Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. - ಕಮಲ ಹಾಸನ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖಂಡರಾಗಿರುವ ನಟ ಕಮಲ್ ಹಾಸನ್ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜಕೀಯ ಕಾರ್ಯತಂತ್ರ ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮದು ನಿಂದನೆ ಮಾಡುವ ರಾಜಕೀಯವಲ್ಲ, ದಾರಿತೋರುವ ರಾಜಕೀಯವಾಗಿರುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಒಂದು ಲಕ್ಷ ಜನರು ’ಮಕ್ಕಳ್ ನೀದಿ ಮಯ್ಯಂ’ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಿಧ ಪಕ್ಷಗಳಲ್ಲಿ ಅನೇಕ ಒಳ್ಳೆಯ ಜನರು ಮನನೊಂದಿರುತ್ತಾರೆ. ಅವರು ನಮ್ಮೊಂದಿಗೆ ಬರಬೇಕು. ನಾವು ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ” ಎಂದರು.

ರಾಜಕೀಯದ ಬಗ್ಗೆ ರಜನಿಕಾಂತ್ ಜೊತೆ ಚರ್ಚಿಸಿದ್ದಾಗಿ ಹೇಳಿದ ಕಮಲ್, “ನಟ ರಜನಿಕಾಂತ್ ತನ್ನ ಆರೋಗ್ಯದ ಕಡೆ ಪ್ರಾಮುಖ್ಯತೆ ನೀಡುವಂತೆ ಸ್ನೇಹಿತನಾಗಿ ಸಲಹೆ ನೀಡಿದ್ದೇನೆ. ರಾಜಕೀಯಕ್ಕೆ ಬರುವ ಬಗ್ಗೆ ಅವರು ನಿರ್ಧರಿಸುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಅವರ ಬೆಂಬಲವನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ 3 ನೇ ತಂಡವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ. ಚುನಾವಣಾ ಆಯೋಗವು ನವೆಂಬರ್‌ನಲ್ಲಿ ನಮಗೆ ಅವಕಾಶ ನೀಡಿದೆ. ಆದ್ದರಿಂದ, ಮೈತ್ರಿಯ ಬಗ್ಗೆ ಮಾತನಾಡುವ ಕ್ಷಣ ಇದಲ್ಲ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕ್ಷೇತ್ರ ಸಂಶೋಧನೆ ಆಧರಿಸಿ ”ಮಕ್ಕಳ್ ನೀದಿ ಮಯ್ಯಂ” ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿದೆ. ನಾವು 100 ರಿಂದ 160 ಕ್ಷೇತ್ರದಗಳಲ್ಲಿ ಪ್ರಭಾವ ಬೀರಲಿದ್ದೇವೆ. ರಾಜಕೀಯದಲ್ಲಿ ನಮ್ಮ ನೀತಿ ”ಪ್ರಾಮಾಣಿಕತೆ” ಆಗಿದೆ. ನಾವು ಪ್ರಾಮಾಣಿಕರೆಂದು ಹೇಳಿಕೊಳ್ಳುವ ಜನರನ್ನು ಭೇಟಿಯಾಗುತ್ತೇವೆ. ಅದನ್ನು ಇತರರು ಹೇಳಬಹುದೇ ಎಂದು ಕಮಲ್‌ ಹಾಸನ್ ಪ್ರಶ್ನಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. ವಿಧಾನಸಭೆಯಲ್ಲಿ ಖಂಡಿತವಾಗಿ ”ಮಕ್ಕಳ್ ನೀದಿ ಮಯ್ಯಂ” ಪಕ್ಷದ ಧ್ವನಿ ಕೇಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಮನುಸ್ಮೃತಿ ಚಲಾವಣೆಯಲ್ಲಿಲ್ಲದ ಪುಸ್ತಕ

ಮನುಸ್ಮೃತಿ ಎಂಬುದು ಚಲಾವಣೆಯಲ್ಲಿಲ್ಲದ ಪುಸ್ತಕವಾಗಿದ್ದು, ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಆದರೆ ಯಾರಾದರೂ ಭಾರತೀಯ ಸಂವಿಧಾನದ ಬಗ್ಗೆ ಮಾತನಾಡಿದರೆ, ಪ್ರಶ್ನಿಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ಸಂಸ್ಕೃತಿಯಲ್ಲಿ ಹಲವು ವಿಷಯಗಳಿವೆ, ಸತಿಸಹಗಮನ ಪದ್ದತಿ ಕೂಡಾ ಸಂಸ್ಕೃತಿಯಾಗಿತ್ತು, ಸಂಸ್ಕೃತಿಯ ಹೆಸರಿನಲ್ಲಿ ಅದನ್ನು ಅನುಸರಿಸಬಾರದು. ಕಾಲ ಮತ್ತು ಅಗತ್ಯಗಳಿಗೆ ನಾವು ಹೊಂದಿಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು.

ಬಿಜೆಪಿಯು ನಡೆಸಲು ಉದ್ದೇಶಿಸಿದ ”ವೆಟ್ರಿವೇಲ್ ತೀರ್ಥಯಾತ್ರೆ” ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ತೀರ್ಥಯಾತ್ರೆಗೆ ಹೋಗದಿರುವುದೇ ಉತ್ತಮ, ಅದರ ಬದಲಿಗೆ ಉದ್ಯೋಗವನ್ನು ಕೊಡಿಸುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...