Homeಮುಖಪುಟದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

ದೀಪಾವಳಿ: 24 ಗಂಟೆ ಸತತವಾಗಿ ಬೆಳಗಬಲ್ಲ’ಮ್ಯಾಜಿಕ್ ಲ್ಯಾಂಪ್ಸ್’ಗೆ ಭಾರಿ ಬೇಡಿಕೆ!

24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳಿಗೆ ಭಾರಿ ಬೇಡಿಕೆ ಬಂದಿದೆ ಎಂದು ಕುಂಬಾರ ಅಶೋಕ್ ಹೇಳುತ್ತಾರೆ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಇನ್ನೊಂದೆ ವಾರ ಉಳಿದಿದೆ. ಕೊರೊನಾ ಸಾಂಕ್ರಾಮಿಕ ಹಬ್ಬಗಳ ಖುಷಿಯ ಮೇಲೆ ಪ್ರಭಾವ ಬೀರಿದ್ದರೂ ಸಹ ಕೊರೊನಾ ಹೋಗಿ ಸ್ವಚ್ಛ, ನೆಮ್ಮದಿಯ ಜೀವನ ಆರಂಭವಾಗಲಿ ಎಂದು ಹಬ್ಬ ಆಚರಿಸಲು ಹಲವು ಮಂದಿ ಕಾಯುತ್ತಿದ್ದಾರೆ. ದೀಪಗಳ ಹಬ್ಬಕ್ಕಾಗಿ ವೈವಿಧ್ಯಮಯ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ, ಇಡುತ್ತಿವೆ.

ಛತ್ತೀಸ್‌ಗಢ ಮೂಲದ ಕುಂಬಾರರೊಬ್ಬರು ಇಡೀ ದಿನ ಬೆಳಗುವ ಮಣ್ಣಿನ ದೀಪವನ್ನು ವಿನ್ಯಾಸಗೊಳಿಸಿದ್ದಾರೆ. ಬಸ್ತರ್ ಜಿಲ್ಲೆಯ ಕೊಂಡಗಾಂವ್ ಎಂಬ ಸಣ್ಣ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶೋಕ್ ಚಕ್ರಧಾರಿ ಈ ದೀಪಗಳನ್ನು ವಿನ್ಯಾಸಗೊಳಿಸಿದ್ದಾರೆ.

ದೀಪಾವಳಿಯ ಪ್ರಯುಕ್ತ ಈಗಾಗಲೇ ಈ ದೀಪಗಳಿಗೆ ಬೇಡಿಕೆಯ ಪ್ರವಾಹವೇ ಹರಿದು ಬಂದಿದೆ ಎಂದು ದಿ ಬೆಟರ್ ಇಂಡಿಯಾ ವರದಿ ಮಾಡಿದೆ. 24 ರಿಂದ 40 ಗಂಟೆಗಳ ಕಾಲ ನಿರಂತರವಾಗಿ ಬೆಳಗಬಲ್ಲ ಈ ಸಾಂಪ್ರದಾಯಿಕ ದೀಪಗಳು ಮತ್ತು ಕುಂಬಾರ ಅಶೋಕ್ ಚಕ್ರಧಾರಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿದ್ದಾರೆ.

