Homeಮುಖಪುಟಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಈ ನಾಲ್ವರು ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

- Advertisement -
- Advertisement -

ಅಮೆರಿಕಾ ಚುನಾವಣೆ ಫಲಿತಾಂಶದಲ್ಲಿ ಎಲ್ಲರ ಗಮನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಜೋ ಬಿಡೆನ್ ಮೇಲೆ ಕೇಂದ್ರಿಕರಿಸಿದೆ. ಆದರೆ ಇತ್ತ ಅಧ್ಯಕ್ಷರ ಆಯ್ಕೆಗೂ ಮುನ್ನ ಖುಷಿ ನೀಡುವ ಮತ್ತಷ್ಟು ಸುದ್ದಿಗಳಿವೆ. ಸಮಾಜದ ಲೈಂಗಿಕತೆ, ವರ್ಣಭೇದ ನೀತಿ, ಇಸ್ಲಾಮೋಫೋಬಿಯಾಗಳ ವಿರುದ್ಧ ಹೋರಾಡುತ್ತಾ, ಟೀಕೆ, ದಾಳಿಗಳನ್ನು ಎದುರಿಸಿದ ನಾಲ್ವರು ಪ್ರಗತಿಪರ ಮಹಿಳೆಯರು ಜಯಗಳಿಸಿದ್ದಾರೆ.

ಹೌದು, ಮಿನ್ನಿಯಾಪೊಲೀಸ್‌ನ ಇಲ್ಹಾನ್ ಒಮರ್, ನ್ಯೂಯಾರ್ಕ್‌ನ ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್, ಮ್ಯಾಸಚೂಸೆಟ್ಸ್‌ನ ಅಯನ್ನಾ ಪ್ರೆಸ್ಲೆ, ಮತ್ತು ಮಿಚಿಗನ್‌ನ ರಶೀದಾ ಟ್ಲೈಬ್ ಎಲ್ಲರೂ  ಮರುಚುನಾವಣೆಯಲ್ಲಿ ವಿಜಯ ಸಾಧಿಸಿದ್ದಾರೆ.

ಈ ನಾಲ್ವರು ಕಾಂಗ್ರೆಸ್ ಮಹಿಳೆಯರು “ಬ್ಲೂ ವೇವ್” 2018 ರ ಮಧ್ಯಂತರ ಚುನಾವಣೆಗಳಲ್ಲಿ ಆಯ್ಕೆಯಾದವರು. ಇವರು ತಮ್ಮ ಬೆಂಬಲಿಗರು ಮತ್ತು ತಮ್ಮದೇ ಗುಂಪುಗಳಲ್ಲಿ “ದಿ ಸ್ಕ್ವಾಡ್” ಎಂದು ಪ್ರಸಿದ್ಧರಾದವರು.

ಇದನ್ನೂ ಓದಿ: ಟ್ರಂಪ್ ನಡೆಸಿದ 18 ರ್ಯಾಲಿಗಳಿಂದ 30 ಸಾವಿರ ಜನರಿಗೆ ಸೋಂಕು, 700 ಸಾವು ಸಾಧ್ಯತೆ: ವರದಿ

