Homeಮುಖಪುಟವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ಎಲ್ಲರೂ ಕಾನೂನಿಗೆ ಬದ್ಧರಾಗಿರಬೇಕು. ಯಾರಾದರೂ ಕಾನೂನನ್ನು ಉಲ್ಲಂಘಿಸಿದರೆ ಅದು ತನ್ನ ಕರ್ತವ್ಯವನ್ನು ಮಾಡುತ್ತದೆ

- Advertisement -
- Advertisement -

ಆಡಳಿತಾರೂಢ AIADMK ಪಕ್ಷ ಗುರುವಾರ ತನ್ನ ಮಿತ್ರಪಕ್ಷ ಬಿಜೆಪಿಗೆ, “ಕೊರೊನಾ ಸೋಂಕಿನ ಎರಡನೇ ಮತ್ತು ಮೂರನೇ ಅಲೆ ಆರಂಭವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದು, ಜನರ ಹಿತದೃಷ್ಟಿಯಿಂದ ವೆಟ್ರಿವೇಲ್‌ ಯಾತ್ರೆಯನ್ನು ತ್ಯಜಿಸುವಂತೆ” ಸಲಹೆ ನೀಡಿದೆ.

ತಮಿಳುನಾಡಿನಲ್ಲಿ ಕೊರೊನಾ ಸೋಂಕಿನ ಎರಡನೇ ಮತ್ತು ಮೂರನೇ ಅಲೆಗಳ ಬಗ್ಗೆ ಇರುವ ಆತಂಕದ ಹಿನ್ನೆಲೆಯಲ್ಲಿ ವೆಟ್ರಿವೇಲ್ ಯಾತ್ರೆಯನ್ನು ಅನುಮತಿಸಲಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮುಂದೆ ರಾಜ್ಯ ಸರ್ಕಾರದ ಅಫಿಡವಿಟ್ ಸಲ್ಲಿಸಿದ ಸಚಿವ ಡಿ ಜಯಕುಮಾರ್, “ಈಗಾಗಲೇ ಸರ್ಕಾರದ ಸಂಘಟಿತ ಪ್ರಯತ್ನದಿಂದಾಗಿ ಸೋಂಕಿನ ಪ್ರಮಾಣವು ರಾಜ್ಯಾದ್ಯಂತ ಕಡಿಮೆಯಾಗಿದೆ. ಆದರೆ ಈ ಸೋಂಕಿನ ಎರಡನೆಯ ಮತ್ತು ಮೂರನೆಯ ಅಲೆಗಳ ಬಗ್ಗೆ ಇನ್ನೂ ಎಚ್ಚರಿಕೆಗಳಿವೆ. ಆದ್ದರಿಂದ ಜನರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಲ್ಲವೇ? ಈ ಸಮಯದಲ್ಲಿ ಈ ಯಾತ್ರೆ ಸೂಕ್ತವಲ್ಲ ಎಂಬುದನ್ನು ಬಿಜೆಪಿ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.

ಇದನ್ನೂ ಓದಿ: ಕೋಮು ದ್ವೇಷ ಹರಡಿದ ಆರೋಪ: ನಟಿ ಕಂಗನಾ ಮತ್ತು ಸಹೋದರಿಗೆ ಮತ್ತೆ ನೋಟಿಸ್

ವೆಟ್ರಿವೇಲ್‌ ಯಾತ್ರೆಯನ್ನು ನಡೆಸಲು ಬಿಜೆಪಿ ಮುಂದಾದರೆ ರಾಜ್ಯ ಸರ್ಕಾರದ ಕ್ರಮ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಎಲ್ಲರೂ ಕಾನೂನಿಗೆ ಬದ್ಧರಾಗಿರಬೇಕು. ಯಾರಾದರೂ ಕಾನೂನನ್ನು ಉಲ್ಲಂಘಿಸಿದರೆ ಅದು ತನ್ನ ಕರ್ತವ್ಯವನ್ನು ಮಾಡುತ್ತದೆ. ನಾನು ಇದನ್ನು  ಬಿಜೆಪಿಗೆ ಮಾತ್ರವಲ್ಲದೇ ಎಲ್ಲಾ ಪಕ್ಷಗಳಿಗೂ ಹೇಳುತ್ತಿದ್ದೇನೆ” ಎಂದು ಹೇಳಿದರು.

ತಮಿಳುನಾಡಿನಲ್ಲಿ ನಡೆಯುವ ವೆಟ್ರಿವೇಲ್ ಯಾತ್ರೆಯನ್ನು ನಡೆಸಲು ಅನುಮತಿ ಕೋರಿ ರಾಜ್ಯ ಬಿಜೆಪಿ ಘಟಕವು ಮನವಿ ಸಲ್ಲಿಸಿತ್ತು. ಆದರೆ ಇದನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ ಕೊರೊನಾ ಕಾರಣವನ್ನು ನೀಡಿದೆ.

ದೇವರು ಮತ್ತು ಧರ್ಮದ ಮೇಲೆ ರಾಜಕೀಯ ಮಾಡುತ್ತಿರುವ ಬಿಜೆಪಿ, ಇದೀಗ ತಮಿಳುನಾಡಿನಲ್ಲೂ ತನ್ನ ವರಸೆಯನ್ನು ತೋರಿಸಲು ಆರಂಭಿಸಿದೆ. ಇತ್ತೀಚೆಗೆ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮತ್ತು ನಟಿ ಖುಷ್ಬೂ ಕೂಡ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ. ಇದು ರಾಜ್ಯದಲ್ಲಿ ಬಿಜೆಪಿಯ ಪರ್ವವನ್ನು ಆರಂಭಿಸಬಹುದು ಎಂದು ಹಲವರು ನಂಬಿದ್ದಾರೆ.


ಇದನ್ನೂ ಓದಿ: ಕೋಮು ದ್ವೇಷ ಹರಡುವ ಸುದ್ದಿ ಪ್ರಸಾರ: ಅರ್ನಾಬ್‌ ಗೋಸ್ವಾಮಿಗೆ ಶೋಕಾಸ್ ನೋಟಿಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...