Homeಕರ್ನಾಟಕವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಕಲ್ಲಿದ್ದಲು ಆಧಾರಿತ ವಿದ್ಯುತ್ ಸೇರಿದಂತೆ, ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯವಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿ ಕೊರೊನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ವಿದ್ಯುತ್ ದರ ಹೆಚ್ಚಿಸುರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯೂ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪುಮಾಡಿಕೊಳ್ಳುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತ್ತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದರ ಏರಿಕೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಆರ್‌ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ?”

“ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್‌ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ಅದೆಲ್ಲ ಬಿಟ್ಟು ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

“ಕೊರೊನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ”

“ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ” ಎಂದು ಹೇಳಿದ್ದಾರೆ.

“GST, ನೋಟ್ ಬ್ಯಾನ್, ಕೊರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆ, ವಾಣಿಜ್ಯೋದ್ಯಮ ಮತ್ತು ಜನರ ಮೇಲೆ, ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕು ಎಂದು ಆಗ್ರಹಿಸಿದೆ ಅವರು, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...