ಇದನ್ನೂ ಓದಿ: ಕೊರೊನಾ: ದೀಪಾವಳಿ ಮಾರ್ಗಸೂಚಿಗಳನ್ನು ಪ್ರಕಟಿಸಿದ ರಾಜ್ಯ ಸರ್ಕಾರ

ಕುಂಬಾರ ಅಶೋಕ್ ಚಕ್ರಧಾರಿ ಮಾಡಿದ ದೀಪಗಳಲ್ಲಿ ತೈಲವು ಸ್ವಯಂಚಾಲಿತವಾಗಿ ಜಿನುಗುತ್ತದೆ ‘ಮ್ಯಾಜಿಕ್ ಲ್ಯಾಂಪ್ಸ್’ ಎಂದು ಲೇಬಲ್ ಮಾಡಲಾದ ದೀಪಗಳಲ್ಲಿ, ಎಣ್ಣೆಯನ್ನು ಹಿಡಿದಿಡಲು ಗುಮ್ಮಟದ ಆಕಾರ ಮತ್ತು ದೀಪದ ತಳದಲ್ಲಿ ಎಣ್ಣೆ ಹಿಡಿದಿಡಲು ಟ್ಯೂಬ್ ತರಹದ ರಚನೆ ಇರುತ್ತದೆ. ಇದನ್ನು ಅಶೋಕ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿದ ನಂತರ ಈ ರೀತಿಯ ದೀಪವನ್ನು ವಿನ್ಯಾಸಗೊಳಿಸುವ ಯೋಜನೆ ಬಂದಿದ್ದಾಗಿ ಅಶೋಕ್ ತಿಳಿಸಿದ್ದಾರೆ. “ನನ್ನ ಕುಂಬಾರಿಕೆ ಕೌಶಲ್ಯಗಳನ್ನು ಪ್ರಶ್ನಿಸುವಂತಹ ಹೊಸ ಆಲೋಚನೆಗಳನ್ನು ನಾನು ಯಾವಾಗಲೂ ಹುಡುಕುತ್ತಿದ್ದೇನೆ ಮತ್ತು ಅವು ನನ್ನ ಸುತ್ತಮುತ್ತಲಿನವರಿಗೆ ಉಪಯುಕ್ತವಾಗುವಗಬೇಕು ಅಂತಹ ಕೆಲಸಗಳನ್ನು ಮಾಡುತ್ತೇನೆ” ಎಂದು 62 ವರ್ಷದ ಅಶೋಕ್ ಹೇಳುತ್ತಾರೆ.

“ನಾನು ಈ ದೀಪವನ್ನು ತಯಾರಿಸಲು ನಾನು ಆನ್‌ಲೈನ್‌ನಲ್ಲಿ ಹಲವಾರು ತಂತ್ರಗಳನ್ನು, ವೀಡಿಯೋಗಳಳನ್ನು ವೀಕ್ಷಿಸಿದ್ದೇನೆ. ಈ ದೀಪಗಳನ್ನು ತಯಾರಿಸಿದ ನನಗೆ ಇನ್ನೂ ಹೆಚ್ಚಿನ ದೀಪಗಳನ್ನು ತಯಾರಿಸಲು ಬೇಡಿಕೆ ಬಮದಿವೆ” ಎಂದಿದ್ದಾರೆ. ಎಎನ್‌ಐ ಹಂಚಿಕೊಂಡ ಫೋಟೋಗಳು ಕುಂಬಾರ ಅಶೋಕ್ ವಿನ್ಯಾಸಗೊಳಿಸಿದ ‘ಮ್ಯಾಜಿಕ್ ಲ್ಯಾಂಪ್‌ಗಳ’ ಒಂದು ದೊಡ್ಡ ಸಂಗ್ರಹವನ್ನೇ ತೋರಿಸುತ್ತವೆ.

PC: ANI

ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳಿಗೆ ನೆರವಿನ ಅಗತ್ಯತೆ ಇದೆ. ದೇಶದಲ್ಲಿ ಹಲವು ರಾಜ್ಯಗಳು ಪಟಾಕಿಯನ್ನು ಬ್ಯಾನ್ ಮಾಡಿರುವ ಈ ಸಂದರ್ಭದಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಹಲವು ಕರಕುಶಲಕರ್ಮಿಗಳಿಗೆ ಕೆಲಸ ಸಿಕ್ಕಂತಾಗಿದೆ.


ಇದನ್ನೂ ಓದಿ: ಚಿತ್ರಕಲಾ ಪರಿಷತ್ತಿನಲ್ಲಿ ಕರಕುಶಲಕರ್ಮಿಗಳ ದೀಪಗಳ ಪ್ರದರ್ಶನ, ಮಾರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ‌ಕುಶಲಕರ್ಮಿಗಳಿಗೆ ಸರ್ಕಾರ ಮತ್ತು ಸಮಾಜ ಪ್ರೋತ್ಸಾಹ ಕೊಡಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...