Homeಅಂತರಾಷ್ಟ್ರೀಯಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ರಾಬಿಟ್ ಹ್ಯಾಶ್ ಸಮುದಾಯುವು 1990ರ ಇಸವಿಯಿಂದ ತಮ್ಮ ಮೇಯರ್​ ಆಗಿ ನಾಯಿಗಳನ್ನು ಆಯ್ಕೆ ಮಾಡುತ್ತಾ ಬಂದಿದ್ದಾರೆ.

- Advertisement -
- Advertisement -

ವಿಶ್ವವೇ ಅಮೆರಿಕಾ ಚುನಾವಣಾ ಫಲಿತಾಂಶಕ್ಕಾಗಿ ಎದುರು ನೋಡುತ್ತಿದೆ. ನಿನ್ನೆಯಿಂದ ಕುತೂಹಲ ಉಳಿಸಿಕೊಂಡಿರುವ ಚುನಾವಣಾ ಫಲಿತಾಂಶ ಇನ್ನೂ ಹೊರಬಿದ್ದಿಲ್ಲ. ಡೊನಾಲ್ಡ್ ಟ್ರಂಪ್, ಜೋ ಬಿಡನ್ ನಡುವೆ ತೀವ್ರ ಪೈಪೋಟಿ ಇದೆ. ಆದರೆ ಇಲ್ಲೊಂದು ನಗರದಲ್ಲಿ ಮೇಯರ್‌ ಚುನಾವಣೆಯಲ್ಲಿ ಭರ್ಜರಿ ಬಹುಮತದಲ್ಲಿ ಬುಲ್‌ಡಾಗ್ ಜಯಗಳಿಸಿದೆ.

ಫಾಕ್ಸ್ ನ್ಯೂಸ್ ಪ್ರಕಾರ, ಅಮೆರಿಕಾದ ಕೆಂಟುಕಿಯ ರಾಬಿಟ್ ಹ್ಯಾಶ್‌ನ ಜನರು ಮೇಯರ್​ ಚುನಾವಣೆಯಲ್ಲಿ ವಿಲ್ಬರ್​ ಬೀಸ್ಟ್​ ಹೆಸರಿನ ಫ್ರೆಂಚ್ ಬುಲ್​ಡಾಗ್​​​ವೊಂದನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಅದರಲ್ಲೂ ವಿಲ್ಬರ್ ಬೀಸ್ಟ್ 13,143 ಮತಗಳಿಂದ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ ಎಂದು ರಾಬಿಟ್ ಹ್ಯಾಶ್ ಹಿಸ್ಟಾರಿಕಲ್ ಸೊಸೈಟಿ ತಿಳಿಸಿದೆ.

“ರಾಬಿಟ್ ಹ್ಯಾಶ್‌ನ ಮೇಯರ್ ಚುನಾವಣೆಯಲ್ಲಿ ವಿಲ್ಬರ್ ಬೀಸ್ಟ್ ಹೊಸ ಮೇಯರ್ ಆಗಿದ್ದು, ಒಟ್ಟು 22,985 ಮತಗಳಲ್ಲಿ 13,143 (ಇದುವರೆಗೆ ಗಳಿಸಿದ ಒಟ್ಟು ಮೊತ್ತ) ಮತಗಳನ್ನು ಪಡೆದಿದ್ದಾರೆ!” ಎಂದು ರಾಬಿಟ್ ಹ್ಯಾಶ್ ಹಿಸ್ಟಾರಿಕಲ್ ಸೊಸೈಟಿ ಬುಧವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ಜಾಕ್ ರಾಬಿಟ್ ಹೆಸರಿನ ಬೀಗಲ್​ ನಾಯಿ​ ಹಾಗೂ ಪಪ್ಪಿ ಹೆಸರಿನ ಗೋಲ್ಡನ್ ರಿಟ್ರೈವರ್ ನಾಯಿಗಳು ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಪಡೆದುಕೊಂಡಿವೆ. ಇನ್ನು 12 ವರ್ಷದ ಲೇಡಿ ಸ್ಟೋನ್ ಹೆಸರಿನ ಬಾರ್ಡರ್​ ಕೋಲಿ ನಾಯಿ ಪಟ್ಟಣದ ರಾಯಭಾರಿ ಸ್ಥಾನವನ್ನ ಹಾಗೆ ಉಳಿಸಿಕೊಂಡಿದೆ.

PC: Rabbit Hash Historical Society@Facebook

ಕೆಂಟುಕಿ.ಕಾಂ ಪ್ರಕಾರ, ಓಹಿಯೋ ನದಿಯುದ್ದಕ್ಕೂ ವಾಸವಿರುವ ಸಮುದಾಯವಾದ ರಾಬಿಟ್ ಹ್ಯಾಶ್, 1990ರ ಇಸವಿಯಿಂದ ತಮ್ಮ ಮೇಯರ್​ ಆಗಿ ನಾಯಿಗಳನ್ನು ಆಯ್ಕೆ ಮಾಡುತ್ತಾ ಬಂದಿದ್ದಾರೆ. ಇಲ್ಲಿನ ಜನರು ಹಿಸ್ಟೋರಿಕಲ್ ಸೊಸೈಟಿಗೆ ತಲಾ 1 ಡಾಲರ್​ ದೇಣಿಗೆ ನೀಡುವ ಮೂಲಕ ಮತ ಹಾಕುತ್ತಾರೆ.

ಮೇಯರ್‌ ಆಗಿ ಆಯ್ಕೆಯಾದ ಫ್ರೆಂಚ್ ಬುಲ್‌ಡಾಗ್ ವಿಲ್ಬರ್ ನಾಯಿ ಅಧಿಕಾರ ವಹಿಸಿಕೊಂಡ ನಂತರ, ರಾಬಿಟ್ ಹ್ಯಾಶ್ ಹಿಸ್ಟಾರಿಕಲ್ ಸೊಸೈಟಿ ಮತ್ತು ಇತರ ದತ್ತಿ ಕಾರ್ಯಗಳಿಗಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...