Homeಮುಖಪುಟಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಅರ್ನಬ್ ಗೋಸ್ವಾಮಿಗೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ

- Advertisement -
- Advertisement -

2018 ರ ಆತ್ಮಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆಯಲು ವಿಫಲರಾಗಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎಸ್ ಎಸ್ ಶಿಂಧೆ ಮತ್ತು ನ್ಯಾಯಮೂರ್ತಿ ಎಂ ಎಸ್ ಕಾರ್ನಿಕ್ ಅವರ ವಿಭಾಗೀಯ ನ್ಯಾಯಪೀಠ, ಎರಡೂ ಕಡೆಯ ವಿಚಾರಣೆ ನಡೆಸಿ ನಾಳೆ ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ ಖಂಡಿಸಿ ಟ್ರೋಲ್‌ಗೊಳಗಾದ ಬೆಂಗಳೂರು ಎಡಿಟರ್ಸ್‌ ಗಿಲ್ಡ್!

ತಮ್ಮ ವಕೀಲರುಗಳಾದ ಆದಾರ್ ಪೊಂಡ ಹಾಗೂ ಹರೀಶ್ ಸಾಳ್ವೆ ಮೂಲಕ ಅಪೀಲು ಸಲ್ಲಿಸಿರುವ ಅರ್ನಬ್ ತಮ್ಮನ್ನು ಕನಿಷ್ಠ ಜಾಮೀನಿನ ಮೇಲೆ ಬಿಡುಗಡೆಗೊಳಿಸುವಂತೆ ಕೋರಿದ್ದರು. ಈ ನಿರ್ದಿಷ್ಟ ಪ್ರಕರಣವನ್ನು ಎಪ್ರಿಲ್ 2019 ರಲ್ಲಿಯೇ ಮುಚ್ಚಲಾಗಿರುವುದರಿಂದ ಮರು ತನಿಖೆ ನಡೆಸುವುದು ಹಾಗೂ ಬಂಧನ ಅಕ್ರಮವಾಗಿದೆ ಎಂದು ಅವರು ತಿಳಿಸಿದ್ದರು.

ಅರ್ನಬ್ ಪರ ಅಪೀಲನ್ನು ತಿರಸ್ಕರಿಸಿದ ನ್ಯಾಯಾಲಯ, ’ರಾಜ್ಯ ಸರಕಾರ, ಇತರ ಪ್ರತಿವಾದಿಗಳು ಹಾಗೂ ಈ ಪ್ರಕರಣದ ಮಾಹಿತಿದಾರರ (ಅನ್ವಯ್ ನಾಯ್ಕ್ ಅವರ ಪತ್ನಿ ಅಕ್ಷತಾ) ವಾದವನ್ನು ಆಲಿಸದೆ ಅಪೀಲನ್ನು ಮನ್ನಿಸಲು ಸಾಧ್ಯವಿಲ್ಲ. ಅವರಿಗೆ ತಡವಾಗಿ ನೋಟಿಸ್ ಜಾರಿಯಾಗಿರುವುದರಿಂದ ಇಂದು ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನಿನ್ನೆ ಮುಂಜಾನೆ ವಶಕ್ಕೆ ಪಡೆದುಕೊಂಡಿದ್ದರು.

ಜೊತೆಗೆ, ಬಂಧನದ ಸಮಯದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅರ್ನಾಬ್ ಗೋಸ್ವಾಮಿ, ಅವರ ಪತ್ನಿ, ಮಗ ಮತ್ತು ಇನ್ನಿಬ್ಬರ ವಿರುದ್ಧ ಮುಂಬೈ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...