Homeಮುಖಪುಟಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!

- Advertisement -
- Advertisement -

11 ತಿಂಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ನಿಂದ ಟ್ರೋಲ್‌ಗೊಳಗಾಗಿದ್ದ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್, ಇಂದು ಸೋಲಿನ ಸನಿಹದಲ್ಲಿರುವ ಟ್ರಂಪ್‌ಗೆ ಅವರು ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ, ಭರ್ಜರಿ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡಿದ್ದಾರೆ.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು.

11 ತಿಂಗಳಿನಿಂದ ತಾಳ್ಮೆಯಿಂದ ಕಾಯ್ದಿದ್ದ ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದಾರೆ. ಮತ ಎಣಿಕೆ ನಿಲ್ಲಿಸಿ ಎಂದು ಟ್ರಂಪ್ ಮಾಡಿದ್ದ ಟ್ವೀಟ್‌ಗೆ ಗ್ರೇಟಾ ಹೀಗೆ ಪ್ರತಿಕ್ರಿಯೆ ನೀಡಿದ್ದಾಳೆ.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಟ್ವೀಟ್ ಮಾಡಿದ್ದಾಳೆ.

ಈ ಟ್ವೀಟ್‌ಗೆ 12 ಲಕ್ಕಕ್ಕೂ ಅಧಿಕ ಜನ ಲೈಕ್ ಮಾಡಿರುವುದಲ್ಲದೇ ಲಕ್ಷಕ್ಕೂ ಅಧಿಕ ಮಂದಿ ಅದನ್ನು ರೀಟ್ವೀಟ್ ಮಾಡಿದ್ದಾರೆ. ಆ ಮೂಲಕ ಗ್ರೇಟಾ ಹೇಳಿಕೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ.

2019ರ ಡಿಸೆಂಬರ್‌ನಲ್ಲಿ ಗ್ರೇಟಾ ವಿರುದ್ಧ ಟ್ರಂಪ್ “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಮಾಡಿದ್ದರು. ಅದಕ್ಕೆ 2 ಲಕ್ಷ ಜನ ಲೈಕ್ ಒತ್ತಿದ್ದರು.

ಈಗ ಗ್ರೇಟಾ ತಿರುಗೇಟಿಗೆ ನೆಟ್ಟಿಗರು ಥ್ರಿಲ್ ಗೊಳಗಾಗಿದ್ದಾರೆ. ಒಂದೆಡೆ ಟ್ರಂಪ್ ಸೋಲುತ್ತಿದ್ದಂತೆ ಇನ್ನೊಂದೆಡೆ ಈ ಟ್ವೀಟ್ ಬಂದಿದ್ದು, ನೂರಾರು ಜನ ಗ್ರೇಟಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ? ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು ಎಂದು ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಗ್ರೇಟಾ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.


ಇದನ್ನೂ ಒದಿ: ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...