Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...