Homeಮುಖಪುಟಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ: ಹಗಲುಗನಸು ಎಂದ ಟಿಎಂಸಿ!

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಅಮಿತ್ ಶಾ ಪಣ: ಹಗಲುಗನಸು ಎಂದ ಟಿಎಂಸಿ!

ಬಿಜೆಪಿ ಶ್ರೀಮಂತರ ಪಕ್ಷವಾಗಿದೆ. ಬುಡಕಟ್ಟು ಕುಟುಂಬದ ಮನೆಯಲ್ಲಿ ಊಟ ಮಾಡುವುದು ಕೇವಲ ನಾಟಕ. ಬಂಗಾಳದ ಜನರು ಎಂದಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಿಲ್ಲ - ಸೌಗತಾ ರಾಯ್

- Advertisement -
- Advertisement -

ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಆಡಳಿತರೂಢ ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಸರ್ಕಾರದ ಕೊನೆಯ ದಿನಗಳನ್ನು ಎಣಿಸುತ್ತಿದೆ., ಭಾರತೀಯ ಜನತಾ ಪಕ್ಷ (ಬಿಜೆಪಿ) ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಕುರಾ ಜಿಲ್ಲೆಯ ಪುಯಬಾಗನ್‌ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮಮತಾ ಬ್ಯಾನರ್ಜಿ ಸರ್ಕಾರವು ಬಡವರು, ರೈತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನರನ್ನು, ತುಳಿತಕ್ಕೊಳಗಾದವರನ್ನು ನಿರ್ಲಕ್ಷಿಸಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸಿರುವ ರೀತಿ, ಅವರ ಹತ್ಯೆಗಳನ್ನು ಸ್ಪಷ್ಟವಾಗಿ ನೋಡಬಹುದು ಎಂದು ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.

ಇದಕ್ಕೂ ಮುನ್ನಾ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಚಳವಳಿಯಲ್ಲಿ ಹೋರಾಡಿದ್ದ ಬಂಕುರಾ ಪ್ರದೇಶದ ಬುಡಕಟ್ಟು ಜನರ ನಾಯಕ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಹೂಮಾಲೆ ಹಾಕಿ ನಮನ ಸಲ್ಲಿಸಿದರು.

ಇದನ್ನೂ ಓದಿ: ’ಮೋದಿಜಿಯ ವೋಟಿಂಗ್ ಮಷಿನ್ & ಮೋದಿಜಿಯ ಮೀಡಿಯಾಕ್ಕೆ ನಾನು ಹೆದರುವುದಿಲ್ಲ’- ರಾಹುಲ್

“ಈ ಸರ್ಕಾರವನ್ನು ಉರುಳಿಸಲು ಮತ್ತು ಸುವರ್ಣ ಬಂಗಾಳವನ್ನು ನಿರ್ಮಿಸಲು ಬಿಜೆಪಿಗೆ ಅವಕಾಶ ನೀಡುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ ಮಾತಿಗೆ ಕೋಲ್ಕತ್ತಾದಲ್ಲಿ ಪ್ರತಿಕ್ರಿಯಿಸಿರುವ ಟಿಎಂಸಿ ಲೋಕಸಭಾ ಸದಸ್ಯ ಮತ್ತು ಪಕ್ಷದ ವಕ್ತಾರ ಸೌಗತಾ ರಾಯ್ “ಅಮಿತ್ ಶಾ ಹಗಲುಗನಸು ಕಾಣುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ. “ಬಿಜೆಪಿ ಸುವರ್ಣ ಬಂಗಾಳವನ್ನು ನಿರ್ಮಿಸುವ ಸಾಮರ್ಥ್ಯ ಹೊಂದಿದ್ದರೆ, ಅದು ಯಾಕೆ ಸುವರ್ಣ ಉತ್ತರ ಪ್ರದೇಶವನ್ನು ನಿರ್ಮಿಸುವುದಿಲ್ಲ?” ಎಂದು ತಿರುಗೇಟು ನೀಡಿದ್ದಾರೆ.

Mamata Banerjee AND Amit Shah
PC: The Statesman

ಕೊಲ್ಕತ್ತಾ ಬಳಿಯ ಮಥೂವಾ ದಲಿತ ಕುಟುಂಬದೊಂದಿಗೆ ಶುಕ್ರವಾರ ಊಟದ ವ್ಯವಸ್ಥೆ ಮಾಡಿರುವ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೌಗತಾ ರಾಯ್ ಇಬ್ಬರು ಇದನ್ನು ನಾಟಕ ಎಂದಿದ್ದಾರೆ.

