Homeಕರ್ನಾಟಕನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ನಿಲ್ಲದ ಮರ್ಯಾದೆಗೇಡು ಹತ್ಯೆಗಳು: ನಾಳೆ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ!

ಬೀರುವಿನಲ್ಲಿ ಸಿಕ್ಕ ವೋಟರ್ ಐಡಿ ಮತ್ತು 2015ರಲ್ಲಿ ಕಾಲುವೆಯಲ್ಲಿ ಸಿಕ್ಕಿದ್ದ ಅಪರಿಚಿತ ಶವ ಮರ್ಯಾದೆಗೇಡು ಹತ್ಯೆಯಾಗಿರುವುದನ್ನು ದೃಢಪಡಿಸುತ್ತವೆ.

- Advertisement -
- Advertisement -

ಮಂಡ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಗಳು, ಮರ್ಯಾದೆಗೇಡು ಹತ್ಯೆಗಳು ಹೆಚ್ಚಾಗುತ್ತಿವೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಮತ್ತು ಮಹಿಳೆಯರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ನವೆಂಬರ್ 6 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ.

ಇತ್ತೀಚೆಗೆ ಜಿಲ್ಲೆಯಲ್ಲಿ ವಿಚಿತ್ರ ಮರ್ಯಾದೆಗೇಡು ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. 5 ವರ್ಷಗಳ ಹಿಂದೆ ಕಾಣೆಯಾಗಿದ್ದ ಮೇಘನ ಎಂಬ ಹುಡುಗಿಯ ಕೊಲೆಯಾಗಿದೆ ಎಂದು ಆಕೆಯ ತಾಯಿ ಆರೋಪಿಸಿ, ದೂರು ನೀಡಿದ್ದಾರೆ. ಆದರೆ ಪೊಲೀಸರು ಈ ವಿಷಯದಲ್ಲಿ ಸೂಕ್ತ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ದಸಂಸ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕಿಳಿದಿವೆ.

ಘಟನೆಯ ಹಿನ್ನೆಲೆ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಮೇಘನಾ ಎಂಬ ಹುಡುಗಿಯ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿರುವ ಎಂಇಟಿ ಕಾಲೇಜಿನಲ್ಲಿ 2014-15 ರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತರ ಮೂಲಕ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸವರ್ಣಿಯ ಸಮುದಾಯಕ್ಕೆ ಸೇರಿದ ಟಿ.ಕೆ ಸ್ವಾಮಿ ಎಂಬುವವರ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿತ್ತು.

ತದನಂತರ ಅವರಿಬ್ಬರೂ ಮದುವೆಯಾಗಿರುವುದಾಗಿಯೂ, ಆ ಮನೆಯವರಿಗೆ ತನ್ನ ಜಾತಿ ಗೊತ್ತಿರಲಿಲ್ಲ. ಈಗ ಗೊತ್ತಾಗಿ ತನಗೆ ತೊಂದರೆ ಕೊಡುತ್ತಿದ್ದಾರೆ. ಆದರೆ ತಾನು ಮನೆಗೆ ಬರುವುದಿಲ್ಲವೆಂದು ಮೇಘನಾ ಆಕೆಯ ತಾಯಿಗೆ ತಿಳಿಸಿ ನಾಪತ್ತೆಯಾಗಿದ್ದಳು. 5 ವರ್ಷದಿಂದ ಯಾವುದೇ ಸಂಪರ್ಕವಿರಲಿಲ್ಲ ಎಂದು ಆಕೆಯ ತಾಯಿ ಹೇಳಿದ್ದರು.

