪ್ರಚಾರ ಮಾಡುವ ಸ್ಪಷ್ಟ ಗುರಿಯನ್ನು ಹೊಂದಿದೆ. ಹಾಗಾಗಿ ಈ ಚಿತ್ರವನ್ನು ಬ್ಯಾನ್ ಮಾಡಿ ಎಂದು ಎಲ್ಲಾ ಹಿಂದೂಗಳಲ್ಲಿಯೂ ನಾನು ಮನವಿ ಮಾಡಿಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಸಖ ವೀರ್ ಎಂಬುವವರು ಟ್ವೀಟ್ ಮಾಡಿ, “ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ‘ಲಕ್ಷ್ಮಿ’ ಚಿತ್ರದ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಲಾಗಿದೆ. ಈಗ ಹಿಂದೂಗಳು ಸಾಂವಿಧಾನಿಕವಾಗಿ ಇದನ್ನು ವಿರೋಧಿಸಲಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಈ ಚಿತ್ರದ ಟೈಟಲ್‌ ಅನ್ನು ಬದಲಾಯಿಸಬೇಕು ಎಂದು ಹಲವರು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಚಿತ್ರ ತಂಡ ‘ಲಕ್ಷ್ಮಿ ಬಾಂಬ್’ ಟೈಟಲ್‌ನಲ್ಲಿ ಬಾಂಬ್ ಅನ್ನು ಸಿಡಿಸಿ ಬರೀ ‘ಲಕ್ಷ್ಮಿ’ ಎಂದು ಮರುನಾಮಕರಣ ಮಾಡಿಕೊಂಡಿತ್ತು. ಇದೀಗ ಈ ಚಿತ್ರಕ್ಕೆ ಮತ್ತೊಂದು ಕಂಟಕ ಎದುರಾಗಿದೆ.

ನವೆಂಬರ್ 9 ರಂದು ತೆರೆಗೆ ಬರಲಿರುವ ಚಿತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಈ ಚಿತ್ರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ ಎಂದು ರಾಜ್ಯ ಕಾರ್ಯಕಾರಿ ಅಧ್ಯಕ್ಷ ರಾಜೇಶ್ ಪವಿತ್ರನ್ ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಭಾವನೆಗಳನ್ನು ಈ ಚಿತ್ರ ಅವಮಾನಿಸಿದೆ. ಈ ಚಿತ್ರದಲ್ಲಿ ನಾಯಕನ ಹೆಸರು ಆಸಿಫ್, ನಾಯಕಿಯ ಹೆಸರು ಪ್ರಿಯಾ ಯಾದವ್ ಆಗಿದೆ. ಚಿತ್ರ “ಲವ್ ಜಿಹಾದ್” ಅನ್ನು ಪ್ರಚಾರ ಪಡಿಸುತ್ತದೆ ಹಾಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಈ ಹಿಂದೆಯೇ ಸರ್ಕಾರಕ್ಕೆ ಕರೆ ನೀಡಿದ್ದರು.

“ಚಲನಚಿತ್ರ ನಿರ್ಮಾಪಕರು ಕೋಮು ಗಲಭೆಗಳನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮೀ ಬಾಂಬ್ ಎಂಬ ಚಲನಚಿತ್ರವನ್ನು ನಿರ್ಮಿಸುವವರು ಎಂದಾದರೂ ತಸ್ಲೀಮಾ ಬಾಂಬ್ ಎಂಬ ಚಿತ್ರ ಮಾಡಲು ಧೈರ್ಯ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ್ದರು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎನ್ನುವ ಅಭಿಯಾನವನ್ನು ಆರಂಭಿಸಲಾಗಿದೆ. ಈ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಅಕ್ಷಯ್ ಕುಮಾರ್ ವಿರುದ್ಧವೂ ಹಲವರು ತಿರುಗಿಬಿದ್ದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಇತ್ತೀಚೆಗೆ ಲವ್ ಜಿಹಾದ್ ಎನ್ನುವ ಪದ ಬಹಳಷ್ಟು ಚಾಲ್ತಿಯಲ್ಲಿದ್ದು, ಈ ಹಿಂದೆ ಇದೇ ಕಾರಣ ನೀಡಿ ತನಿಷ್ಕ್ ಜಾಹೀರಾತನ್ನು ನಿಷೇಧಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ‘ಲವ್ ಜಿಹಾದ್’ ಎಂಬುದು ಎಲ್ಲಿಯೂ ವರದಿಯಾಗಿಲ್ಲ ಎಂದು ಹೇಳಿತ್ತು. ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದಲ್ಲದೆ, “ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಪ್ರಚಾರ ಮಾಡಲು, ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದರು.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...