Homeಕರ್ನಾಟಕ’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

’ಕನ್ನಡ ಕಾಯಕ ವರ್ಷ’: ಲಾಂಛನ ಬಿಡುಗಡೆ ಮಾಡಿದ ಟಿ.ಎಸ್. ನಾಗಾಭರಣ

ಸುಲಭವಾಗಿ ಕನ್ನಡ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಆರಂಭಿಸಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿರುವ “ಕನ್ನಡ ಕಾಯಕ ವರ್ಷಾಚರಣೆ-2020ʼʼ ಯ ಲಾಂಛನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಿದರು.

ಲಾಂಛನ  ಬಿಡುಗಡೆ ಮಾಡುವ ಮೂಲಕ ಕನ್ನಡ ಕಾಯಕ ವರ್ಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಾಗಾಭರಣ, ಕಾರ್ಯಕ್ರಮವನ್ನು ಒಂದು ವರ್ಷಪೂರ್ತಿ ಅರ್ಥಪೂಣವಾಗಿ ಆಚರಿಸಲು ಹಲವು ಪ್ರತ್ಯೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಭಾಗಿತ್ವ ಬಹಳ ಮುಖ್ಯ ಎಂದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಮತ್ತಷ್ಟು ಸಮೃದ್ಧವಾಗಿ ವಿಸ್ತಾರಗೊಳಿಸಲು ಕನ್ನಡವನ್ನು ವಿವಿಧ ವಯೋಮಾನದ, ವಿವಿಧ ರಂಗಗಳ ಜನರು ಸುಲಭವಾಗಿ ಕಲಿಯುವಂತಾಗಲು ಆರಂಭಿಕ ಕ್ರಮವಾಗಿ ಇ-ಕನ್ನಡ ಕಲಿಕಾ ಅಕಾಡೆಮಿ ಪೋರ್ಟಲ್ ಒಂದನ್ನು ಆರಂಭಿಸಲಾಗಿದೆ. ಇಲ್ಲಿ ಕನ್ನಡ ಕಲಿಕೆ, ಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನೂ ಕಾಲಕಾಲಕ್ಕೆ ಸಂಗ್ರಹಿಸಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಮಾತು ತಪ್ಪಿದ ಕೇಂದ್ರ ಸರ್ಕಾರ – ಟಿ.ಎಸ್.ನಾಗಾಭರಣ

ರಾಜ್ಯ, ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗಲು ಹಾಗೂ ಅವರಿಗೆ ಉನ್ನತ ಶಿಕ್ಷಣದಲ್ಲಿ ಅವಕಾಶ ಸಿಗುವ ನಿಟ್ಟಿನಲ್ಲಿ “ಕನ್ನಡ ಭಾಷಾ ಕೌಶಲ್ಯ ಆನ್‌ಲೈನ್ ಪರೀಕ್ಷೆ” ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದರು

ಕನ್ನಡದಲ್ಲಿ ಇ-ಮೇಲ್ ವಿಳಾಸಗಳನ್ನು ರಚಿಸಿಕೊಳ್ಳಲು ಕೆಲ ದಿನಗಳಷ್ಟೇ ಕಾಯಬೇಕಿದೆ ಎಂಬ ಅಂಶವನ್ನು ನಾಗಾಭರಣ ತಿಳಿಸಿದ್ದಾರೆ. ’ಕರ್ನಾಟಕ.ಭಾರತ(ಕರ್ನಾಟಕ[ಡಾಟ್]ಭಾರತ) ಎಂಬ ಯು.ಆರ್‌.ಎಲ್ ಭಾರತ ಸರ್ಕಾರದ ನ್ಯಾಶನಲ್ ಇಂಟರ್ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾವು ಕರ್ನಾಟಕ ಸರ್ಕಾರದ ಬಳಕೆಗಾಗಿ ಮೀಸಲಿಟ್ಟಿದೆ.  ಇ–ಆಡಳಿತ ಇಲಾಖೆಯ ಮೂಲಕ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಇದು ಜಾರಿಯಾದಲ್ಲಿ ಇ-ಮೇಲ್‌ ವಿಳಾಸಗಳನ್ನು ಕನ್ನಡದಲ್ಲಿಯೇ ರಚಿಸಿಕೊಳ್ಳಬಹುದಾಗಿದೆ, ಆ ಮೂಲಕ ಜಗತ್ತಿನಾದ್ಯಂತ ಕನ್ನಡದ ಕಂಪನ್ನು ಪಸರಿಸಲು ಸಹಕಾರಿಯಾಗಲಿದೆ’ ಎಂದು ವಿವರಿಸಿದರು.

