Homeಅಂತರಾಷ್ಟ್ರೀಯಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಅಮೆರಿಕಾದಲ್ಲಿ ಒಬ್ಬ ವ್ಯಕ್ತಿಯ ಆಯ್ಕೆಯಲ್ಲಿ ಆ ವ್ಯಕ್ತಿಯ ಜನಾಂಗ ಮತ್ತು ಲಿಂಗವು ಅತ್ಯಂತ ನಿರ್ಣಾಯಕ ಮಾನದಂಡಗಳಾಗಿವೆ. ಅಂತಹ ರಾಷ್ಟ್ರದಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಜೋ ಬಿಡನ್, ಸೆನೆಟರ್ ಕಮಲಾ ಹ್ಯಾರಿಸ್ ಅವರನ್ನು ಉಪಾಧ್ಯಕ್ಷ ಅಭ್ಯರ್ಥಿಯಾಗಿ ಘೋಷಿಸಿದರು.

ಅಮೆರಿಕಾದ ಇತಿಹಾಸದಲ್ಲಿ ಇದೇ ಮೊದಲು ಏಷ್ಯನ್-ಅಮೆರಿಕನ್, ಮೊದಲ ಕಪ್ಪು ಮಹಿಳೆ ಪ್ರಮುಖ ಪಕ್ಷದ ಉಪಾಧ್ಯಕ್ಷೆಯಾಗಿದ್ದಾರೆ. ಶ್ವೇತಭವನದ ಉತ್ತರಾಧಿಕಾರಿಯಾಗಿರುವ ಕಮಲಾ ಹ್ಯಾರಿಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದ ಮೂಲದ ಕಮಲಾ ಹ್ಯಾರಿಸ್ ಅಮೆರಿಕಾ ಸೆನೆಟರ್ ಆದ ದಕ್ಷಿಣ ಏಷ್ಯಾದ ಮೊದಲ ಮಹಿಳೆ. ಹ್ಯಾರಿಸ್ ತಂದೆ ಜಮೈಕಾದವರು, ತಾಯಿ ದಕ್ಷಿಣ ಭಾರತದವರು, ತಂದೆಯಿಂದ ಬೇರ್ಪಟ್ಟು ತಾಯಿಯೊಂದಿಗೆ ಬೆಳೆದಿದ್ದಾರೆ.

ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಉನ್ನತ ವ್ಯಾಸಂಗಕ್ಕಾಗಿ ಬರ್ಕ್ಲಿ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಅಲ್ಲಿ ಅವರು ನಾಗರಿಕ ಹಕ್ಕುಗಳ ಚಳುವಳಿಯಲ್ಲಿ ತಮ್ಮ ಭಾವಿ ಪತಿ ಡೊನಾಲ್ಡ್ ಜೆ ಹ್ಯಾರಿಸ್‌ರನ್ನು ಭೇಟಿಯಾದರು.

ಚೆನ್ನೈಯಿಂದ ಸುಮಾರು 320 ಕಿ.ಮೀ ದೂರದಲ್ಲಿರುವ ತುಲಸೇಂದ್ರಪುರಂ, ಕಮಲಾ ಹ್ಯಾರಿಸ್ ಅಜ್ಜ ಪಿ.ವಿ. ಗೋಪಾಲನ್ ಶತಮಾನಕ್ಕೂ ಹಿಂದೆ ಜನಿಸಿದ ಊರು. ಹ್ಯಾರಿಸ್ ತಮ್ಮ ಮಾತುಗಳಲ್ಲಿ ಆಗ್ಗಾಗೆ ತನ್ನ ಮತ್ತು ಭಾರತದ ಸಂಬಂಧವನ್ನು ನೆನಪಿಸಿಕೊಂಡಿದ್ದಾರೆ. ತಮ್ಮ 5ನೇವಯಸ್ಸಿನಲ್ಲಿ ತುಲಸೇಂದ್ರಪುರಂಗೆ ಭೇಟಿ ನೀಡಿದ್ದು ಮತ್ತು ಚೆನ್ನೈನ ಕಡಲತೀರಗಳಲ್ಲಿ ತನ್ನ ಅಜ್ಜನೊಂದಿಗೆ ಓಡಾಡಿದ್ದನ್ನ ಇತ್ತಿಚೆಗೆ ನೆನಪಿಸಿಕೊಂಡಿದ್ದರು.

