Homeಮುಖಪುಟನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ರವರ 67 ನೇ ಜನ್ಮದಿನ ಇಂದು. ಅವರ ಹೇಳಿಕೆಗಳ ಸಂಗ್ರಹ ಇಲ್ಲಿದೆ.

- Advertisement -
- Advertisement -

ಬಹುಭಾಷಾ ನಟ, ಮಕ್ಕಳ್‌ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್‌ ಇಂದು ತಮ್ಮ 67 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಸಂದರ್ಭದಲ್ಲಿ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವುಗಳ ಸಂಗ್ರಹ ಇಲ್ಲಿದೆ.

”ಮಕ್ಕಳ್ ನೀದಿ ಮಯ್ಯಂ” ಎಂಬ ರಾಜಕೀಯ ಪಕ್ಷ ಕಟ್ಟಿರುವ ಕಮಲ್ ಹಾಸನ್, ಆಳುವ ಸರ್ಕಾರಗಳನ್ನು, ನೀತಿಗಳನ್ನು ಪ್ರಶ್ನಿಸುತ್ತಾ ಬಂದಿದ್ದಾರೆ. ಅದರಲ್ಲಿಯೂ ಭಾವನಾತ್ಮಕ ವಿಚಾರಗಳನ್ನಿಟ್ಟು ರಾಜಕೀಯ ಮಾಡುವುದನ್ನು ಕಮಲ್ ಖಂಡತುಂಡವಾಗಿ ವಿರೋಧಿಸಿದ್ದಾರೆ. ಹಾಗಾಗಿಯೇ ದೇವರು, ಧರ್ಮದ ಹೆಸರಿನಲ್ಲಿ ಓಟು ಕೇಳುವುದಕ್ಕೆ ಅವರ ವಿರೋಧವಿದೆ. ಹೌದು ನಾನು ಗೋಮಾಂಸ ತಿಂದಿದ್ದೇನೆ, ಏನೀಗ? ಏನು ತಿನ್ನಬೇಕೆನ್ನುವುದು ಜನರ ಆಯ್ಕೆ. ಅದನ್ನು ಕೇಳಲು ನೀವ್ಯಾರು ಎಂದು ಕಮಲ್ ಹಾಸನ್ ಈ ಹಿಂದೆ ಪ್ರಶ್ನಿಸಿದ್ದರು.

“ನಾಸ್ತಿಕತೆ ನಿಮ್ಮ ಸಿದ್ಧಾಂತ ಎಂದು ಕೇಳುತ್ತಾರೆ ಅಲ್ಲ ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ ಎಂದು ಹೇಳುತ್ತೇನೆ. ಈಗ ನನ್ನ ಮುಂದೆ ದೇವರು ಪ್ರತ್ಯಕ್ಷನಾದರೂ ಸಹ ನಾನು ಪೂಜಿಸುವುದಿಲ್ಲ” ಎಂದು 2015ರಲ್ಲಿ ಅವರು ಹೇಳಿಕೆ ನೀಡಿದ್ದರು. ಅವರ ಇನ್ನಿತರ ಪ್ರಸಿದ್ದ ಹೇಳಿಕೆಗಳು ಕೆಳಗಿನಂತಿವೆ.

“ಒಂದು ರಾಷ್ಟ್ರ, ಒಂದು ಕಾನೂನು, ಒಂದು ಧರ್ಮ, ಒಂದು ಆಯ್ಕೆ, ಹಿಂದಿ ಒಂದೇ ಭಾಷೆ, ಒಂದು ಆಹಾರ, ಒಬ್ಬ ಪ್ರಧಾನಿ ಹೀಗೆ ಎಲ್ಲವೂ ಒಂದೇ ಆಗುವುದಾದರೇ, ಆ ‘ಒಂದು’ ಯಾವಾಗಲೂ ಸರ್ವಾಧಿಕಾರ ಮತ್ತು ದಬ್ಬಾಳಿಕೆಗೆ ಕಾರಣವಾಗಿದೆ ಎಂದು ಇತಿಹಾಸವು ತೋರಿಸಿದೆ’’.

“ಸಮಾನ ನ್ಯಾಯವಿಲ್ಲದ ಮತ್ತು ಸಾಮಾಜಿಕ ನ್ಯಾಯವಿಲ್ಲದ ಅಸಮಾನ ಸಮಾಜದಲ್ಲಿ, ‘ಒಂದು ಮಾತ್ರ’ ಎಂದು ಹೇಳುವುದು ದೊಡ್ಡ ಅನ್ಯಾಯವಾಗಿದೆ”.