ಡೆಮಾಕ್ರಟಿಕ್ ಪಕ್ಷದ ಎಒಸಿ ಎಂದೂ ಕರೆಯಲ್ಪಡುವ ಒಕಾಸಿಯೊ-ಕಾರ್ಟೆಜ್, ರಿಪಬ್ಲಿಕನ್ ಎದುರಾಳಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿ, ನ್ಯೂಯಾರ್ಕ್‌ನ 14 ನೇ ಜಿಲ್ಲೆಯಲ್ಲಿ 68.8% ಮತಗಳೊಂದಿಗೆ ಮರು ಆಯ್ಕೆಯಾಗಿದ್ದಾರೆ. 2018 ರಲ್ಲಿ ಎಒಸಿ ಸದನಕ್ಕೆ ಚುನಾಯಿತರಾದ ಅತ್ಯಂತ ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಎಒಸಿ ತಮ್ಮ ಪ್ರಗತಿಪರ ಸಿದ್ದಾಂತಗಳು ಮತ್ತು ಅಜೆಂಡಾವನ್ನು ಬಹಿರಂಗವಾಗಿ ಮಾತನಾಡಿದ್ದು, ಅವರ ಸಹೋದ್ಯೋಗಿಗಳು ಮತ್ತು ಸಂಪ್ರದಾಯವಾದಿ ಪತ್ರಿಕಾ ಮಾಧ್ಯಮಗಳನ್ನು ಕೆರಳಿಸಿತ್ತು. ಸದ್ಯ 31 ವರ್ಷದ ಒಕಾಸಿಯೊ-ಕಾರ್ಟೆಜ್, 60 ವರ್ಷದ ಕ್ಯಾಥೊಲಿಕ್ ಪ್ರೌಢಶಾಲಾ ಶಿಕ್ಷಕ, 10 ಮಿಲಿಯನ್ ಡಾಲರ್‌ಗಳಿಗೂ ಹೆಚ್ಚು ಹಣ ಸಂಪಾಡಿಸಿರುವ ರಿಪಬ್ಲಿಕನ್ ಅಭ್ಯರ್ಥಿ ಜಾನ್ ಕಮ್ಮಿಂಗ್ಸ್ ಅವರನ್ನು ಸೋಲಿಸಿದ್ದಾರೆ.

ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ 64.6% ಮತಗಳೊಂದಿಗೆ ಮಿನ್ನೇಸೋಟದ 5 ನೇ ಕಾಂಗ್ರೆಸ್ ಜಿಲ್ಲೆಯಲ್ಲಿ ಇಲ್ಹಾನ್ ಒಮರ್ ಗೆಲುವು ಸಾಧಿಸಿದ್ದಾರೆ. ಬಾಲ್ಯದಲ್ಲಿ ಅಂತರ್ಯುದ್ಧದಿಂದ ಪಲಾಯನ ಮಾಡಿದ ಸೊಮಾಲಿ ನಿರಾಶ್ರಿತರಾಗಿದ್ದ ಒಮರ್, ಸದನಕ್ಕೆ ಚುನಾಯಿತರಾದ ಮೊದಲ ಸೊಮಾಲಿ ಅಮೆರಿಕನ್ ಎನಿಸಿಕೊಂಡಿದ್ದಾರೆ.

ಅವರು ತನ್ನ ಜನರ ಬಗ್ಗೆ, ತನ್ನ ಮಣ್ಣಿನ ಬಗ್ಗೆ ಬಹಿರಂಗವಾಗಿ ಮಾತನಾಡುವ ದೊಡ್ಡ ಧ್ವನಿಯಾಗಿದ್ದಾರೆ. ಜನಾಂಗೀಯ ಹಲ್ಲೆ ಮತ್ತು ವಲಸಿಗರ ಮೇಲೆ ನಡೆಯುವ ದಾಳಿಗಳ ಬಗ್ಗೆ ಮಾತನಾಡಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದನ್ನೆ ದಾಳವಾಗಿಸಿ ರಿಪಬ್ಲಿಕನ್ ಅಭ್ಯರ್ಥಿ ಲ್ಯಾಸಿ ಜಾನ್ಸನ್ ವಿರುದ್ಧ ಜಯಗಳಿಸಿದ್ದಾರೆ.

ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

 

ಇನ್ನು ಮ್ಯಾಸಚೂಸೆಟ್ಸ್‌ನ 7 ನೇ ಜಿಲ್ಲೆಯ ಪಾದ್ರಿಯಾಗಿದ್ದ ಸ್ವತಂತ್ರ ಅಭ್ಯರ್ಥಿ ರಾಯ್ ಓವೆನ್ಸ್‌ರನ್ನು 87.5% ಮತಗಳನ್ನು ಪಡೆಯುವ ಮೂಲಕ ಪ್ರೆಸ್ಲೆ ಸೋಲಿಸಿದರು. ಕಪ್ಪು ಹುಡುಗಿಯರ ಮೇಲಾಗುವ ಅನ್ಯಾಯದ ಅಪರಾಧೀಕರಣವನ್ನು ಸರಿಪಡಿಸುವ ಯೋಜನೆಗಳ ಬಗ್ಗೆ ಅವರು ಗಮನಾರ್ಹವಾಗಿ ಮಾತನಾಡಿದ್ದಾರೆ ಮತ್ತು ಈ ಕುರಿತು ಪ್ರಸ್ತಾಪಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅವರು ಸ್ಪೂರ್ತಿದಾಯಕ ವೀಡಿಯೊವನ್ನು ಸಹ ಬಿಡುಗಡೆ ಮಾಡಿದರು, ಇದರಲ್ಲಿ ತಾವು ಬೋಳುತಲೆ(ಅಲೋಪೆಸಿಯಾ) ಹೊಂದಿರುವ ಕುರಿತು ವಿವರಿಸಿದ್ದರು.

ಮಿಚಿಗನ್‌ನ 13 ನೇ ಜಿಲ್ಲೆಯ ರಿಪಬ್ಲಿಕನ್ ಎದುರಾಳಿ ಡೇವಿಡ್ ಡುಡೆನ್‌ಹೋಫರ್ ವಿರುದ್ಧ ಟ್ಲೈಬ್ ಜಯಗಳಿಸಿದ್ದಾರೆ. ಟ್ಲೈಬ್, 2018 ರಲ್ಲಿ ಸದನದಲ್ಲಿ ಪ್ಯಾಲೇಸ್ಟಿನಿಯನ್ ಮೂಲದ ಮೊದಲ ಮಹಿಳೆ ಮತ್ತು ಒಮರ್ ಜೊತೆಗೆ  ಸದನಕ್ಕೆ ಆಯ್ಕೆಯಾದ ಮೊದಲ ಇಬ್ಬರು ಮುಸ್ಲಿಂ ಮಹಿಳೆಯರಲ್ಲಿ ಒಬ್ಬರಾಗಿದ್ದರು.

“ದಿ ಸ್ಕ್ವಾಡ್” ಎಂದು ಕರೆಸಿಕೊಳ್ಳುವ ಇವರ ಮೇಲೆ ಅಧ್ಯಕ್ಷ ಟ್ರಂಪ್ ಪದೇ ಪದೇ ಆಕ್ರಮಣ ಮಾಡಿದ್ದಾರೆ. ಈನಾಲ್ವರನ್ನು “ಎಒಸಿ ಪ್ಲಸ್ ತ್ರೀ” ಎಂದು ವ್ಯಂಗ್ಯವಾಡುತ್ತಾರೆ. ಕಳೆದ ವರ್ಷ, ಟ್ರಂಪ್ ಈ ನಾಲ್ವರು ಅಮೆರಿಕಾ ಪ್ರಜೆಗಳಾಗಿದ್ದರೂ ತಾವು ಬಂದ ದೇಶಗಳಿಗೆ ಹಿಂತಿರುಗಿ ಎಂದು ಹೇಳಿದ್ದರು.

ಇದನ್ನೂ ಓದಿ: ಗುಡ್ ನ್ಯೂಸ್: ಬೊಲಿವಿಯಾದಲ್ಲಿ ಮಹಿಳಾ ಜನಪ್ರತಿನಿಧಿಗಳ ಸಂಖ್ಯೆ ಶೇ.50ಕ್ಕಿಂತಲೂ ಹೆಚ್ಚು!