“ಆಕೆಯಲ್ಲಿ ಭಾರತೀಯ ಪರಂಪರೆ ಇನ್ನೂ ಇರುವುದರಿಂದ, ಕೆಲವೊಮ್ಮೆ ತನ್ನ ವೈಯಕ್ತಿಕ ಕಥೆಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಾರೆ” ಎಂದು 2019ರ ಅಕ್ಟೋಬರ್‌ನಲ್ಲಿ ಅಮೆರಿಕಾದ LA ಟೈಮ್ಸ್ ವರದಿ ಮಾಡಿತ್ತು.

ಇದನ್ನೂ ಓದಿ: ಅಮೆರಿಕ ಚುನಾವಣೆ: ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ತಮಿಳುನಾಡಿನಿಂದ ಶುಭ ಹಾರೈಕೆ!

ಇತ್ತಿಚೆಗೆ ತನ್ನ ನೆಚ್ಚಿನ ಭಾರತೀಯ ತಿನಿಸುಗಳ ಬಗ್ಗೆ ಹೇಳುವಾಗ, ಇಡ್ಲಿ, ಒಳ್ಳೆಯ ಸಾಂಬಾರ್ ಮತ್ತು ಯಾವುದೇ ರೀತಿಯ ಟಿಕ್ಕಾ ಮೇಲಿನ ತನ್ನ ಪ್ರೀತಿಯನ್ನು ಹಂಚಿಕೊಂಡಿದ್ದರು. ಭಾರತದ ಬಗ್ಗೆ ತನ್ನ ಮೂಲ ಭಾರತದ್ದು ಎಂಬುದನ್ನು ಹ್ಯಾರಿಸ್ ಎಂದಿಗೂ ಬಿಟ್ಟುಕೊಟ್ಟಿಲ್ಲ. ಸಿಗುವ ಪ್ರತಿ ಅವಕಾಶದಲ್ಲೂ ಭಾರತದ ಬಗೆಗಿನ ತಮ್ಮ ಪ್ರೀತಿಯನ್ನು ಒತ್ತಿ ಹೇಳುತ್ತಾ ಬಂದಿದ್ದಾರೆ.

Kamala Harris's husband and potential 'second gentleman' - BBC News
PC: BBC

ಡೊನಾಲ್ಡ್ ಟ್ರಂಪ್ ಅವರಿಂದ ಕಮ್ಯೂನಿಸ್ಟ್ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದ ಹ್ಯಾರಿಸ್ ಅಧ್ಯಯನ ಕೂಡ ಕಪ್ಪು ಜನರ ಅಧ್ಯಯನಗಳು, ನಾಯಕರು ಮತ್ತು ಸಂಸ್ಕೃತಿ ಕ್ಷೇತ್ರಕ್ಕೆ ಹತ್ತಿರವಾಗಿತ್ತು. ಹ್ಯಾರಿಸ್ “ಐತಿಹಾಸಿಕವಾಗಿ ಕಪ್ಪು ಕಾಲೇಜು ಮತ್ತು ವಿಶ್ವವಿದ್ಯಾಲಯ” ಎಂದು ಕರೆಯಲ್ಪಡುವ ಪ್ರದೇಶದಲ್ಲಿ ಅಧ್ಯಯನ ಮಾಡಿದ್ದರು.

ಕಪ್ಪು ಮಹಿಳೆಯಾಗಿ ಹ್ಯಾರಿಸ್ ಹೆಸರು “ಬ್ಲ್ಯಾಕ್ ಲೈವ್ಸ್ ಮ್ಯಾಟರ್”(ಕಪ್ಪು ಜನರ ಜೀವನವೂ ಮುಖ್ಯ) ಚಳವಳಿಯ ಮುಂಚೂಣಿಯಲ್ಲಿದೆ. ಇದು 1960ರ ನಾಗರಿಕ ಹಕ್ಕುಗಳ ಚಳವಳಿಯ ನಂತರ ಅಮೆರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಕಪ್ಪು ಜನಾಂಗದ ಬಗ್ಗೆ ನಡೆದ ದೊಡ್ಡ ಪ್ರತಿಭಟನೆಗಳು.

13% ಇರುವ ಕಪ್ಪು ಜನಾಂಗದ ಮತದಾರರಿಗೆ ಹೋಲಿಸಿದರೆ ಏಷ್ಯಾದ ಅಮೆರಿಕನ್ನರು ಕೇವಲ 5% ಮತದಾರರನ್ನು ಹೊಂದಿದ್ದಾರೆ. ಅಮೆರಿಕಾದಲ್ಲಿ ಜನಾಂಗದ ಅಡಿಪಾಯವು ಕಪ್ಪು ಮತ್ತು ಬಿಳಿ ರಾಜಕೀಯದ ಮೇಲೆ ಸ್ಥಿರವಾಗಿದೆ.

