Homeಕರೋನಾ ತಲ್ಲಣಮಾಸ್ಕ್ ಇಲ್ಲದ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ಏಕಿಲ್ಲ? ಹೈಕೋರ್ಟ್ ಪ್ರಶ್ನೆ

ಮಾಸ್ಕ್ ಇಲ್ಲದ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ಏಕಿಲ್ಲ? ಹೈಕೋರ್ಟ್ ಪ್ರಶ್ನೆ

ರಾಜಕೀಯ ನಾಯಕರು, ಗಣ್ಯರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿರುವುದು ಫೋಟೋಗಳಲ್ಲೇ ಸ್ಪಷ್ಟವಾಗಿ ಕಾಣುತ್ತಿದೆ. ಆದರೆ, ಅವರ ವಿರುದ್ಧ ಸರ್ಕಾರ ಕ್ರಮ ಜರುಗಿಸಿಲ್ಲ.

- Advertisement -
- Advertisement -

ಮಾಸ್ಕ್ ಧರಿಸದ, ದೈಹಿಕ ಅಂತರ ಪಾಲಿಸದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುವ ಸಾಮಾನ್ಯ ಜನರಿಗೆ ಮಾತ್ರ ದಂಡ ವಿಧಿಸುತ್ತೀರಿ. ಅದೇ ನಿಯಮಗಳು ರಾಜಕೀಯ ರ್‍ಯಾಲಿಗಳಲ್ಲಿ ಭಾಗವಹಿಸಿದ್ದಾಗ ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ರಾಜಕೀಯ ನಾಯಕರಿಗ್ಯಾಕಿಲ್ಲ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ.

ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಮಾತ್ರ ಯಾವುದೇ ಕ್ರಮ ಜರುಗಿಸಿಲ್ಲ. ಕೇವಲ ಸಾಮಾನ್ಯ ಜನರಿಗಷ್ಟೇ ಕಾನೂನು ಇದೆಯೇ? ಅವರು ಮಾತ್ರ ದಂಡ ಪಾವತಿಸಬೇಕೆ ಎಂದು ಹೈಕೋರ್ಟ್ ಕೇಳಿದೆ.

ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್‌ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ಮಾಡುತ್ತಿದೆ.

ರಾಜಕೀಯ ನಾಯಕರು, ಗಣ್ಯರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿರುವುದು ಫೋಟೋಗಳಲ್ಲೇ ಸ್ಪಷ್ಟವಾಗಿ ಕಾಣುತ್ತಿದೆ. ಆದರೆ, ಅವರ ವಿರುದ್ಧ ದಂಡ ಸಂಗ್ರಹಿಸಿಲ್ಲ. ಸರ್ಕಾರ ಕ್ರಮ ಜರುಗಿಸಿಲ್ಲ. ಬದಲಿಗೆ ಕ್ರಮ ಜರುಗಿಸಲಾಗುತ್ತಿದೆ ಎಂಬುದಾಗಿ ಉತ್ತರ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಸೆ.30 ರಂದು ಸಂಸದ ತೇಜಸ್ವಿ ಸೂರ್ಯರನ್ನು ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿಗೆ ಸ್ವಾಗತಿಸುವ ವೇಳೆ ನಡೆದ ರ್‍ಯಾಲಿಯಲ್ಲಿ ತೇಜಸ್ವಿ ಮಾಸ್ಕ್ ಧರಿಸಿದ್ದರು. ಅಲ್ಲಿದ್ದ ಕಾರ್ಯಕರ್ತರು ಮಾಸ್ಕ್ ಧರಿಸದೇ ಇರುವುದು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡುಬಂದಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.

ಆದರೆ, ವಕೀಲ ಜಿ.ಆರ್. ಮೋಹನ್ ಪೋಟೊಗಳ ಸಹಿತ ಸಲ್ಲಿಸಿರುವ ಮೆಮೊದಲ್ಲಿ ಸಂಸದ ಸೇರಿದಂತೆ ಯಾರೂ ಕೂಡ ಆ ದಿನ ಮಾಸ್ಕ್‌ಗಳನ್ನು ಧರಿಸಿರಲಿಲ್ಲ. ಸುರಕ್ಷಿತ ಅಂತರ ಕಾಯ್ದುಕೊಂಡಿರಲಿಲ್ಲ. ರ್‍ಯಾಲಿಯ ಆಯೋಜನೆಯ ವೇಳೆ ಪಾಲಿಸಬೇಕಾದ ಕೇಂದ್ರ ಸರಕಾರದ ಎಸ್‌ಒಪಿ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದ್ದಾರೆ.

ಮಾಸ್ಕ್‌ಗಳನ್ನು ಧರಿಸದೇ ಇರುವುದಕ್ಕೆ ಸಂಸತ್ ಸದಸ್ಯ (ತೇಜಸ್ವಿ ಸೂರ್ಯ) ಹಾಗೂ ಇತರ ರಾಜಕೀಯ ಮುಖಂಡರಿಂದ ನೀವು ದಂಡ ಸಂಗ್ರಹಿಸಿದ್ದೀರಾ? ರಾಜಕಾರಣಿಗಳ ವಿರುದ್ಧ ಏಕೆ ಎಫ್‌ಐಆರ್‌ ದಾಖಲಿಸಿಲ್ಲ? ಕಠಿಣ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಸರ್ಕಾರವು ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ಸರ್ಕಾರದ ಪರ ವಕೀಲರು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನಡೆಸಿದ ರ್‍ಯಾಲಿಯಲ್ಲಿ ಭಾಗವಹಿಸಿದ್ದವರ ವಿರುದ್ಧ ಹಾಗೂ ಆರ್‌.ಆರ್‌.ನಗರ ಚುನಾವಣಾ ಪ್ರಚಾರದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ದೂರು ದಾಖಲಾದ ನಂತರ ಈ ಸಂಬಂಧ ಕೈಗೊಂಡ ಕ್ರಮಗಳೇನು ಎಂದು ನ್ಯಾಯಪೀಠ ಪ್ರಶ್ನಿಸಿತು. ಜೊತೆಗೆ, ರ್‍ಯಾಲಿಯಲ್ಲಿ ಮಾಸ್ಕ್‌ ಧರಿಸದ ಹಾಗೂ ದೈಹಿಕ ಅಂತರ ಪಾಲಿಸದವರ ವಿರುದ್ಧ ಪೋಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತುನಗರ ಪೊಲೀಸ್‌ ಆಯುಕ್ತರು ವಿವರಣೆ ನೀಡಬೇಕು ಎಂದು ಸೂಚಿಸಿ ವಿಚಾರಣೆಯನ್ನು ನವೆಂಬರ್‌ 9ಕ್ಕೆ ಮುಂದೂಡಿದೆ.


ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...