Homeಅಂತರಾಷ್ಟ್ರೀಯಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಅಮೆರಿಕಾದಲ್ಲಿ ಒಬ್ಬ ವ್ಯಕ್ತಿಯ ಆಯ್ಕೆಯಲ್ಲಿ ಆ ವ್ಯಕ್ತಿಯ ಜನಾಂಗ ಮತ್ತು ಲಿಂಗವು ಅತ್ಯಂತ ನಿರ್ಣಾಯಕ ಮಾನದಂಡಗಳಾಗಿವೆ. ಅಂತಹ ರಾಷ್ಟ್ರದಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಜೋ ಬಿಡನ್, ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷ ಅಭ್ಯರ್ಥಿಯಾಗಿ ಘೋಷಿಸಿದರು.

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದ ಮೂಲದ ಕಮಲಾ ಹ್ಯಾರಿಸ್ ಅಮೆರಿಕಾ ಸೆನೆಟರ್ ಆದ ದಕ್ಷಿಣ ಏಷ್ಯಾದ ಮೊದಲ ಮಹಿಳೆ. ಹ್ಯಾರಿಸ್ ತಂದೆ ಜಮೈಕಾದವರು, ತಾಯಿ ದಕ್ಷಿಣ ಭಾರತದವರು, ತಂದೆಯಿಂದ ಬೇರ್ಪಟ್ಟು ತಾಯಿಯೊಂದಿಗೆ ಬೆಳೆದಿದ್ದಾರೆ.

ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಉನ್ನತ ವ್ಯಾಸಂಗಕ್ಕಾಗಿ ಬರ್ಕ್ಲಿ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಅಲ್ಲಿ ಅವರು ನಾಗರಿಕ ಹಕ್ಕುಗಳ ಚಳುವಳಿಯಲ್ಲಿ ತಮ್ಮ ಭಾವಿ ಪತಿ ಡೊನಾಲ್ಡ್ ಜೆ ಹ್ಯಾರಿಸ್‌ರನ್ನು ಭೇಟಿಯಾದರು.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ಹ್ಯಾರಿಸ್ ತಮ್ಮ ಮಾತುಗಳಲ್ಲಿ ಆಗ್ಗಾಗೆ ತನ್ನ ಮತ್ತು ಭಾರತದ ಸಂಬಂಧವನ್ನು ನೆನಪಿಸಿಕೊಂಡಿದ್ದಾರೆ. ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದ್ದು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು.

“ಆಕೆಯಲ್ಲಿ ಭಾರತೀಯ ಪರಂಪರೆ ಇನ್ನೂ ಇರುವುದರಿಂದ, ಕೆಲವೊಮ್ಮೆ ತನ್ನ ವೈಯಕ್ತಿಕ ಕಥೆಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಾರೆ” ಎಂದು 2019ರ ಅಕ್ಟೋಬರ್‌ನಲ್ಲಿ ಅಮೆರಿಕಾದ LA ಟೈಮ್ಸ್ ವರದಿ ಮಾಡಿತ್ತು.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇತ್ತಿಚೆಗೆ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್ ಮತ್ತು ಯಾವುದೇ ರೀತಿಯ ಟಿಕ್ಕಾ ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಭಾರತದ ಬಗ್ಗೆ ತನ್ನ ಮೂಲ ಭಾರತದ್ದು ಎಂಬುದನ್ನು ಹ್ಯಾರಿಸ್ ಎಂದಿಗೂ ಬಿಟ್ಟುಕೊಟ್ಟಿಲ್ಲ. ಸಿಗುವ ಪ್ರತಿ ಅವಕಾಶದಲ್ಲೂ ಭಾರತದ ಬಗೆಗಿನ ತಮ್ಮ ಪ್ರೀತಿಯನ್ನು ಒತ್ತಿ ಹೇಳುತ್ತಾ ಬಂದಿದ್ದಾರೆ.

Kamala Harris's husband and potential 'second gentleman' - BBC News
PC: BBC

ಡೊನಾಲ್ಡ್ ಟ್ರಂಪ್ ಅವರಿಂದ ಕಮ್ಯೂನಿಸ್ಟ್ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದ ಹ್ಯಾರಿಸ್ ಅಧ್ಯಯನ ಕೂಡ ಕಪ್ಪು ಜನರ ಅಧ್ಯಯನಗಳು, ನಾಯಕರು ಮತ್ತು ಸಂಸ್ಕೃತಿ ಕ್ಷೇತ್ರಕ್ಕೆ ಹತ್ತಿರವಾಗಿತ್ತು. ಹ್ಯಾರಿಸ್ “ಐತಿಹಾಸಿಕವಾಗಿ ಕಪ್ಪು ಕಾಲೇಜು ಮತ್ತು ವಿಶ್ವವಿದ್ಯಾಲಯ” ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಅಧ್ಯಯನ ಮಾಡಿದ್ದರು.

