Homeಅಂತರಾಷ್ಟ್ರೀಯಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ - ಯಾರಿವರು? ; ಸಂಕ್ಷಿಪ್ತ ಪರಿಚಯ

ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಮತ ಎಣಿಕೆ ಮುಗಿದು, ಇಡೀ ವಿಶ್ವವೆ ಮುಂದಿನ ಅಧ್ಯಕ್ಷ ಯಾರು ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ. ಈ ಹಿಂದೆ ಅಮೆರಿಕ ಉಪಾಧ್ಯಕ್ಷರಾಗಿದ್ದ ಡೆಮಾಕ್ರಟಿಕ್ ಪಕ್ಷದ ’ಜೋ ಬಿಡೆನ್’ ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ 46 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಪರಿಚಯ ನಾನುಗೌರಿ.ಕಾಮ್ ಓದುಗರಿಗಾಗಿ ಇಲ್ಲಿದೆ.

ಜೋಸೆಫ್ ರಾಬಿನೆಟ್ ಬಿಡೆನ್ ಜೂನಿಯರ್(Joseph Robinette Biden Jr) ಎಂಬ ಹೆಸರಿನ 77 ವರ್ಷದ “ಜೋ ಬಿಡೆನ್” ಎಂದು ಕರೆಯಲ್ಪಡುವ ಇವರು ಅಮೆರಿಕದ ಪೆನ್ಸಿಲ್ವೇನಿಯಾ ರಾಜ್ಯದ ಸ್ಕ್ರಾಂಟನ್‌ನಲ್ಲಿ ನವೆಂಬರ್ 20, 1942 ಜನಿಸಿದರು. ತಮ್ಮ ನಾಲ್ಕು ಮಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಮೊಮ್ಮಕ್ಕಳನ್ನು ಹೊಂದಿದ್ದಾರೆ. ಪ್ರಸ್ತುತ ಅಮೆರಿಕದ ವಿಲ್ಮಿಂಗ್ಟನ್ ರಾಜ್ಯದ ಡೆಲವೇರ್‌ನಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು 

10 ನೇ ವಯಸ್ಸಿನಲ್ಲಿ ಬಿಡೆನ್ (1953) (PC: Buzzfeed)

1972 ರಲ್ಲಿ ಡೆಲವೇರ್‌ನಿಂದ ಮೊದಲ ಬಾರಿ ಸೆನೆಟರ್ ಆಗಿ ಆಯ್ಕೆಯಾಗಿದ್ದ ಇವರು, ಇದುವರೆಗೂ ಆರು ಭಾರಿ ಸೆನೆಟರ್‌ ಆಗಿ ಚುನಾಯಿತರಾಗಿದ್ದಾರೆ. ಬರಾಕ್ ಒಬಾಮ ಅಧ್ಯಕ್ಷರಾಗಿದ್ದ ಕಾಲದಲ್ಲಿ 47 ನೇ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಡೆಮಾಕ್ರಟಿಕ್ ಪಕ್ಷದಿಂದ 1988 ಮತ್ತು 2008 ರಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನವನ್ನೂ ಕೋರಿದ್ದರು.

ಸುಮಾರು ಅರ್ಧ ಶತಮಾನದಿಂದ ಸಾರ್ವಜನಿಕ ಜೀವನದಲ್ಲಿರುವ ಬಿಡೆನ್ ತಮ್ಮ ಸರ್ಕಾರದ ಅನುಭವವನ್ನು ಒತ್ತಿಹೇಳುತ್ತಾ, ಅಪಾಯಕಾರಿ ಮತ್ತು ಅನಿಶ್ಚಿತ ಜಗತ್ತಿನಲ್ಲಿ ಸ್ಥಿರವಾಗಿ, ಪರಿಭ್ರಮಿತ ವ್ಯಕ್ತಿಯಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

