Homeಕರ್ನಾಟಕನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ಬೀರುವಿನಲ್ಲಿ ಸಿಕ್ಕ ವೋಟರ್ ಐಡಿ ಮತ್ತು 2015ರಲ್ಲಿ ಕಾಲುವೆಯಲ್ಲಿ ಸಿಕ್ಕಿದ್ದ ಅಪರಿಚಿತ ಶವ ಮರ್ಯಾದೆಗೇಡು ಹತ್ಯೆಯಾಗಿರುವುದನ್ನು ದೃಢಪಡಿಸುತ್ತವೆ.

- Advertisement -
- Advertisement -

ಮಂಡ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳು, ಮರ್ಯಾದೆಗೇಡು ಹತ್ಯೆಗಳು ಹೆಚ್ಚಾಗುತ್ತಿವೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ವಿಚಿತ್ರ ಮರ್ಯಾದೆಗೇಡು ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 5 ವರ್ಷಗಳ ಹಿಂದೆ ಕಾಣೆಯಾಗಿದ್ದ ಮೇಘನ ಎಂಬ ಹುಡುಗಿಯ ಕೊಲೆಯಾಗಿದೆ ಎಂದು ಆಕೆಯ ತಾಯಿ ಆರೋಪಿಸಿ, ದೂರು ನೀಡಿದ್ದಾರೆ. ಆದರೆ ಪೊಲೀಸರು ಈ ವಿಷಯದಲ್ಲಿ ಸೂಕ್ತ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದಿವೆ.

ಘಟನೆಯ ಹಿನ್ನೆಲೆ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಮೇಘನಾ ಎಂಬ ಹುಡುಗಿಯ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ಎಂಇಟಿ ಕಾಲೇಜಿನಲ್ಲಿ 2014-15 ರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತರ ಮೂಲಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸವರ್ಣಿಯ ಸಮುದಾಯಕ್ಕೆ ಸೇರಿದ ಟಿ.ಕೆ ಸ್ವಾಮಿ ಎಂಬುವವರ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.

ತದನಂತರ ಅವರಿಬ್ಬರೂ ಮದುವೆಯಾಗಿರುವುದಾಗಿಯೂ, ಆ ಮನೆಯವರಿಗೆ ತನ್ನ ಜಾತಿ ಗೊತ್ತಿರಲಿಲ್ಲ. ಈಗ ಗೊತ್ತಾಗಿ ತನಗೆ ತೊಂದರೆ ಕೊಡುತ್ತಿದ್ದಾರೆ. ಆದರೆ ತಾನು ಮನೆಗೆ ಬರುವುದಿಲ್ಲವೆಂದು ಮೇಘನಾ ಆಕೆಯ ತಾಯಿಗೆ ತಿಳಿಸಿ ನಾಪತ್ತೆಯಾಗಿದ್ದಳು. 5 ವರ್ಷದಿಂದ ಯಾವುದೇ ಸಂಪರ್ಕವಿರಲಿಲ್ಲ ಎಂದು ಆಕೆಯ ತಾಯಿ ಹೇಳಿದ್ದರು.

