Homeಮುಖಪುಟಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಮತ್ತೆ ಸಿನಿಪ್ರಿಯರಿಗಾಗಿ ಮತ್ತೆ ಓಪನ್ ಆಗಿವೆ. ಆದರೆ ಹೊಸ ಚಿತ್ರಗಳನ್ನು ಥಿಯೇಟರ್‌ಗಳಿಗೆ ಬಿಡುಗಡೆ ಮಾಡಲು ಚಿತ್ರತಂಡಗಳು ಅಷ್ಟೊಂದು ಧೈರ್ಯವಹಿಸುತ್ತಿಲ್ಲ. ಇದರ ಕಾರಣ ಹಳೆಯ ಬ್ಲಾಕ್‌ ಬ್ಲಾಸ್ಟರ್‌ ಚಿತ್ರಗಳನ್ನೇ ರಿರಿಲೀಸ್ ಮಾಡಲು ಹೊರಟಿವೆ.

ಚಿತ್ರಮಂದಿರಗಳಿಗೆ ಹೋಗುವ ಜನರು ಕಡಿಮೆಯಾಗಿದ್ದಾರೆ. ಚಿತ್ರಮಂದಿರ ಓಪನ್ ಇದ್ದರೂ ಕೊರೊನಾ ಆತಂಕ ಇನ್ನು ಜನರನ್ನು ಬಿಟ್ಟಿಲ್ಲ. ಕೆಲವು ಸಿನಿಮಾ ನಿರ್ದೇಶಕರು ಮಾತ್ರ ತಮ್ಮ ಚಿತ್ರಗಳು ಜನರನ್ನು ಚಿತ್ರಮಂದಿರದತ್ತ ಸೆಳೆಯುತ್ತವೆ ಎಂಬ ಭರವಸೆಯಲ್ಲಿ ಚಿತ್ರ ಬಿಡುಗಡೆಗೆ ಸಿದ್ಧರಾಗಿದ್ದಾರೆ.

ಭಾರತೀಯ ಚಿತ್ರರಂಗವೇ ದಕ್ಷಿಣ ಭಾರತದ ಸಿನಿ ರಂಗದ ಕಡೆ ತಿರುಗುವಂತೆ ಮಾಡಿದ ಚಿತ್ರ ಎಂದರೆ ಎಸ್​.ಎಸ್​ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳು. 2015 ರಲ್ಲಿ ರಿಲೀಸ್ ಆಗಿದ್ದ ಬಾಹುಬಲಿ-ದಿ ಬಿಗಿನ್ನಿಂಗ್ ಹಾಗೂ 2017 ರಲ್ಲಿ ಅದರ ಮುಂದುವರಿದ ಭಾಗವಾಗಿ ಬಂದ ಬಾಹುಬಲಿ-ದಿ ಕನ್​ಕ್ಲೂಷನ್ ಸಿನಿಮಾ ಸೂಪರ್‌ ಹಿಟ್ ಆಗಿದ್ದವು.

ಇದನ್ನೂ ಓದಿ: ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ಈ ಸಿನಿಮಾಗಳನ್ನು ದೊಡ್ಡಪರದೆಯಲ್ಲಿ ಮಿಸ್ ಮಾಡಿಕೊಂಡವರಿಗಾಗಿ ಮತ್ತೆ ಸಿನಿಮಾ ನೋಡುವ ಅವಕಾಶ ಬರುತ್ತಿದೆ. ಇವತ್ತು ಬಾಹುಬಲಿ-ದಿ ಬಿಗಿನ್ನಿಂಗ್ ಮತ್ತೆ ರಿಲೀಸ್ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿದೆ. ಬಾಹುಬಲಿ-ದಿ ಕನ್​ಕ್ಲೂಷನ್ ಮುಂದಿನ ಶುಕ್ರವಾರ ಅಂದರೆ ನವೆಂಬರ್​ 13 ರಂದು ರೀ ರಿಲೀಸ್​ ಆಗಲಿವೆ. ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಈ ವಿಚಾರವನ್ನ ಟ್ವಿಟರ್​​ನಲ್ಲಿ ತಿಳಿಸಿದ್ದಾರೆ

ನಟ ಪ್ರಭಾಸ್​, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ ಮುಂತಾದ ಸ್ಟಾರ್​ ನಟ ನಟಿಯರು ಅಭಿನಯಿಸಿದ್ದ ಈ ಸಿನಿಮಾ ಭಾರತದ ಜೊತೆಗೆ ವಿದೇಶಗಳಲ್ಲೂ ತೆರೆ ಕಂಡಿತ್ತು. ಅಲ್ಲದೆ ಅಂತರಾಷ್ಟ್ರೀಯ ಫಿಲ್ಮ್​​​ ಫೆಸ್ಟ್​​​ಗಳಾದ ಬ್ರಿಟಿಷ್​ ಫಿಲ್ಮ್​​ ಇನ್ಸ್​​ಟಿಟ್ಯೂಟ್​ ಹಾಗೂ 39 ನೇ ಮಸ್ಕೋ ಇಂಟರ್‌ನ್ಯಾಷನಲ್​ ಫಿಲ್ಮ್​​ ಫೆಸ್ಟಿವಲ್​ನಲ್ಲೂ ಉತ್ತಮ ಪ್ರದರ್ಶನ ಕಂಡಿತ್ತು.

ಇನ್ನು ನಟ, ನಿರ್ದೇಶಕ ರಿಷಬ್​ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದು ಸಾಕಷ್ಟು ಮೆಚ್ಚುಗೆ ಗಳಿಸಿದ್ದ, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತೆ ಸಿನಿಮಾ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ.

PC:Rishabshettyfilms@Instagram

2018 ರ ಆಗಸ್ಟ್​ನಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ 125 ದಿನಗಳ ಭರ್ಜರಿ ಪ್ರದರ್ಶನ ಕಂಡಿತ್ತು. ಸಾಕಷ್ಟು ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದ ಚಿತ್ರ ಮಕ್ಕಳು-ಹಿರಿಯರು ಎಲ್ಲರ ಮನಸ್ಸನ್ನು ಗೆದ್ದುಕೊಂಡಿತ್ತು.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...