22 ನೇ ವಯಸ್ಸಿನಲ್ಲಿ ಬಿಡೆನ್  PC: Wiki

ಕೊರೊನಾ ವೈರಸ್ ಬಿಕ್ಕಟ್ಟು ಪ್ರಾರಂಭವಾಗುತ್ತಿದ್ದಂತೆ, ಮತದಾರರನ್ನು ಸೆಳೆಯಲು ಆರೋಗ್ಯ ರಕ್ಷಣೆ ಮತ್ತು ಅರ್ಥಶಾಸ್ತ್ರ ತಜ್ಞರ ಸಲಹೆಯಂತೆ ಹಲವು ಶಿಫಾರಸುಗಳನ್ನು ರೂಪಿಸಿದ್ದರು. ಕೊರೊನಾ ವೈರಸ್ ಪರೀಕ್ಷೆಗಳನ್ನು ಇನ್ನೂ ಹಚ್ಚು ಮಾಡುವುದು ಮತ್ತು ಉಚಿತಗೊಳಿಸಿವುದು, ರೋಗಿಗಳಿಗೆ ಲಸಿಕೆಯನ್ನು ಕೂಡಾ ಉಚಿತವಾಗಿ ನೀಡುವುದು ಕೂಡಾ ಇವರ ಶಿಫಾರಸ್ಸಿನಲ್ಲಿದೆ. ಅಷ್ಟೇ ಅಲ್ಲದೆ ಮಾಜಿ ಅಧ್ಯಕ್ಷ ಟ್ರಂಪ್ ಕೊರೊನಾ ವೈರಸ್ ಅನ್ನು ನಿರ್ವಹಿಸಿದ್ದನ್ನು ತೀವ್ರವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಜೋ ಬಿಡೆನ್ ”ಆರೈಕೆ ಕಾಯ್ದೆ”ಯ ಅಂಗೀಕಾರದ ಸಮಯದಲ್ಲಿ ಒಬಾಮಾ ಆಡಳಿತದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಮತ್ತು ಆರೋಗ್ಯ ರಕ್ಷಣೆ ತನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದರು. ಇದು ಅವರ ಕುಟುಂಬದ ವೈಯಕ್ತಿಕ ದುರಂತಗಳನ್ನು ನೆನಪಿ ಹೇಳುವ, ಚರ್ಚಿಸುವ ಮಾತಾಗಿದ್ದು, 1972 ರಲ್ಲಿ ನಡೆದ ಕಾರು ಅಪಘಾತವೊಂದರಲ್ಲಿ ತಮ್ಮ ಮೊದಲ ಹೆಂಡತಿ ಮತ್ತು ಮಗಳನ್ನು ಕಳೆದುಕೊಂಡಿದ್ದರು ಮತ್ತು 2015 ರಲ್ಲಿ ಅವರ ಮಗ ಬ್ಯೂ ಬಿಡೆನ್ ಮೆದುಳಿನ ಕ್ಯಾನ್ಸರ್‌‌ನಿಂದ ನಿಧನರಾದ್ದರು. ಹಾಗಾಗಿಯೆ ಆರೋಗ್ಯ ರಕ್ಷಣೆಯನ್ನು ಅವರು “ವೈಯಕ್ತಿಕ ಆದ್ಯತೆ” ಎನ್ನುತ್ತಾರೆ.

ತನ್ನ ಎರಡನೇ ಪತ್ನಿ ಜಿಲ್ ಅವರೊಂದಿಗೆ, PC: Azcentral

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಬೆಳಗಾವಿ ಮೂಲದ ಶ್ರೀ ಥಾಣೇದಾರ್‌ ’ಪ್ರತಿನಿಧಿ ಸಭೆ’ಗೆ ಆಯ್ಕೆ

ಅಮೆರಿಕ ಸೆನೆಟ್‌ನಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಬಿಡೆನ್, ದ್ವಿಪಕ್ಷೀಯತೆ ಮೌಲ್ಯವನ್ನು ತಾನು ದೃಡವಾಗಿ ನಂಬುತ್ತೇನೆ ಎನ್ನುತ್ತಾರೆ. ತಮ್ಮ ಪ್ರತಿಸ್ಫರ್ಧಿ ರಿಪಬ್ಲಿಕನ್‌ ಪಕ್ಷದವರೊಂದಿಗೂ ಸಮಾಲೋಚನೆ ಮಾಡುತ್ತಾರೆ ಮತ್ತು ಅವರ ಅಭಿಪ್ರಾಯಗಳನ್ನು ಕೇಳುತ್ತಾರೆ.

77 ಹರೆಯದ ಬಿಡೆನ್ ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ರೊನಾಲ್ಡ್ ರೇಗನ್ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದರು. 1989 ರಲ್ಲಿ ರೇಗನ್ ಅಧಿಕಾರ ತೊರೆದಾಗ ಅವರಿಗೆ 77 ವರ್ಷವಾಗಿತ್ತು. ಇಷ್ಟೇ ಅಲ್ಲದೆ ಜೋ ಬಿಡೆನ್ ಅಮೆರಿಕದ ಇತಿಹಾಸದಲ್ಲೇ ಅತೀ ಹೆಚ್ಚು ಮತಗಳನ್ನು ಪಡೆದ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಈ ದಾಖಲೆ ಬರಾಕ್ ಒಬಾಮೆ ಅವರ ಹೆಸರಲ್ಲಿತ್ತು. ಕಳೆದ 100 ವರ್ಷಗಳಲ್ಲಿ ಅತಿಹೆಚ್ಚು ಮತದಾನದ ಪ್ರಮಾಣ ಅಮೆರಿಕಾ ಈ ಬಾರಿ ಕಂಡಿದೆ.

ತಮ್ಮ ಕುಟುಂಬದೊಂದಿಗೆ ಜೋ ಬಿಡೆನ್ (PC: Twitter Via Bloomberg)

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...