ಆದರೆ ಇತ್ತೀಚೆಗೆ ಅಕ್ಟೋಬರ್ 14 ರಂದು ಮೇಘನಾರವರ ತಾಯಿ ಮನೆ ಸ್ವಚ್ಛಗೊಳಿಸುತ್ತಿರುವಾಗ ಹಳೆಯ ಬೀರುವಿನಲ್ಲಿ ಟಿ.ಕೆ ಸ್ವಾಮಿಯ ವೋಟರ್ ಐಡಿ ಪತ್ತೆಯಾಗಿದೆ. ಅದರ ಆಧಾರದಲ್ಲಿ ತಿರುಮಲಾಪುರಕ್ಕೆ ತೆರಳಿ ವಿಚಾರಿಸಿದರೆ, ನಿಮ್ಮ ಮಗಳನ್ನು ಸ್ವಾಮಿ ಮನೆಯವರು 5 ವರ್ಷಗಳ ಹಿಂದೆಯೇ ಹತ್ಯೆ ಮಾಡಿದ್ದಾರೆ ಸ್ಥಳೀಯರು ಎಂದು ತಿಳಿಸಿದ್ದಾರೆ. ಇದರಿಂದ ಭಯಭೀತಗೊಂಡ ತಾಯಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಪೊಲೀಸರು ಹಳೆಯ ಅನುಮಾನಾಸ್ಪದ ಸಾವುಗಳು ಮತ್ತು ಪತ್ತೆಯಾಗದ ಶವಗಳ ದಾಖಲೆ ತೆಗೆದು ಪರಿಶೀಲಿಸಿದಾಗ 2015ರಲ್ಲಿ ಕಾಲುವೆಯಲ್ಲಿ ಪತ್ತೆಯಾಗಿದ್ದ ಶವ ತನ್ನ ಮಗಳು ಎಂದು ಮೇಘನಾ ತಾಯಿಯು ಗುರುತಿಸಿದ್ದಾರೆ. 2015 ರಲ್ಲಿ ಚಿನಕುರಳಿ ಪಕ್ಕದ ಬ್ಯಾಟರಾಯನಪುರ ನಾಲೆಯಲ್ಲಿ ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ. ಅದನ್ನು ಕೊಲೆ ಎಂದು ಪೊಲೀಸರು ಮಹಜರು ಮಾಡಿದ್ದಾರೆ.

ಹುಡುಗಿ ಮತ್ತು ಹುಡುಗ ಅನ್ಯಜಾತಿಗೆ ಸೇರಿದ್ದರಿಂದ ಹುಡುಗನ ಕುಟುಂಬದವರು ಆಕೆಯನ್ನು ಕೊಂದಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯಕ್ಕೆ ಶ್ರೀರಂಗಪಟ್ಟಣ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ನಡುವೆ ಮೃತ ಮೇಘನಾಳ ತಾಯಿಯು ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ, ಬದಲಾಗಿ 5 ವರ್ಷ ಏನು ಮಾಡುತ್ತಿದ್ದೀರಿ? ನಿಮ್ಮ ಮಗಳು ಮದುವೆಯಾಗಿರುವುದಕ್ಕೆ ಸಾಕ್ಷಿ ಏನು? ನಾವು ಆರೋಪಿಗಳನ್ನು ಬಂಧಿಸುವುದಿಲ್ಲ, ಏಕೆಂದರೆ ಅವರು ಲಾಕಪ್ ಡೆತ್ ಆದರೆ ಯಾರು ಹೊಣೆ ಎಂದು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡುರವರು ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “ಸಂತ್ರಸ್ತಳ ತಾಯಿ ದೂರು ನೀಡಿ 15 ದಿನವಾದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿಲ್ಲ. ನೊಂದವರಿಗೆ ರಕ್ಷಣೆ ನೀಡಿ, ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದರೂ ಸಹ ತನಿಖೆ ವಿಳಂಬವಾಗುತ್ತಿದೆ ಎಂದರೆ ಏನರ್ಥ? ಪೊಲೀಸರು ಹಣದ ಆಮಿಷಕ್ಕೆ ಬಲಿಯಾಗಿದ್ದಾರೆಯೆ ಅಥವಾ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಯೇ? ಎಂಬ ಅನುಮಾನ ಬರುತ್ತಿದೆ ಎಂದಿದ್ದಾರೆ.

ತನ್ನ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಕುತೂಹಲಕ್ಕಾದರೂ ಪೊಲೀಸರು ತನಿಖೆ ನಡೆಸಬೇಕಿತ್ತು. ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಬೇಕಿತ್ತು. ಆದರೆ ಅವರು ಸಂತ್ರಸ್ತ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಇಂತಹ ಅಪರಾಧಗಳು ಹೆಚ್ಚಲು ಕಾರಣವಾಗುತ್ತದೆ. ಹಾಗಾಗಿ ಪ್ರಕರಣದ ಸೂಕ್ತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ನವೆಂಬರ್ 06ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ದಸಂಸ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿವೆ.


ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

Also Read: Honour Killing in Karnataka: Man murders daughter for loving a Dalit man

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...