Homeಅಂತರಾಷ್ಟ್ರೀಯಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

ಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

- Advertisement -
- Advertisement -

ಅಮೆರಿಕಾದ ಹಲವಾರು ರಾಜ್ಯಗಳಲ್ಲಿ ಮತ ಎಣಿಕೆ ಮುಂದುವರೆದಿದೆ. ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರಿಗೆ ಗೆಲುವು ಎನ್ನುವುದು ಫಲಿತಾಂಶವು ಇನ್ನೂ ಸ್ಪಷ್ಟವಾಗಿ ಹೊರಬಿದ್ದಿಲ್ಲ. ಅದು ಪೂರ್ಣಗೊಳ್ಳಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ವರದಿಗಳು ಹೇಳುತ್ತಿವೆ.

ಒಟ್ಟು 538 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಸ್ಪಷ್ಟ ಬಹುಮತಕ್ಕೆ 270 ಸ್ಥಾನಗಳ ಅಗತ್ಯವಿದ್ದು, ನ್ಯೂಯಾರ್ಕ್‌ ಟೈಮ್ಸ್‌ ವರದಿಯ ಪ್ರಕಾರ ಜೋ ಬೈಡೆನ್ 264 ಸ್ಥಾನಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದರೆ, ಟ್ರಂಪ್ 214 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಇನ್ನೂ ಹಲವು ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಇದು ಗೆಲುವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

9 ರಾಜ್ಯಗಳಲ್ಲಿ ಯಾರು ಎಷ್ಟರಲ್ಲಿ ಮೇಲುಗೈ ಸಾಧಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಇಂಡಿಯಾ ಟುಡೆ ವರದಿ ಮಾಡಿದೆ.

ಅಲಾಸ್ಕಾ
ಇಲ್ಲಿ ಟ್ರಂಪ್ ವ್ಯಾಪಕ ಮುನ್ನಡೆ ಹೊಂದಿದ್ದು, ಕೇವಲ 56% ಮತಗಳನ್ನು ಎಣಿಸಲಾಗಿದೆ.

ಅರಿಝೋನಾ
ಇಲ್ಲಿ ಬೈಡೆನ್ ಗಮನಾರ್ಹ ಮುನ್ನಡೆ ಸಾಧಿಸಿದ್ದಾರೆ. ಅಸೋಸಿಯೇಟೆಡ್ ಪ್ರೆಸ್ ಮತ್ತು ಫಾಕ್ಸ್ ನ್ಯೂಸ್ ಈಗಾಗಲೇ ಡೆಮೋಕ್ರಾಟ್ ಗೆದ್ದಿದೆ ಎಂದು ಘೋಷಿಸಿದೆ.

ಜಾರ್ಜಿಯಾ
ಇಲ್ಲಿ ಟ್ರಂಪ್ ಅಲ್ಪ ಮುನ್ನಡೆ ಸಾಧಿಸುತ್ತಿದ್ದಾರೆ. ಆದರೆ ಅಟ್ಲಾಂಟಾದ ಸುತ್ತಮುತ್ತಲಿನ ಹಲವಾರು ದೊಡ್ಡ ಕೌಂಟಿಂಗ್‌ಗಳು ಡೆಮೋಕ್ರಾಟಿಕ್‌ನ ಬೈಡೆನ್‌ನತ್ತ ಒಲವು ಇದೆ ಎಂದು ವರದಿಯಾಗಿದೆ.

ಮಿಚಿಗನ್
ಇಲ್ಲಿ ಬೈಡೆನ್ ಭಾರೀ ಬಹುಮತದಿಂದ ಮುನ್ನಡೆಯಲ್ಲಿದ್ದಾರೆ. ಮಿಚಿಗನ್ ವಿದೇಶಾಂಗ ಕಾರ್ಯದರ್ಶಿ ಜೋಸೆಲಿನ್ ಬೆನ್ಸನ್ ಅವರು ಬುಧವಾರ ರಾತ್ರಿ ರಾಜ್ಯದ ಎಲ್ಲಾ ಮಾನ್ಯ ಮತಪತ್ರಗಳನ್ನು ಎಣಿಕೆ ಮಾಡಿದ್ದಾರೆ ಮತ್ತು ಅಲ್ಲಿನ ಮತಗಳ ಎಣಿಕೆಯನ್ನು ನಿಲ್ಲಿಸಲು ಟ್ರಂಪ್ ಕೋರಿರುವ ಮೊಕದ್ದಮೆ ಕ್ಷುಲ್ಲಕ ಎಂದು ಹೇಳಿದರು.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನೆವಾಡಾ
ಇಲ್ಲಿ ಬೈಡೆನ್ ಮತ್ತು ಟ್ರಂಪ್ ನಡುವಿನ ಮತ ಹಂಚಿಕೆಯ ವ್ಯತ್ಯಾಸ ತೀರಾ ಕಡಿಮೆಯಿದೆ.

ಉತ್ತರ ಕೆರೊಲಿನಾ
ಟ್ರಂಪ್ ಮತ್ತು ಬಿಡೆನ್ ನಡುವಿನ ಅಂತರವು ಶೇಕಡಾ 2 ಕ್ಕಿಂತ ಕಡಿಮೆ ಇದೆ. ಇಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ನಿರೀಕ್ಷಿತ 95% ಮತಗಳ ಎಣಿಕೆ ಮಾಡಲಾಗಿದೆ.

ಪೆನ್ಸಿಲ್ವೇನಿಯಾ
ಇಲ್ಲಿ ಟ್ರಂಪ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ವಿಸ್ಕಾನ್ಸಿನ್
ಇಲ್ಲಿ ಅಭ್ಯರ್ಥಿಗಳ ನಡುವಿನ ಅಂತರವು ಶೇಕಡಾ 1 ಕ್ಕಿಂತ ಕಡಿಮೆ ಇದೆ.


ಇದನ್ನೂ ಓದಿ: ಅಮೆರಿಕಾ ಚುನಾವಾಣೆ: ಭಾರತ ಮೂಲದ ರಾಜ ಕೃಷ್ಣಮೂರ್ತಿ ಪ್ರತಿನಿಧಿಗಳ ಸದನಕ್ಕೆ ಮರು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...