Homeಕರ್ನಾಟಕಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

ಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

- Advertisement -
- Advertisement -

ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ರೈತರ ಬೆಳೆ ಖರೀದಿಗೆ ಶೀಘ್ರವೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ತಡೆ ನಡೆಸಲಾಯಿತು. ತುಮಕೂರಿನ ಜಾಸ್ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ನೂರಾರು ರೈತರನ್ನು ಪೊಲೀಸರು ಬಂಧಿಸಿದರು.

ಹೆದ್ದಾರಿ ತಡೆಯಿಂದ ವಾಹನಗಳ ದಟ್ಟಣೆ ಹೆಚ್ಚಾಯಿತು. ರೈತರು ಹೆದ್ದಾರಿ ತಡೆ ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿದರು. ಇದಕ್ಕೆ ರೈತರು ಕಿಮ್ಮತ್ತು ನೀಡಲಿಲ್ಲ. ಸ್ವಲ್ಪ ಸಮಯದ ನಂತರ ಬಂಧಿಸಿ ಎಲ್ಲರನ್ನು ವಾಹನಕ್ಕೆ ತುಂಬಿಕೊಂಡು ಡಿಆರ್ ಮೈದಾನಕ್ಕೆ ಪ್ರತಿಭಟನಾನಿರತ ರೈತರನ್ನು ಕರೆತಂದರು. ಹೆಸರು ವಿಳಾಸ ಕೊಟ್ಟು ಹೋಗಿ ಎಂದು ಪೊಲೀಸರು ಮನವಿ ಮಾಡಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರೈತ ಮುಖಂಡರು ನಾವು ಇಲ್ಲಿಯೇ ಧರಣಿ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಕುಳಿತಲ್ಲಿಂದ ಕದಲುವುದಿಲ್ಲ. ನಮ್ಮನ್ನು ಬೇಕಾದರೆ ಜೈಲಿಗೆ ಹಾಕಿ ಹೋಗುತ್ತೇವೆ, ಅದು ಬಿಟ್ಟು ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಅನಂದ್ ಪಟೇಲ್ ಮಾತನಾಡಿ, “ಭೂ ಸುಧಾರಣಾ ಕಾಯ್ದೆ, ಭೂಸ್ವಾಧೀನ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ರಾಗಿ ಮತ್ತು ಶೇಂಗಾ ಖರೀದಿ ಇನ್ನಿತರ ಕೃಷಿ ಉತ್ಪನ್ನಗಳ ಖರೀದಿ ಕೇಂದ್ರಗಳನ್ನು ತೆರೆಯಬೇಕು” ಎಂದು ಆಗ್ರಹಿಸಿದರು.

ಈಗ ಒಕ್ಕಣೆ ಕಾಲ. ದಳ್ಳಾಳಿಗಳು ನೇರ ರೈತರ ಮನೆಗಳಿಗೆ ಹೋಗಿ ರಾಗಿ, ಶೇಂಗಾ ಸೇರಿದಂತೆ ರೈತರ ಕೃಷಿ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಕ್ವಿಂಟಲ್ ರಾಗಿಗೆ 3000 ರೂ ಇದೆ. ದಳ್ಳಾಳಿಗಳು ಕೇವಲ 1500 ರೂಗೆ ಖರೀದಿಸುತ್ತಿದ್ದಾರೆ. ರೈತರಿಗೆ ಮೋಸವಾಗುತ್ತಿದೆ. ದಳ್ಳಾಳಿಗಳಿಗೆ ಹೆಚ್ಚಿನ ಲಾಭ ಮತ್ತು ಅನುಕೂಲವಾಗುತ್ತಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಟ್ಟು ಖರೀದಿ ಮಾಡಿ ಅಂದ್ರೆ ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಇದು ರೈತ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಕೊಡಲು ಹಣವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್.ಟಿ. ಪಾಲಿನ ಹಣವನ್ನು ಕೊಡುತ್ತಿಲ್ಲ. ತಾರತಮ್ಯ ಮಾಡುತ್ತಿದೆ. ರಾಜ್ಯದ ಪಾಲಿನ ಹಣವನ್ನು ಕೊಟ್ಟಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ರಾಜ್ಯದ 25 ಬಿಜೆಪಿ ಸಂಸದರಿದ್ದರೂ ಧಮ್ ಕಳೆದುಕೊಂಡಿದ್ದಾರೆ. ಪ್ರಧಾನಿಯನ್ನು ಪಟ್ಟು ಹಿಡಿದು ಕೇಳುತ್ತಿಲ್ಲ. ಕೇಂದ್ರ ಸರ್ಕಾರ ಜಿಎಸ್ ಟಿ ಹಣ ನೀಡಿ ಎಂದರೆ ಸಾಲಕೊಡುತ್ತೇವೆ ಎನ್ನುತ್ತಿದೆ. ಕೇಂದ್ರ ಸರ್ಕಾರದ ಕೆಟ್ಟ ನೀತಿಯಿಂದ ಸಮಸ್ಯೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

ಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

Posted by Naanu Gauri on Thursday, 5 November 2020

ಉತ್ತರ ಕರ್ನಾಟಕ ಭಾಗದಲ್ಲಿ ಶುಗರ್ ಮಾಫಿಯಾ ನಡೆಯುತ್ತಿದೆ. ಕಬ್ಬು ಖರೀದಿಸಿರುವ ಬಾಕಿ ಹಣ ಕೊಟ್ಟಿಲ್ಲ. ಶುಗರ್ ಮಿಲ್ ಮಾಲಿಕರು ತಮ್ಮದೇ ಸಹಕಾರಿ ಬ್ಯಾಂಕ್ ಗಳನ್ನು ತೆರೆದು ರೈತರಿಗೆ ಸಾಲವನ್ನು ಕೊಡುತ್ತೇವೆ ಎನ್ನುತ್ತಿದ್ದಾರೆ. ಮುರುಗೇಶ್ ನಿರಾಣಿ, ಸಾಹುಕಾರರು ಇದರ ಮುಖ್ಯಸ್ಥರಾಗಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರ ಹೇಳುತ್ತಿದೆ. ರೈತರು ಗೊಬ್ಬರ ಖರೀದಿಸಲು ದುಡ್ಡಿಲ್ಲ. ಸಾಲ ಕೊಡಲು ದುಡ್ಡಿದೆ. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುವಂತಹ ಸ್ಥಿತಿಯಲ್ಲಿ ಇಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಕೇರಳ ಸರ್ಕಾರ 16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆ ನೀಡುತ್ತಿದೆ. ಅದೇ ಮಾದರಿಯನ್ನು ರಾಜ್ಯದಲ್ಲೂ ಅನುಸರಿಸಬೇಕು. ಪಂಜಾಬ್ ರಾಜ್ಯದಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸಿದರೆ ಅಪರಾಧ ಎಂದಿದೆ. ಹಾಗಾಗಿ ರಾಜ್ಯದಲ್ಲೂ ಇದೇ ಕಾನೂನುನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ರೈತರ ಭೂಮಿ ವಶಪಡಿಸಿಕೊಂಡು ದಶಕಗಳೇ ಕಳೆದಿದ್ದರೂ ಇದುವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಸಿಕ್ಕಿಲ್ಲ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಶಾಮೀಲಾಗಿ ರೈತರಿಗೆ ವಂಚನೆ ಮಾಡಿದ್ದಾರೆ. ರೈತರ ಭೂಮಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೇ ನಿಲ್ಲಿಸಬೇಕು. ಹೇಮಾವತಿ ನಾಲೆಗೆ ವಶಪಡಿಸಿಕೊಂಡಿರುವ ರೈತರ ಭೂಮಿಗೆ 450 ಕೋಟಿ ಪರಿಹಾರ ಬಾಕಿ ಇರಿಸಿಕೊಂಡಿದೆ. ಮಾನಮರ್ಯಾದೆ ಇದ್ದರೆ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅದು ಬಿಟ್ಟು ಕೊರೊನ ನೆಪದಲ್ಲಿ ರೈತರು ಮತ್ತು ಕೂಲಿಕಾರರ ನೆರವಿಗೆ ಬಾರದೆ ಸರ್ಕಾರ ಅವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆಂಕೆರೆ ಸತೀಶ್, ಧನಂಜಯಾರಾಧ್ಯ, ರುದ್ರೇಶ್ ಗೌಡ, ನಾಗೇಂದ್ರ, ಮತ್ತೊಂದು ಕಡೆ ನಡೆದ ಪ್ರತಿಭಟನೆಯಲ್ಲಿ ಎಐಕೆಎಸ್.ಸಿಸಿ. ಕಾರ್ಯದರ್ಶಿ ಸಿ.ಯತಿರಾಜು, ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ  ಆರ್.ಕೆ.ಎಸ್ ಸಂಚಾಲಕ ಎಸ್.ಎನ್.ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...