ಕನ್ನಡ ಲಿಪಿಯಲ್ಲೇ ಉಚಿತ ಇ-ಮೇಲ್ ಸೇವೆಯನ್ನು ಎಲ್ಲ ಕನ್ನಡಿಗರಿಗೆ  ನೀಡುವ ಸದುದ್ದೇಶದಿಂದ ಕರ್ನಾಟಕ ಸರ್ಕಾರವು ಈಗಿರುವ “.ಭಾರತ್“ (ಡಾಟ್ ಭಾರತ್) ಸೇವೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಎಲ್ಲ ಜಾಲತಾಣ (ವೆಬ್ಸೈಟ್)ಗಳನ್ನು ಕನ್ನಡಕ್ಕೆ ಬದಲಾಯಿಸಿದರೆ ಕನ್ನಡದಲ್ಲೇ ಇ-ಮೈಲ್ ಸೇವೆಯನ್ನೂ ನೀಡಬಹುದು (ಉದಾಹರಣೆಗೆ ಮುಖ್ಯಮಂತ್ರಿ@ಕರ್ನಾಟಕ.ಭಾರತ) ಎಂದರು.

ಒಟ್ಟಾರೆ ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಮಾತ್ರವಲ್ಲದೇ ಜಾಲತಾಣಗಳ ಹೆಸರುಗಳನ್ನು ಕನ್ನಡದಲ್ಲೇ ಬಳಸಲು ಅವಕಾಶ ಒದಗಿಸಿ, ಆ ಮೂಲಕ ಕನ್ನಡ ಭಾಷೆಯನ್ನು ಜಗತ್ತಿನಾದ್ಯಂತ ಪಸರಿಸಬಹುದು ಎಂದಿದ್ದಾರೆ.

ಇನ್ನೂ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜಾಲತಾಣಗಳಲ್ಲಿ ಸಂಪೂರ್ಣವಾಗಿ ಕನ್ನಡವನ್ನು ಬಳಸುವ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೂ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, “ಕನ್ನಡ ಕಾಯಕ ವರ್ಷ”ದಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಾಧಿಕಾರ ಅಧ್ಯಕ್ಷ ನಾಗಭರಣ ತಿಳಿಸಿದ್ದಾರೆ.

ಟಿ.ಎಸ್.ನಾಗಾಭರಣ

ಇದರ ಜೊತೆಗೆ ಕನ್ನಡ ಕಾಯಕ ವರ್ಷಾಚರಣೆಯಲ್ಲಿ ನಾಗರಿಕರು, ಖಾಸಗಿ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಸಂಘಸಂಸ್ಥೆಗಳನ್ನು ಒಳಗೊಳ್ಳಲು ಯೋಜನೆ ರೂಪಿಸಲಾಗುತ್ತದೆ. ಪ್ರಾಯೋಗಿಕವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಕರ್ನಾಟಕ ನಾಡಿನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕಿರುಹೊತ್ತಿಗೆಗಳನ್ನು ಪ್ರಕಟಿಸಲಾಗುವುದು. “ಹಾಡಬನ್ನಿ-ನೋಡಬನ್ನಿʼʼ ಕಾರ್ಯಕ್ರಮದ ಮೂಲಕ 10 ಕಿರುಚಿತ್ರ ಮತ್ತು ಹಾಡುಗಳಿಗೆ ವರ್ಷಾಂತ್ಯಕ್ಕೆ ಪ್ರಶಸ್ತಿಯನ್ನು ನೀಡಲಾಗುವುದು. ವಿವಿಧ ಗಣ್ಯರಿಂದ ನಾಡಿನ ಮಕ್ಕಳಿಗೆ “ಉದ್ಯೋಗ ಪೂರ್ವ ಯೂಟ್ಯೂಬ್ ತರಬೇತಿ” ಹಮ್ಮಿಕೊಳ್ಳಲಾಗುವುದು ಎಂದರು.


ಇದನ್ನೂ ಓದಿ:ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...