Homeಕರ್ನಾಟಕಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೊನಾ ಸಂಕಷ್ಟದ ನಡುವೆ ’ವಿದ್ಯುತ್ ಬರೆ’ ಎಳೆಯುತ್ತಿರುವ ರಾಜ್ಯ ಸರ್ಕಾರ!

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾದಿಂದಾಗಿ ಜನರು ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ರಾಜ್ಯ ಸರ್ಕಾರ ಮತ್ತೆ ಜನರ ಕಿಸಿಗೆ ಕತ್ತರಿ ಹಾಕುತ್ತಿದ್ದು, ರಾಜ್ಯದ ಎಲ್ಲಾ ವಿದ್ಯುತ್‌ ಕಂಪನಿಗಳ ವಿದ್ಯುತ್‌ ದರವನ್ನು ಸರಾಸರಿ 5.4% ದಂತೆ, ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಹೊರಡಿಸಿರುವ 2020-21 ನೇ ಸಾಲಿನ ವಿದ್ಯುತ್‌ ಪರಿಷ್ಕೃತ ದರವು ನವೆಂಬರ್‌ 1 ರಿಂದಲೇ ಅನ್ವಯವಾಗಲಿದೆ.

2020-21 ರ ಸಾಲಿನ ಪರಿಷ್ಕೃತ ದರ ನವೆಂಬರ್‌ 1 ರಿಂದ ಅನ್ವಯವಾಗುವುದಿದ್ದರೂ, ಲಾಕ್‌ಡೌನ್‌ ಅವಧಿಯ 7 ತಿಂಗಳ ದರಗಳನ್ನು ಮುಂದಿನ ಸಾಲಿನಲ್ಲಿ ವಸೂಲು ಮಾಡಲಾಗುತ್ತದೆ ಎಂದು ಕೆಇಆರ್‌ಸಿ ಹೇಳಿದ್ದು, 2021-22 ನೇ ಸಾಲಿನ ದರಗಳು ಮತ್ತೆ ಪರಿಷ್ಕರಣೆಯಾಗಲಿವೆ ಎಂದು ಅದು ಸ್ಪಷ್ಟಪಡಿಸಿದೆ. ಹಾಗಾಗಿ ಈ ಹೊಸ ದರಗಳು ನವೆಂಬರ್‌ 1 ರಿಂದ ಮಾರ್ಚ್ 31ರ ವರೆಗಿನ ಐದು ತಿಂಗಳಿಗೆ ಮಾತ್ರ ಅನ್ವಯವಾಗಲಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ಸ್ಲಾಬ್‌‌ನಲ್ಲಿ ಬದಲಾವಣೆ ಇಲ್ಲ

ದರ ನಿಗದಿಗೆ ಈಗ ಮೊದಲ ಸ್ಪ್ಯಾಬ್‌ನ್ನು 30 ಯುನಿಟ್‌ಗೆ ನಿಗದಿಪಡಿಸಲಾಗಿದ್ದು ಅದನ್ನು 50 ಕ್ಕೆ ಏರಸಬೇಕು ಎಂದು ನಾಗರಿಕ ಸಂಘಟನೆಗಳು ಬೇಡಿಕೆ ಸಲ್ಲಿಸಿದ್ದವು ಆದರೆ ಕೆಇಆರ್‌ಸಿ‌ ಈ ಬೇಡಿಕೆಯನ್ನು ತಿರಸ್ಕರಿಸಿದೆ.

ಸ್ಲಾಬ್‌ಗಳ ಪರಿಷ್ಕರಣೆಯಲ್ಲಿ ಎಲ್ಲ ವರ್ಗದ ಗ್ರಾಹಕರು ಅಂದರೆ, ಗೃಹ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 25 ಪೈಸೆಯವರೆಗೆ ಹೆಚ್ಚಿಸಲು ಆಯೋಗ ಒಪ್ಪಿಗೆ ನೀಡಿದೆ. ಆದರೆ, ಇದು ಬೆಂಗಳೂರು ಮೆಟ್ರೊ ಮತ್ತು ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಚಾರ್ಜಿಂಗ್‌ ಕೇಂದ್ರಗಳಿಗೆ ಅನ್ವಯಿಸುವುದಿಲ್ಲ. ತಾತ್ಕಾಲಿಕ ವಿದ್ಯುತ್ ಅಳವಡಿಕೆಯ ಬಳಕೆದಾರರಿಗೆ ಹೆಚ್ಚಿನ ಏರಿಕೆ ಮಾಡಲಾಗಿದ್ದು, ಪ್ರತಿ ಯೂನಿಟ್‌ಗೆ 50 ಪೈಸೆ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಕೋವಿಡ್ ನಿಭಾಯಿಸಲು ರಾಜ್ಯ ಸರ್ಕಾರವು ವಿಫಲವಾಗಿದ್ದೆಲ್ಲಿ?

ಒಂದು ವರ್ಷ ವಿದ್ಯುತ್‌ ದರ ಹೆಚ್ಚಿಸದಂತೆ ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಹೇಳಿದ್ದಾರೆ.

ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಸ ವಿದ್ಯುತ್ ದರ ಪಟ್ಟಿ ಹೀಗಿದೆ.

ಬೆಸ್ಕಾಂ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಇದುವರೆಗೂ 30 ಯೂನಿಟ್‌ಗಳಿಗೆ ₹ 3.75 ಪಾವತಿಸುತ್ತಿದ್ದು, ಇನ್ನು ಮುಂದೆ ಪ್ರತಿ ಯೂನಿಟ್‌ಗೆ ₹ 4 ಪಾವತಿಸಬೇಕಾಗುತ್ತದೆ. ಅದೇ ರೀತಿ ಈ ಹಿಂದೆ ತಿಂಗಳಿಗೆ 100 ಯೂನಿಟ್‌ಗಳಷ್ಟು ವಿದ್ಯುತ್‌ ಬಳಸುತ್ತಿದ್ದವರು ಪ್ರತಿ ಯೂನಿಟ್‌ಗೆ ₹5.20 ಪಾವತಿಸಬೇಕಾಗುತ್ತಿತ್ತು. ಇನ್ನು ಮುಂದೆ ಪ್ರತಿ ಯುನಿಟ್‌ಗೆ ₹ 5.45 ಪಾತಿಸಬೇಕು.

ಬೆಸ್ಕಾಂ ಹೊರತುಪಡಿಸಿ ಉಳಿದ ಎಸ್ಕಾಂಗಳ ನಗರಪಾಲಿಕೆ/ ಪೌರ ಸಂಸ್ಥೆಗಳ ಗೃಹ ಬಳಕೆಯ ಮೊದಲ 30 ಯೂನಿಟ್‌ವರೆಗೆ ₹ 3.70 ರಿಂದ ₹ 3.95 ಕ್ಕೆ ಏರಿಸಲಾಗಿದೆ. 31-100 ಯೂನಿಟ್‌ವರೆಗೆ ₹ 5.20 ರಿಂದ ₹ 5.45 ರೂ.ಗೆ ಪಾವತಿಸಬೇಕಾಗುತ್ತದೆ.

ಗ್ರಾಮೀಣ ಪ್ರದೇಶಗಳಿಗೆ ಈ ದರಗಳು 30 ಯೂನಿಟ್‌ವರೆಗೆ ₹ 3.60 ರಿಂದ ₹ 3.85 ಕ್ಕೆ ಏರಿಸಲಾಗಿದೆ, 31-100 ಯೂನಿಟ್‌ವರೆಗೆ ₹ 4.90 ರಿಂದ ₹ 5.15 ಗೆ ಹೆಚ್ಚಿಸಲಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...