ಕಪ್ಪು ಮಹಿಳೆಯಾಗಿ ಹ್ಯಾರಿಸ್ ಹೆಸರು “ಬ್ಲ್ಯಾಕ್ ಲೈವ್ಸ್ ಮ್ಯಾಟರ್”(ಕಪ್ಪು ಜನರ ಜೀವನವೂ ಮುಖ್ಯ) ಚಳವಳಿಯ ಮುಂಚೂಣಿಯಲ್ಲಿದೆ. ಇದು 1960ರ ನಾಗರಿಕ ಹಕ್ಕುಗಳ ಚಳವಳಿಯ ನಂತರ ಅಮೆರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಕಪ್ಪು ಜನಾಂಗದ ಬಗ್ಗೆ ನಡೆದ ದೊಡ್ಡ ಪ್ರತಿಭಟನೆಗಳು.

13% ಇರುವ ಕಪ್ಪು ಜನಾಂಗದ ಮತದಾರರಿಗೆ ಹೋಲಿಸಿದರೆ ಏಷ್ಯಾದ ಅಮೆರಿಕನ್ನರು ಕೇವಲ 5% ಮತದಾರರನ್ನು ಹೊಂದಿದ್ದಾರೆ. ಅಮೆರಿಕಾದಲ್ಲಿ ಜನಾಂಗದ ಅಡಿಪಾಯವು ಕಪ್ಪು ಮತ್ತು ಬಿಳಿ ರಾಜಕೀಯದ ಮೇಲೆ ಸ್ಥಿರವಾಗಿದೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಉಪಾಧ್ಯಕ್ಷ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಲು ಕಾರಣವಾದ ಅಂಶಗಳು

ಈ ಬಾರಿಯ ಅಮೆರಿಕಾ ಚುನಾವಣೆಯ ಬದಲಾವಣೆಯ ಪರ್ವ ಬೈಡನ್‌ಗೆ, ಕಪ್ಪು, ಭಾರತೀಯ-ಅಮೆರಿಕನ್ ಮಹಿಳಾ ಅಭ್ಯರ್ಥಿ ಸುರಕ್ಷಿತ ಆಯ್ಕೆ ಎಂಬುದನ್ನು ತಿಳಿಸಿ ಕೊಟ್ಟಿತ್ತು. ಆಗ ಅವರ ಕಣ್ಣಿಗೆ ಬಿದ್ದವರು ಸೆನೆಟರ್‌ ಕಮಲಾ ಹ್ಯಾರಿಸ್.

ಆರಂಭದಲ್ಲಿ, ಬೈಡೆನ್‌ರ ಆಯ್ಕೆಗಳ ಸರಣಿಯು ಬಹುತೇಕ ಮಹಿಳೆಯರೆ ಆಗಿದ್ದರು. ಆದರೆ ಮೇ ತಿಂಗಳಲ್ಲಿ “ಬ್ಲ್ಯಾಕ್ ಲೈವ್ಸ್ ಮ್ಯಾಟರ್” ಚಳವಳಿ ಸ್ಫೋಟಗೊಂಡ ನಂತರ, ಬೈಡೆನ್‌ಗೆ ಕಪ್ಪು ಜನಾಂಗದ ವ್ಯಕ್ತಿಯನ್ನು ಆಯ್ಕೆ ಮಾಡಲು ಒತ್ತಡ ಉಂಟು ಮಾಡಿತ್ತು.

ನಂತರ ಬೈಡನ್ ಕಪ್ಪು ಮಹಿಳೆಯನ್ನು ಆಯ್ಕೆ ಮಾಡುವ ಉದ್ದೇಶವನ್ನು ಜೂನ್‌ನಲ್ಲಿ ಘೋಷಿಸಿದರು. ಹ್ಯಾರಿಸ್ ಅವರ ಆಯ್ಕೆಯು ಬೈಡನ್ ಅವರ ಮಧ್ಯಮ ಮತ್ತು ಸ್ಥಾಪನೆಯ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತದೆ. ರಾಜಕೀಯ ತಜ್ಞರು ಕಮಲಾ ಹ್ಯಾರಿಸ್ ಆಯ್ಕೆ ಮಾರ್ಚ್‌ನಲ್ಲಿಯೇ ನಿರ್ಧರಿಸಲಾಗಿದೆ ಎಂದಿದ್ದರು.

Senator Kamala Harris
PC:Daily News.com

ಸೆನೆಟ್ನಲ್ಲಿ ನಾಲ್ಕು ವರ್ಷಗಳಿಗಿಂತ ಕಡಿಮೆ ಅವಧಿಯ ಸೇವೆ ಸಲ್ಲಿಸುತ್ತಿರುವಾಗಲೇ, ಹ್ಯಾರಿಸ್ ಅನ್ನು ಡೆಮಾಕ್ರಟಿಕ್ ಪಕ್ಷದ ಮುಖ್ಯವಾಹಿನಿಯೊಳಗೆ ದೃಢವಾಗಿರಿಸಲಾಗಿದೆ. ಇತರ ಮಾಜಿ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಬರ್ನಿ ಸ್ಯಾಂಡರ್ಸ್ ಮತ್ತು ಎಲಿಜಬೆತ್ ವಾರೆನ್‌ರಂತೆಯೂ ಇಲ್ಲ, ಇತ್ತ ಬೈಡೆನ್‌ನಂತೆ ಕೇಂದ್ರಿಯವೂ ಆಗಿಲ್ಲ.

