Homeಕರ್ನಾಟಕವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ವಿದ್ಯುತ್ ಖರೀದಿ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ: ಸಿದ್ದರಾಮಯ್ಯ ಆರೋಪ

ಕಲ್ಲಿದ್ದಲು ಆಧಾರಿತ ವಿದ್ಯುತ್ ಸೇರಿದಂತೆ, ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯವಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿ ಕೊರೊನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ವಿದ್ಯುತ್ ದರ ಹೆಚ್ಚಿಸುರುವ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯೂ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪುಮಾಡಿಕೊಳ್ಳುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಧ್ವಜ ಹಾರಿಸದಂತೆ ಈ ಬಾರಿ ಯಾರ ಕುಮ್ಮಕ್ಕಿದೆ? – ಸಿದ್ದರಾಮಯ್ಯ ಪ್ರಶ್ನೆ

“ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತ್ತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ದರ ಏರಿಕೆ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

“ರಾಯಚೂರಿನ ಆರ್‌ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ?”

“ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್‌ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ಅದೆಲ್ಲ ಬಿಟ್ಟು ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿರುವ ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

“ಕೊರೊನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ”

“ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ” ಎಂದು ಹೇಳಿದ್ದಾರೆ.

“GST, ನೋಟ್ ಬ್ಯಾನ್, ಕೊರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆ, ವಾಣಿಜ್ಯೋದ್ಯಮ ಮತ್ತು ಜನರ ಮೇಲೆ, ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕು ಎಂದು ಆಗ್ರಹಿಸಿದೆ ಅವರು, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಉಪಚುನಾವಣೆ ನಂತರ ಸಿಎಂ ಬದಲಾವಣೆ, I am very confident: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...