“ನಾನು 21 ನೇ ಶತಮಾನದ ಮನುಷ್ಯ. ನಾನು ವೈಭವವನ್ನು ನಂಬುವುದಿಲ್ಲ. ಶ್ರಮ, ಕಣ್ಣೀರು, ಜೀವನ ಮತ್ತು ಮರಣವನ್ನು ಮಾತ್ರ ಸತ್ಯವೆಂದು ನಂಬುತ್ತೇನೆ”.

‘ಸಾಕ್ರಟೀಸ್‌ನ ಮಗನಾದ ನನಗೆ ಒಂದು ಕಪ್ ವಿಷವನ್ನು ಕೊಟ್ಟರೂ ಸಂತೋಷದಿಂದ ಕುಡಿಯುತ್ತೇನೆ. ಆದರೆ ನಾನು ಸಾಯುವವರೆಗೂ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತೇನೆ’ ಎನ್ನುವ ಮೂಲಕ ಕಮಲ್ ಗಮನಸೆಳೆದಿದ್ದರು.

“ನನ್ನ ಮೇಲೆ ಬುದ್ಧನ ಪ್ರಭಾವ ಇದೆ, ವಿಶ್ವದ ಅತಿದೊಡ್ಡ ವೈಚಾರಿಕ ವ್ಯಕ್ತಿ ಬುದ್ಧನನ್ನೂ ಸಹ ಜನರು ದೇವರನ್ನಾಗಿ ಮಾಡಿದ್ದಾರೆ” ಎಂದು ಕಮಲ್ ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

“ನಾನು, ನನಗಿಂತ ಮೊದಲು ಇದ್ದವರಿಗಿಂತಲೂ ಹೆಚ್ಚಿನದನ್ನು ಯೋಚಿಸಲು ಸಾಧ್ಯವಾದರೆ ಮಾತ್ರ ಭವಿಷ್ಯದ ಪೀಳಿಗೆಗಳು ನನಗಿಂತ ಹೆಚ್ಚಿನದನ್ನು ಯೋಚಿಸಲು ಪ್ರಯತ್ನಿಸುತ್ತಾರೆ” ಎಂದು ಕಮಲ್ ಹಾಸನ್ ಹೇಳಿದ್ದರು.

“ಭಾರತದ ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿರುವಾಗ, ಕೊರೊನಾ ವೈರಸ್‌ನಿಂದಾಗಿ ಜೀವನೋಪಾಯವನ್ನು ಕಳೆದುಕೊಂಡಿರುವಾಗ 1,000 ಕೋಟಿ ವೆಚ್ಚದ ಹೊಸ ಸಂಸತ್ತು ಏಕೆ..?” ಎಂದು ಕೇಂದ್ರ ಹೊಸ ಸೆಂಟ್ರಲ್ ವಿಸ್ತಾ ಯೋಜನೆಯನ್ನು ವಿರೋಧಿಸಿದ್ದರು.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಪೆರಿಯಾರ್‌ ಹಾಗೂ ಗಾಂಧಿ ಅನುಯಾಯಿಯಾಗಿ ನಾನು ಅವರನ್ನು ಚೆನ್ನಾಗಿ ಅರಿತಿದ್ದೇನೆ. ಅವರಷ್ಟು ಬುದ್ಧಿವಂತರು ಯಾರೂ ಇರಲಾರರು. ಅವರು ಈ ಸಮಾಜಕ್ಕೆ ನೀತಿ, ಸಮಾನತೆ ಮತ್ತು ಸಮೃದ್ಧಿಯನ್ನು ತೋರಿಸಿಕೊಟ್ಟವರು.

“ಕೆಳಸ್ತರವನ್ನು ನಾಶಗೊಳಿಸಲು ಹೊರಟರೆ, ಅದು ಮೇಲುಸ್ತರದ ವಿನಾಶಕ್ಕೂ ಕಾರಣವಾಗುತ್ತದೆ ಎಂಬುದನ್ನು ಇತಿಹಾಸ ತಿಳಿಸಿಕೊಟ್ಟಿದೆ. ಇದನ್ನು ವಿಜ್ಞಾನ ಕೂಡಾ ಒಪ್ಪುತ್ತದೆ!” ಎಂದು ಮೋದಿಯವರ ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ ಘೋಷಣೆಯನ್ನು ಕಮಲ್ ವಿರೋಧಿಸಿದ್ದರು.


ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...