ಡೊನಾಲ್ಡ್ ಜೆ ಹ್ಯಾರಿಸ್, ಶ್ಯಾಮಲಾ ಗೋಪಾಲನ್ ಹ್ಯಾರಿಸ್ ಮಗಳಾಗಿ ಕಮಲಾ ದೇವಿ ಹ್ಯಾರಿಸ್ 1964ರ ಅಕ್ಟೋಬರ್ 20 ರಂದು ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ನಲ್ಲಿ ಜನಿಸಿದವರು. ಕಮಲಾ ಕೋಟ್-ಡೆಸ್-ನೀಗಸ್ ರಸ್ತೆಯ ನೊಟ್ರೆ-ಡೇಮ್-ಡೆಸ್-ನೀಗಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ನಂತರ ವೆಸ್ಟ್ಮೌಂಟ್ ನಿಂದ 1981 ರಲ್ಲಿ ಪದವಿ ಪಡೆದರು. ಆಗಸ್ಟ್ 22, 2014 ರಂದು, ಹ್ಯಾರಿಸ್ ಬ್ರೂಕ್ಲಿನ್ ಮೂಲದ ವಕೀಲ ಡೌಗ್ಲಾಸ್ ಎಮ್ಹಾಫ್ ಎಂಬ ಅವರನ್ನು ವಿವಾಹವಾದರು.

ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಕಮಲಾ ತಮ್ಮ ವೃತ್ತಿಜೀವನವನ್ನು ಅಲ್ಮೇಡಾ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿ ಕಚೇರಿಯಲ್ಲಿ ಪ್ರಾರಂಭಿಸಿದರು. ಅಲ್ಲಿ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದರು. 2003ರಲ್ಲಿ, ಅವರು ಸ್ಯಾನ್ ಫ್ರಾನ್ಸಿಸ್ಕೋದ ಜಿಲ್ಲಾ ವಕೀಲರಾದರು. ಎರಡು ಅವಧಿಯ ಅಧಿಕಾರದ ನಂತರ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆ ಮತ್ತು ಮೊದಲ ಕಪ್ಪು ವ್ಯಕ್ತಿಯಾಗಿ ಆಯ್ಕೆಯಾದರು. ಅಲ್ಲಿ ಕಮಲಾ ಅವರು 2011 ರಿಂದ 2017 ರವರೆಗೆ ಈ ಹುದ್ದೆಯನ್ನು ಅಲಂಕರಿಸಿದ್ದರು.

2017 ರಲ್ಲಿ ಕ್ಯಾಲಿಫೋರ್ನಿಯಾದ ಯುನೈಟೆಡ್ ಸ್ಟೇಟ್ಸ್ ಸೆನೆಟರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಆಫ್ರಿಕನ್-ಅಮೆರಿಕನ್ ಮಹಿಳೆ ಮತ್ತು ಇತಿಹಾಸದಲ್ಲಿ ಮೊದಲ ದಕ್ಷಿಣ ಏಷ್ಯಾ-ಅಮೆರಿಕನ್ ಸೆನೆಟರ್ ಆಗಿ ಹೊರಹೊಮ್ಮಿದರು. ಅವರು ಹೋಮ್ಲ್ಯಾಂಡ್ ಸೆಕ್ಯುರಿಟಿ ಮತ್ತು ಸರ್ಕಾರಿ ವ್ಯವಹಾರಗಳ ಸಮಿತಿ, ಗುಪ್ತಚರ ಆಯ್ಕೆ ಸಮಿತಿ, ನ್ಯಾಯಾಂಗ ಸಮಿತಿ ಮತ್ತು ಬಜೆಟ್ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಾರೆ.

ಸದ್ಯ ಕಮಲಾ ಹ್ಯಾರಿಸ್ ಗೆಲುವು ಅಮೆರಿಕಾದ ಕಪ್ಪು ಜನಾಂಗದ ಗೆಲುವಷ್ಟೆ ಅಲ್ಲದೇ ದಕ್ಷಿಣ ಭಾರತಿಯರಿಗೂ ಆಕೆ ಮನೆ ಮಗಳು. ತಮಿಳುನಾಡಿನ ತುಲಸೇಂದ್ರಪುರಂದಲ್ಲಿ ಆಕೆಯ ಗೆಲುವಿಗಾಗಿ ವಿಶೇಷ ಪೂಜೆ-ಪ್ರಾರ್ಥನೆಗಳನ್ನು ಮಾಡಿ ಹಾರೈಸಿದ್ದು ಕೂಡ ಇದೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...