Homeಕರ್ನಾಟಕವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್‌ಜಿಟಿ ನೋಟಿಸ್!

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು- ಎನ್‌ಜಿಟಿ

- Advertisement -
- Advertisement -

ದೀಪಾವಳಿ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಪಟಾಕಿ ನಿಷೇಧ ಕುರಿತು ಈಗಾಗಲೇ ಹಲವು ರಾಜ್ಯಗಳು ಚರ್ಚಿಸತೊಡಗಿವೆ. ಇವುಗಳ ಜೊತೆಯಲ್ಲಿ ವಾಯುಮಾಲಿನ್ಯ ಹೆಚ್ಚಾಗುವ ಹಿನ್ನೆಲೆ ಪಟಾಕಿ ನಿಷೇದಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಎನ್‌ಜಿಟಿ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಗಾಳಿಯ ಗುಣಮಟ್ಟ ಕುಸಿದು, ವಾಯುಮಾಲಿನ್ಯ ಹೆಚ್ಚಾಗಿರುವ, ಕರ್ನಾಟಕವೂ ಸೇರಿದಂತೆ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೋಟಿಸ್ ನೀಡಿದೆ.

ಎನ್‌ಜಿಟಿ ಅಧ್ಯಕ್ಷ, ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶಗಳಿಗೆ ಈಗಾಗಲೇ ನೋಟಿಸ್ ನೀಡಿದೆ. ಒಡಿಶಾ ಮತ್ತು ರಾಜಸ್ಥಾನದ ರಾಜ್ಯ ಸರ್ಕಾರಗಳು ಈಗಾಗಲೇ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಿವೆ.

ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯ (ಎಂಒಇಎಫ್) ಮತ್ತು ನಾಲ್ಕು ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಕೊರೊನಾ ಸಾಂಕ್ರಾಮಿಕದ ಜೊತೆಗೆ ದೀಪಾವಳಿ ಹಬ್ಬವೂ ಇರುವ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್‌ ಗೋಯೆಲ್‌ ನೇತೃತ್ವದ ಹಸಿರು ಪೀಠ, ಗುರುವಾರದೊಳಗೇ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ.

ಎನ್‌ಜಿಟಿಯು ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚಂಡೀಗಢ, ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್, ತಮಿಳುನಾಡು ಮತ್ತು ತೆಲಂಗಾಣ, ಉತ್ತರಖಂಡ ಮತ್ತು ಪಶ್ಚಿಮ ಬಂಗಾರದಿಂದ ಪ್ರತಿಕ್ರಿಯೆ ಕೋರಿದೆ.

ಇತ್ತ ದೆಹಲಿಯಲ್ಲಿ ಕೊರೊನಾದ ಮೂರನೇ ಅಲೆ ಆರಂಭವಾಗಿದ್ದು, ದೀಪಾವಳಿ ಹಬ್ಬ ಕೂಡ ಹತ್ತಿರದಲ್ಲೇ ಇರುವ ಕಾರಣ ಪಟಾಕಿ ನಿಷೇಧಿಸುವುದರ ಬಗ್ಗೆ ರಾಜ್ಯ ಸರ್ಕಾರ ಚಿಂತಿಸುತ್ತಿದೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿನ್ನೆ ತಿಳಿಸಿದ್ದಾರೆ.

ರಾಜ್ಯದಲ್ಲೂ ಕೊರೊನಾ ನಿರ್ವಹಣೆ ಹಿನ್ನೆಲೆ ಯಾವುದೇ ನಿಯಮಗಳ ಸಡಿಲಿಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಪಟಾಕಿ ನಿಷೇಧಿಸಬೇಕೆ, ಬೇಡವೆ ಎಂಬ ಬಗ್ಗೆ ಸಮಿತಿ ರಚಿಸಿದ್ದು, ಇನ್ನೆರಡು ದಿನಗಳಲ್ಲಿ ತಜ್ಞರು ವರದಿ ನೀಡಲಿದ್ದಾರೆ ಅದರ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದರು. ಸದ್ಯ ಕರ್ನಾಟಕದಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ ಎಂದು ಎನ್‌ಜಿಟಿ ನೋಟಿಸ್ ನೀಡಿದೆ.


ಇದನ್ನೂ ಓದಿ: ಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...