“ಅವರಿಗೆ ಗೊತ್ತಿಲ್ಲ, ಕಳೆದ 20-25 ವರ್ಷಗಳಿಂದ ಬೊರೊಮಾ (ಮಥೂವಾ ಸಮುದಾಯದ ಹಿರಿಯ ತಾಯಿ) ಜೀವಂತವಾಗಿರುವವರೆಗೂ, ನಾನು ಅವರನ್ನು ನೋಡಿಕೊಳ್ಳುತ್ತಿದ್ದೆ. ನಾನು ಅವರನ್ನು ಆಸ್ಪತ್ರೆಗೆ ಸೇರಿಸುತ್ತಿದ್ದೆ ಆರೈಕೆ ಮಾಡುತ್ತಿದೆ. ಅಲ್ಲಿಗೆ ಮೊದಲು ಭೇಟಿ ನೀಡಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ಪ್ರಾರಂಭಿಸಿದ್ದು ನಾನು. ಕೆಲವರು ಹೊಸಬರು ಈಗ ಅಲ್ಲಿಗೆ ಧುಮಕುಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಇನ್ನೂ ಟಿಎಂಸಿ ಲೋಕಸಭಾ ಸದಸ್ಯ ಸೌಗತಾ ರಾಯ್, “ಬಿಜೆಪಿ ಶ್ರೀಮಂತರ ಪಕ್ಷವಾಗಿದೆ. ಬುಡಕಟ್ಟು ಕುಟುಂಬದ ಮನೆಯಲ್ಲಿ ಊಟ ಮಾಡುವುದು ಕೇವಲ ನಾಟಕ. ಬಂಗಾಳದ ಜನರು ಎಂದಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಿಲ್ಲ ”ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಪ್ರಯತ್ನ ಪಡುತ್ತಿರುವ ಬಿಜೆಪಿ ಸರ್ಕಾರ ಬಂಗಾಳದಲ್ಲಿ ಹಲವಾರು ರ್‍ಯಾಲಿಗಳನ್ನು ಆಯೋಜಿಸುತ್ತಿದೆ. ಲಾಕ್‌ಡೌನ್ ಮುಂಚೆ ಕೂಡ ಅಮಿತ್ ಶಾ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ ಆ ರ್‍ಯಾಲಿ ಅಷ್ಟು ಯಶಸ್ವಿಯಾಗಿರಲಿಲ್ಲ.

ಈಗ ಮತ್ತೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೈಗೊಳ್ಳಬೇಕಾಗಿದ್ದ ಪ್ರವಾಸವನ್ನು ರದ್ದುಗೊಳಿಸಿ ತಾವೇ ಎರಡು ದಿನಗಳ ಪ್ರವಾಸ ಆರಂಭಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಸಂಘಟಿಸುತ್ತಿದ್ದಾರೆ. ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಬಿಜೆಪಿ ರಾಜ್ಯ ಅಧ್ಯಕ್ಷರವರೆಗೂ ಸಭೆಗಳನ್ನು ನಡೆಸುತ್ತಿದ್ದಾರೆ.

ಕಳೆದ ತಿಂಗಳು ಕೂಡ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಆಡಳಿತವನ್ನು ವಿರೋಧಿಸಿ ನಾಲ್ಕು ಸ್ಥಳಗಳಲ್ಲಿ ರ್‍ಯಾಲಿ ಆಯೋಜಿಸಿತ್ತು. ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ ಅವರ ಕಚೇರಿ ಮುತ್ತಿಗೆ ಹಾಕಲು ಪ್ರಯತ್ನ ಪಟ್ಟಿತ್ತು. ಆದರೆ ಕೊರೊನಾ ಕಾರಣ ನೀಡಿ ಸಿಎಂ ಮಮತಾ ಕಚೇರಿಗೆ ರಜೆ ಘೋಷಿಸಿ ರ್‍ಯಾಲಿಯನ್ನು ವಿಫಲಗೊಳಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ. ಇನ್ನು ಮುಂದಿನ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳುಗಳು ಇರುವ ಕಾರಣ ಈಗಿನಿಂದಲೇ ಪಕ್ಷವನ್ನು ಬಲ ಪಡಿಸಲು ಬಿಜೆಪಿ ಪಣ ತೊಟ್ಟಿದೆ. ಇದಕ್ಕೆ ಪೂರಕವೆಂಬಂತೆ ಬಂಕುರಾ ಜಿಲ್ಲೆಯಲ್ಲಿ ನಡೆದ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿಸಿತ್ತು.


ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...