ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗು ಮತ್ತು ಅದನ್ನು ತಡೆಯಲು ಸರ್ಕಾರ ಕಾನೂನು ಜಾರಿಗೆ ತರುತ್ತಿದೆ. ಕೆಲವು ಸಂಸ್ಥೆಗಳು ಮದುವೆಗಾಗಿ ಮತಾಂತರ ಮಾಡುವಂತೆ ಯುವಕರನ್ನು ದಾರಿ ತಪ್ಪಿಸುತ್ತಿವೆ. ಈ ವಿದ್ಯಮಾನವು ಎಲ್ಲಾ ರಾಜ್ಯಗಳಲ್ಲಿ ಕಳೆದ ಏಳು-ಎಂಟು ವರ್ಷಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ
ಅಲಹಾಬಾದ್ ಹೈಕೋರ್ಟ್ ತೀರ್ಪಿನ ನಂತರ ಈ ಚರ್ಚೆ ಮತ್ತೊಮ್ಮೆ ನಡೆಯುತ್ತಿರುವುದರಿಂದ, ಕಾನೂನು ತಜ್ಞರೊಂದಿಗೆ ಸರ್ಕಾರ ಸಮಾಲೋಚನೆ ನಡೆಸಲಿದೆ. “ಸಾಮಾಜಿಕ ಅಶಾಂತಿ ಸೃಷ್ಟಿಸುವುದು ಇದರ ಉದ್ದೇಶ. ಆದ್ದರಿಂದ ಸಂವಿಧಾನದ ಚೌಕಟ್ಟಿನೊಳಗೆ ನಾವು ಕಾನೂನನ್ನು ಪರಿಚಯಿಸುತ್ತೇವೆ” ಎಂದು ಅವರು ಹೇಳಿದರು.
ಇದನ್ನೂ ಓದಿ: ಇದು ಲವ್ ಜಿಹಾದ್ ಅಲ್ಲವಂತೆ!