ಈ ನಾಲ್ವರೂ ಎಂದು ಸುಮ್ಮನೆ ಕುಳಿತವರಲ್ಲ. ತಮ್ಮ ತಮ್ಮ ವ್ಯಾಪ್ತಿಯಲ್ಲಿ, ವ್ಯಾಪ್ತಿಯ ಹೊರಗಡೆಯೂ ಅನ್ಯಾಯಗಳ ವಿರುದ್ಧ ಧ್ವನಿ ಮಾಡಿದವರು. ಲೈಂಗಿಕತೆ, ಇಸ್ಲಾಮೋಫೋಬಿಯಾ ಮತ್ತು ವರ್ಣಭೇದ ನೀತಿಯಿಂದ ಜೀನೋಫೋಬಿಯಾ (ವಲಸಿಗರ ಮೇಲೆ ದಾಳಿ) ವರೆಗಿನ ಬಗ್ಗೆ ಬಹಿರಂಗವಾಗಿ ಮಾತನಾಡಿವರು. ಈ ಕಾರಣಕ್ಕೆ ಅನೇಕ ದಾಳಿಗಳು ಮತ್ತು ಟೀಕೆಗಳನ್ನು ಎದುರಿಸಿದ್ದಾರೆ.

ಒಕಾಸಿಯೊ-ಕಾರ್ಟೆಜ್, ಈ ನಾಲ್ವರಲ್ಲಿ ಗಮನಾರ್ಹವಾದವರು. ತನ್ನ ಎಡಪಂಥೀಯ ರಾಜಕಾರಣಕ್ಕಾಗಿ ಸಂಪ್ರದಾಯವಾದಿಗಳಿಂದ ಕಟುಟೀಕೆ ಎದುರಿಸಿದವರು.

ಇನ್ನು ಈ ನಾಲ್ವರಲ್ಲಿ ಅಮೆರಿಕಾಕ್ಕೆ ಹೊರಗಡೆಯಿಂದ ಬಂದವರು ಇಲ್ಹಾನ್ ಒಮರ್ ಮಾತ್ರ. ಯುವತಿಯೊಬ್ಬಳು ವಲಸೆಗಾರರ ಬಗ್ಗೆ ಮತ್ತು ಇಸ್ಲಾಮೋಫೋಬಿಯಾ ಬಗ್ಗೆ ಸಾಕಷ್ಟು ಧ್ವನಿ ಎತ್ತಿದ್ದರಿಂದ ಈಕೆಯನ್ನು ಚಿಕ್ಕವಯಸ್ಸಿನಲ್ಲೇ ಅಮೆರಿಕಕ್ಕೆ ಕರೆತರಲಾಗಿತ್ತು.

ಅಮೆರಿಕಾ ಚುನಾವಣೆ ಅಧ್ಯಕ್ಷೀಯ ಚುನಾವಣಾ ಫಲಿತಾಂಶಕ್ಕಾಗಿ ಇಡೀ ವಿಶ್ವದ ಜನರೇ ಎದುರು ನೋಡುತ್ತಿದ್ದಾರೆ. ಡೆಮಾಕ್ರಟಿಕ್ ಅಭ್ಯರ್ಥಿ ಜೋ ಬೈಡೆನ್ ವೈಟ್ ಹೌಸ್‌ನತ್ತ ಮುನ್ನುಗ್ಗುತ್ತಿದ್ದಾರೆ. ಆದರೆ ಪೂರ್ತಿ ಮತ ಏಣಿಕೆ ಮುಗಿರುವವರೆಗೂ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ.

ಅಮೆರಿಕಾ ಚುನಾವಣೆ ಫಲಿತಾಂಶ ಏನೇ ಇರಲಿ. ಕೆಲವು ಸ್ಥಳಗಳಲ್ಲಿನ ಮಹಿಳೆಯರ ಗೆಲುವು, ಹೋರಾಟಗಾರರು, ಅನ್ಯಾಯ ವಿರುದ್ಧ ದನಿ ಎತ್ತುವವರಿಗೆ ಹೊಸ ಭರವಸೆ ಮೂಡಿಸಿರುವುದು ಸುಳ್ಳಲ್ಲ.


ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...