ಇದನ್ನೂ ಓದಿ: ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಲ್ಲಿ ವಿಶೇಷ ಪೂಜೆ!

ಉಪಾಧ್ಯಕ್ಷ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆಯಾಗಲು ಕಾರಣವಾದ ಅಂಶಗಳು

ಈ ಬಾರಿಯ ಅಮೆರಿಕಾ ಚುನಾವಣೆಯ ಬದಲಾವಣೆಯ ಪರ್ವ ಬೈಡನ್‌ಗೆ, ಕಪ್ಪು, ಭಾರತೀಯ-ಅಮೆರಿಕನ್ ಮಹಿಳಾ ಅಭ್ಯರ್ಥಿ ಸುರಕ್ಷಿತ ಆಯ್ಕೆ ಎಂಬುದನ್ನು ತಿಳಿಸಿ ಕೊಟ್ಟಿತ್ತು. ಆಗ ಅವರ ಕಣ್ಣಿಗೆ ಬಿದ್ದವರು ಸೆನೆಟರ್‌ ಕಮಲಾ ಹ್ಯಾರಿಸ್.

ಆರಂಭದಲ್ಲಿ, ಬೈಡೆನ್‌ರ ಆಯ್ಕೆಗಳ ಸರಣಿಯು ಬಹುತೇಕ ಮಹಿಳೆಯರೆ ಆಗಿದ್ದರು. ಆದರೆ ಮೇ ತಿಂಗಳಲ್ಲಿ “ಬ್ಲ್ಯಾಕ್ ಲೈವ್ಸ್ ಮ್ಯಾಟರ್” ಚಳವಳಿ ಸ್ಫೋಟಗೊಂಡ ನಂತರ, ಬೈಡೆನ್‌ಗೆ ಕಪ್ಪು ಜನಾಂಗದ ವ್ಯಕ್ತಿಯನ್ನು ಆಯ್ಕೆ ಮಾಡಲು ಒತ್ತಡ ಉಂಟು ಮಾಡಿತ್ತು.

ನಂತರ ಬೈಡನ್ ಕಪ್ಪು ಮಹಿಳೆಯನ್ನು ಆಯ್ಕೆ ಮಾಡುವ ಉದ್ದೇಶವನ್ನು ಜೂನ್‌ನಲ್ಲಿ ಘೋಷಿಸಿದರು. ಹ್ಯಾರಿಸ್ ಅವರ ಆಯ್ಕೆಯು ಬೈಡನ್ ಅವರ ಮಧ್ಯಮ ಮತ್ತು ಸ್ಥಾಪನೆಯ ಸಿದ್ಧಾಂತಕ್ಕೆ ಹೊಂದಿಕೊಳ್ಳುತ್ತದೆ. ರಾಜಕೀಯ ತಜ್ಞರು ಕಮಲಾ ಹ್ಯಾರಿಸ್ ಆಯ್ಕೆ ಮಾರ್ಚ್‌ನಲ್ಲಿಯೇ ನಿರ್ಧರಿಸಲಾಗಿದೆ ಎಂದಿದ್ದರು.

Senator Kamala Harris
PC:Daily News.com

ಸೆನೆಟ್ನಲ್ಲಿ ನಾಲ್ಕು ವರ್ಷಗಳಿಗಿಂತ ಕಡಿಮೆ ಅವಧಿಯ ಸೇವೆ ಸಲ್ಲಿಸುತ್ತಿರುವಾಗಲೇ, ಹ್ಯಾರಿಸ್ ಅನ್ನು ಡೆಮಾಕ್ರಟಿಕ್ ಪಕ್ಷದ ಮುಖ್ಯವಾಹಿನಿಯೊಳಗೆ ದೃಢವಾಗಿರಿಸಲಾಗಿದೆ. ಇತರ ಮಾಜಿ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಬರ್ನಿ ಸ್ಯಾಂಡರ್ಸ್ ಮತ್ತು ಎಲಿಜಬೆತ್ ವಾರೆನ್‌ರಂತೆಯೂ ಇಲ್ಲ, ಇತ್ತ ಬೈಡೆನ್‌ನಂತೆ ಕೇಂದ್ರಿಯವೂ ಆಗಿಲ್ಲ.

