Homeಕರ್ನಾಟಕ'ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -
- Advertisement -

ಲವ್ ಜಿಹಾದ್ ತಡೆಗೆ, ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂಬ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದಾರೆ.

ಕೇವಲ ಮದುವೆ ಆಗುವ ಉದ್ದೇಶದಿಂದಲೇ ಆಗುವ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನು ಶೀಘ್ರವೇ ರಾಜ್ಯದಲ್ಲಿ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದರು, ಲವ್ ಜಿಹಾದ್ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಯಲು ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕುಡ ಧ್ವನಿಗೂಡಿಸಿದ್ದರು. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ’ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ..? ಎಂದು ಪ್ರಶ್ನಿಸಿದ್ದಾರೆ.

ವಿವಾಹಕ್ಕಾಗಿಯೇ ಮತಾಂತರವಾದರೇ ಅದು ಮಾನ್ಯವಲ್ಲ ಎಂಬ ಅಲಹಾಬಾದ್ ಕೋರ್ಟ್ ತೀರ್ಪನ್ನು ಅನುಕೂಲಕ್ಕೆ ತಕ್ಕಂತೆ ಬಳಸಲಾಗುತ್ತಿದೆ ಎಂದಿದ್ದಾರೆ.

’ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

’ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ’ಲವ್ ಜಿಹಾದ್’ ತಡೆಯುವ ಕಾನೂನು ಜಾರಿಗೆ ತರಲು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ತಿಳಿಸಿದ್ದರು. ಉತ್ತರಪ್ರದೇಶದಲ್ಲೂ


ಇದನ್ನೂ ಓದಿ: ಕರ್ನಾಟಕ, ಮಧ್ಯಪ್ರದೇಶದಲ್ಲಿ ವಿವಾಹಕ್ಕಾಗಿ ಮತಾಂತರ ನಿಷೇಧ ಕಾನೂನು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿದ್ದರಾಮಯ್ಯನವರ ಅಭಿಪ್ರಾಯ ಸರಿಯಾಗಿದೆ. ನಮಗೆ ಉತ್ತರ ಪ್ರದೇಶದ ಆದಿತ್ಯನಾತರ ಆಡಳಿತ ಯಾವ ರೀತಿಯಲ್ಲೂ ಆದರ್ಶನೀಯವಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...