ಆದರೆ ಇತ್ತೀಚೆಗೆ ಅಕ್ಟೋಬರ್ 14 ರಂದು ಮೇಘನಾರವರ ತಾಯಿ ಮನೆ ಸ್ವಚ್ಛಗೊಳಿಸುತ್ತಿರುವಾಗ ಹಳೆಯ ಬೀರುವಿನಲ್ಲಿ ಟಿ.ಕೆ ಸ್ವಾಮಿಯ ವೋಟರ್ ಐಡಿ ಪತ್ತೆಯಾಗಿದೆ. ಅದರ ಆಧಾರದಲ್ಲಿ ತಿರುಮಲಾಪುರಕ್ಕೆ ತೆರಳಿ ವಿಚಾರಿಸಿದರೆ, ನಿಮ್ಮ ಮಗಳನ್ನು ಸ್ವಾಮಿ ಮನೆಯವರು 5 ವರ್ಷಗಳ ಹಿಂದೆಯೇ ಹತ್ಯೆ ಮಾಡಿದ್ದಾರೆ ಸ್ಥಳೀಯರು ಎಂದು ತಿಳಿಸಿದ್ದಾರೆ. ಇದರಿಂದ ಭಯಭೀತಗೊಂಡ ತಾಯಿ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಪೊಲೀಸರು ಹಳೆಯ ಅನುಮಾನಾಸ್ಪದ ಸಾವುಗಳು ಮತ್ತು ಪತ್ತೆಯಾಗದ ಶವಗಳ ದಾಖಲೆ ತೆಗೆದು ಪರಿಶೀಲಿಸಿದಾಗ 2015ರಲ್ಲಿ ಕಾಲುವೆಯಲ್ಲಿ ಪತ್ತೆಯಾಗಿದ್ದ ಶವ ತನ್ನ ಮಗಳು ಎಂದು ಮೇಘನಾ ತಾಯಿಯು ಗುರುತಿಸಿದ್ದಾರೆ. 2015 ರಲ್ಲಿ ಚಿನಕುರಳಿ ಪಕ್ಕದ ಬ್ಯಾಟರಾಯನಪುರ ನಾಲೆಯಲ್ಲಿ ಅಪರಿಚಿತ ಹುಡುಗಿಯ ಶವ ಪತ್ತೆಯಾಗಿದೆ. ಅದನ್ನು ಕೊಲೆ ಎಂದು ಪೊಲೀಸರು ಮಹಜರು ಮಾಡಿದ್ದಾರೆ.

ಹುಡುಗಿ ಮತ್ತು ಹುಡುಗ ಅನ್ಯಜಾತಿಗೆ ಸೇರಿದ್ದರಿಂದ ಹುಡುಗನ ಕುಟುಂಬದವರು ಆಕೆಯನ್ನು ಕೊಂದಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯಕ್ಕೆ ಶ್ರೀರಂಗಪಟ್ಟಣ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಈ ನಡುವೆ ಮೃತ ಮೇಘನಾಳ ತಾಯಿಯು ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ, ಬದಲಾಗಿ 5 ವರ್ಷ ಏನು ಮಾಡುತ್ತಿದ್ದೀರಿ? ನಿಮ್ಮ ಮಗಳು ಮದುವೆಯಾಗಿರುವುದಕ್ಕೆ ಸಾಕ್ಷಿ ಏನು? ನಾವು ಆರೋಪಿಗಳನ್ನು ಬಂಧಿಸುವುದಿಲ್ಲ, ಏಕೆಂದರೆ ಅವರು ಲಾಕಪ್ ಡೆತ್ ಆದರೆ ಯಾರು ಹೊಣೆ ಎಂದು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡುರವರು ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “ಸಂತ್ರಸ್ತಳ ತಾಯಿ ದೂರು ನೀಡಿ 15 ದಿನವಾದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿಲ್ಲ. ನೊಂದವರಿಗೆ ರಕ್ಷಣೆ ನೀಡಿ, ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದರೂ ಸಹ ತನಿಖೆ ವಿಳಂಬವಾಗುತ್ತಿದೆ ಎಂದರೆ ಏನರ್ಥ? ಪೊಲೀಸರು ಹಣದ ಆಮಿಷಕ್ಕೆ ಬಲಿಯಾಗಿದ್ದಾರೆಯೆ ಅಥವಾ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಯೇ? ಎಂಬ ಅನುಮಾನ ಬರುತ್ತಿದೆ ಎಂದಿದ್ದಾರೆ.

ತನ್ನ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಕುತೂಹಲಕ್ಕಾದರೂ ಪೊಲೀಸರು ತನಿಖೆ ನಡೆಸಬೇಕಿತ್ತು. ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಬೇಕಿತ್ತು. ಆದರೆ ಅವರು ಸಂತ್ರಸ್ತ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಇಂತಹ ಅಪರಾಧಗಳು ಹೆಚ್ಚಲು ಕಾರಣವಾಗುತ್ತದೆ. ಹಾಗಾಗಿ ಪ್ರಕರಣದ ಸೂಕ್ತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ನವೆಂಬರ್ 06ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ದಸಂಸ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯ ನೇತೃತ್ವ ವಹಿಸಿವೆ.


ಇದನ್ನೂ ಓದಿ: ಮಾರ್ಯಾದೆ ಹತ್ಯೆ, ಗುಂಪು ಹಲ್ಲೆಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ ರಾಜಸ್ಥಾನ ಸರ್ಕಾರ

Also Read: Honour Killing in Karnataka: Man murders daughter for loving a Dalit man

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...