ಡೊನಾಲ್ಡ್ ಜೆ ಹ್ಯಾರಿಸ್, ಶ್ಯಾಮಲಾ ಗೋಪಾಲನ್ ಹ್ಯಾರಿಸ್ ಮಗಳಾಗಿ ಕಮಲಾ ದೇವಿ ಹ್ಯಾರಿಸ್ 1964ರ ಅಕ್ಟೋಬರ್ 20 ರಂದು ಕ್ಯಾಲಿಫೋರ್ನಿಯಾದ ಓಕ್ಲ್ಯಾಂಡ್ ನಲ್ಲಿ ಜನಿಸಿದವರು. ಕಮಲಾ ಕೋಟ್-ಡೆಸ್-ನೀಗಸ್ ರಸ್ತೆಯ ನೊಟ್ರೆ-ಡೇಮ್-ಡೆಸ್-ನೀಗಸ್ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ನಂತರ ವೆಸ್ಟ್ಮೌಂಟ್ ನಿಂದ 1981 ರಲ್ಲಿ ಪದವಿ ಪಡೆದರು. ಆಗಸ್ಟ್ 22, 2014 ರಂದು, ಹ್ಯಾರಿಸ್ ಬ್ರೂಕ್ಲಿನ್ ಮೂಲದ ವಕೀಲ ಡೌಗ್ಲಾಸ್ ಎಮ್ಹಾಫ್ ಎಂಬ ಅವರನ್ನು ವಿವಾಹವಾದರು.

ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಕಮಲಾ ತಮ್ಮ ವೃತ್ತಿಜೀವನವನ್ನು ಅಲ್ಮೇಡಾ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿ ಕಚೇರಿಯಲ್ಲಿ ಪ್ರಾರಂಭಿಸಿದರು. ಅಲ್ಲಿ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದರು. 2003ರಲ್ಲಿ, ಅವರು ಸ್ಯಾನ್ ಫ್ರಾನ್ಸಿಸ್ಕೋದ ಜಿಲ್ಲಾ ವಕೀಲರಾದರು. ಎರಡು ಅವಧಿಯ ಅಧಿಕಾರದ ನಂತರ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆ ಮತ್ತು ಮೊದಲ ಕಪ್ಪು ವ್ಯಕ್ತಿಯಾಗಿ ಆಯ್ಕೆಯಾದರು. ಅಲ್ಲಿ ಕಮಲಾ ಅವರು 2011 ರಿಂದ 2017 ರವರೆಗೆ ಈ ಹುದ್ದೆಯನ್ನು ಅಲಂಕರಿಸಿದ್ದರು.

2017 ರಲ್ಲಿ ಕ್ಯಾಲಿಫೋರ್ನಿಯಾದ ಯುನೈಟೆಡ್ ಸ್ಟೇಟ್ಸ್ ಸೆನೆಟರ್ ಆಗಿ ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಆಫ್ರಿಕನ್-ಅಮೆರಿಕನ್ ಮಹಿಳೆ ಮತ್ತು ಇತಿಹಾಸದಲ್ಲಿ ಮೊದಲ ದಕ್ಷಿಣ ಏಷ್ಯಾ-ಅಮೆರಿಕನ್ ಸೆನೆಟರ್ ಆಗಿ ಹೊರಹೊಮ್ಮಿದರು. ಅವರು ಹೋಮ್ಲ್ಯಾಂಡ್ ಸೆಕ್ಯುರಿಟಿ ಮತ್ತು ಸರ್ಕಾರಿ ವ್ಯವಹಾರಗಳ ಸಮಿತಿ, ಗುಪ್ತಚರ ಆಯ್ಕೆ ಸಮಿತಿ, ನ್ಯಾಯಾಂಗ ಸಮಿತಿ ಮತ್ತು ಬಜೆಟ್ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಾರೆ.

ಸದ್ಯ ಕಮಲಾ ಹ್ಯಾರಿಸ್ ಗೆಲುವು ಅಮೆರಿಕಾದ ಕಪ್ಪು ಜನಾಂಗದ ಗೆಲುವಷ್ಟೆ ಅಲ್ಲದೇ ದಕ್ಷಿಣ ಭಾರತಿಯರಿಗೂ ಆಕೆ ಮನೆ ಮಗಳು. ತಮಿಳುನಾಡಿನ ತುಲಸೇಂದ್ರಪುರಂದಲ್ಲಿ ಆಕೆಯ ಗೆಲುವಿಗಾಗಿ ವಿಶೇಷ ಪೂಜೆ-ಪ್ರಾರ್ಥನೆಗಳನ್ನು ಮಾಡಿ ಹಾರೈಸಿದ್ದು ಕೂಡ ಇದೆ.


ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...