Homeಮುಖಪುಟಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

’ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!’ ಎಂದು ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ನಿನ್ನೆ ಆಲಿಸಿದ್ದು, ವಿಚಾರಣೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ.

ಅರ್ನಬ್ ಅರ್ಜಿ ಸಲ್ಲಿಸಿ ಒಂದು ದಿನದೊಳಗಾಗಿ ವಿಚಾರಣೆ ನಡೆದಿದ್ದು, ಕಾಶ್ಮೀರದಲ್ಲಿ ಸುಮಾರು 600 ಹೇಬಿಯಸ್ ಕಾರ್ಪಸ್ ಅರ್ಜಿಗಳಲ್ಲಿ 99% ಅರ್ಜಿಗಳು ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ಬಾಕಿ ಇದೆ. ಇದನ್ನು ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದು, “ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ

ಅಧ್ಯಾಪಕಿಯಾಗಿರುವ ಪ್ರಿಯಾ ಪ್ರಕಾಶ್, “ಅರ್ನಬ್ ಮನವಿ ಒಂದು ದಿನದೊಳಗೆ ವಿಚಾರಣೆಗೆ ಬಂದಿದೆ. ಆದರೆ ಕಾಶ್ಮೀರದಲ್ಲಿ, 600 ಮನವಿಗಳಲ್ಲಿ 99% ಅರ್ಜಿಗಳು, 2019 ರ ಆಗಸ್ಟ್ 6 ರಿಂದ ಬಾಕಿ ಉಳಿದಿದೆ. ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!” ಎಂದು ಕಿಡಿ ಕಾರಿದ್ದಾರೆ.

ಪತ್ರಕರ್ತ ದೆಬಾಶಿಶ್ ರಾಯ್ ಚೌಧರಿ, “ಕಾಶ್ಮೀರದಿಂದ ಸಲ್ಲಿಕೆಯಾಗಿರುವ ಸಾವಿರಾರು ಹೇಬಿಯಸ್ ಕಾರ್ಪಸ್ ಪ್ರಕರಣಗಳು ಒಂದು ವರ್ಷ ಆಗಿಯೂ ಗಮನಿಸದ ನ್ಯಾಯಾಲಯಗಳು, ಅರ್ನಾಬ್ ಪ್ರಕರಣವನ್ನು ಒಂದು ದಿನದ ವಿಳಂಬವಿಲ್ಲದೆ ಹೇಗೆ ನಡೆಯುತ್ತಿದೆ ಎಂಬುದು ಅದ್ಭುತವಾಗಿದೆ” ಎಂದಿರುವ ಅವರು, “ಒಂದು ಭಾರತ, ಒಂದೇ ಕಾನೂನು? ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದ ಕತ್ತಲೆಗೆ ಒಂದು ವರ್ಷ: ಸಾಧಿಸಿದ್ದಾದರೂ ಏನು?

ಕತೆಗಾರ ಅಲಿ, “ಅರ್ನಬ್ ಗೋಸ್ವಾಮಿಯ ಮನವಿಯನ್ನು ನ್ಯಾಯಾಲಯಗಳಲ್ಲಿ 24 ಗಂಟೆಗಳ ಒಳಗಾಗಿ ವಿಚಾರಣೆ ನಡೆಸಲಾಗುತ್ತದೆ. ಸಾವಿರಾರು ಕಾಶ್ಮೀರಿ ನಾಗರಿಕರ 600 ಹೇಬಿಯಸ್ ಕಾರ್ಪಸ್ ಮನವಿಗಳು 1 ವರ್ಷದ ನಂತರವೂ ವಿಚಾರಣೆಗೆ ಕಾಯುತ್ತಿವೆ. ಒಬ್ಬರೂ ಕಾನೂನಿನ ಬಗ್ಗೆ ಮಾತನಾಡಬಾರದು” ಎಂದು ಹೇಳಿದ್ದಾರೆ.

ಪೆರಿಯಾರಿಸ್ಟ್ ಟಿಪಿಎನ್ ಸುರೇಶ್, “ಈ ದೇಶವು ನಾಶವಾಗಿ ಹೋದರೆ ಏನು?” ಎಂದು ತಮಿಳಿನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಹಾಗೂ ಲೇಖಕ ನಿಸ್ಸಿಮ್ ಮಣ್ಣತುಕ್ಕರೆನ್ ಅವರು ಕೂಡಾ, ಸಾವಿರಾರು ಕಾಶ್ಮೀರಿ ನಾಗರಿಕರ 600 ಮನವಿಗಳು 1 ವರ್ಷದ ನಂತರವೂ ವಿಚಾರಣೆಗೆ ಕಾಯುತ್ತಿವೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ವಿಜಯ್. ಜೆ ಎನ್ನುವವರು ಕೂಡಾ ಪ್ರಿಯಾ ಪ್ರಕಾಶ್ ಅವರ ಮಾತನ್ನೇ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ:ಹಿಟ್ಲರನ ಜರ್ಮನಿಯಲ್ಲಿ ನಾಜೀಗಳ ಕಾಲಿಗೆರಗಿತ್ತು ನ್ಯಾಯಾಂಗ! 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...