Homeಸಿನಿಮಾಕ್ರೀಡೆಆರ್‌ಸಿಬಿ ನಾಯಕನಾಗಿ ಮುಂದುವರಿಯಲು ಕೊಹ್ಲಿಗೆ ಅರ್ಹತೆಯಿಲ್ಲ: ಗೌತಮ್ ಗಂಭೀರ್!

ಆರ್‌ಸಿಬಿ ನಾಯಕನಾಗಿ ಮುಂದುವರಿಯಲು ಕೊಹ್ಲಿಗೆ ಅರ್ಹತೆಯಿಲ್ಲ: ಗೌತಮ್ ಗಂಭೀರ್!

ವಿಶ್ವ ದಾಖಲೆ ಮಾಡಿರುವ ಮತ್ತು ನೇರ ಮಾತುಗಾರರಾದ ಎಂ.ಎಸ್.ಧೋನಿ ಮತ್ತು ರೋಹಿತ್‌ ಶರ್ಮಾ ಅವರೊಂದಿಗೆ ಒಬ್ಬ ನಾಯಕನಾಗಿ ವಿರಾಟ್‌ ಕೊಹ್ಲಿಯನ್ನು ಹೋಲಿಸಲು ಸಾಧ್ಯವಿಲ್ಲ

- Advertisement -
- Advertisement -

ಈ ಐಪಿಎಲ್ ಪಂದ್ಯದಲ್ಲಿ ಉತ್ತಮ ಸಾಧನೆ ತೋರದ ಕಾರಣಕ್ಕೆ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಈ ಬಾರಿಯ ಐಪಿಎಲ್ ಪ್ಲೇ ಆಫ್‌ನಿಂದ ಹೊರಗುಳಿದಿದೆ.

“ವಿಶ್ವ ದಾಖಲೆ ಮಾಡಿರುವ ಮತ್ತು ನೇರ ಮಾತುಗಾರರಾದ ಎಂ.ಎಸ್.ಧೋನಿ ಮತ್ತು ರೋಹಿತ್‌ ಶರ್ಮಾ ಅವರೊಂದಿಗೆ ಒಬ್ಬ ನಾಯಕನಾಗಿ ವಿರಾಟ್‌ ಕೊಹ್ಲಿಯನ್ನು ಹೋಲಿಸಲು ಸಾಧ್ಯವಿಲ್ಲ. ನೂರಕ್ಕೆ ನೂರರಷ್ಟು ಅವರನ್ನು ಆರ್‌ಸಿಬಿ ನಾಯಕತ್ವದಿಂದ ತೆಗೆದುಹಾಕಬೇಕು. ಏಕೆಂದರೆ ಇದು ಹೊಣೆಗಾರಿಕೆಯ ಸಮಸ್ಯೆಯಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!

“ಟ್ರೋಫಿ ಗೆಲ್ಲದೇ ಪಂದ್ಯಾವಳಿಯಲ್ಲಿ 8 ವರ್ಷಗಳಿಂದ ಇದ್ದಾರೆ. 8 ವರ್ಷಗಳು ನಿಜಕ್ಕೂ ಹೆಚ್ಚಿನ ಸಮಯ. ಕ್ಯಾಪ್ಟನ್‌ಶಿಪ್‌ ಬಗ್ಗೆ ಮರೆತುಬಿಡಿ, 8 ವರ್ಷಗಳಿಂದ ಟ್ರೋಫಿ ಗೆಲ್ಲದೇ ಇನ್ನೂ ನಾಯಕನಾಗಿ ಮುಂದುವರಿಯುತ್ತಿರುವ ಯಾವುದೇ ಬೇರೆ ಆಟಗಾರನನ್ನು ತೋರಿಸಿ. ಹಾಗಾಗಿ ಇದು ಹೊಣೆಗಾರಿಕೆಯಾಗಿರಬೇಕು” ಎಂದು 2012 ಮತ್ತು 2014 ರಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಮುನ್ನಡೆಸಿ 2 ಬಾರಿ ಐಪಿಎಲ್‌ ಪ್ರಶಸ್ತಿ ಗೆದ್ದಿದ್ದ ಗೌತಮ್ ಗಂಭಿರ್ ‘ಟೈಮ್‌ ಔಟ್‘ ಕಾರ್ಯಕ್ರಮದಲ್ಲಿ ಹೇಳಿದರು.

ಗೌತಮ್ ಗಂಭೀರ್ ಹಲವಾರು ವರ್ಷಗಳಿಂದ ಕೊಹ್ಲಿಯ ಐಪಿಎಲ್ ನಾಯಕತ್ವವನ್ನು ತೀವ್ರವಾಗಿ ಟೀಕಿಸುತ್ತಿದ್ದರು. ಆದರೆ ವೈಯಕ್ತಿಕವಾಗಿ ಅವರಿಗೂ-ತಮಗೂ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್…

“ನಾವು ಎಂಎಸ್ ಧೋನಿ ಬಗ್ಗೆ ಮಾತನಾಡುತ್ತೇವೆ, ರೋಹಿತ್ ಶರ್ಮಾ ಬಗ್ಗೆ ಮಾತನಾಡುತ್ತೇವೆ, ವಿರಾಟ್ ಕೊಹ್ಲಿ ಬಗ್ಗೆಯೂ ಮಾತನಾಡುತ್ತೇವೆ. ಇಲ್ಲಿನ ವಿಷಯ ಅದಲ್ಲ. ಧೋನಿ ಮೂರು ಬಾರಿ ಟ್ರೋಫಿ ಗೆದ್ದಿದ್ದಾರೆ. ರೋಹಿತ್ ಶರ್ಮಾ ನಾಲ್ಕು ಬಾರಿ ಗೆದ್ದಿದ್ದಾರೆ. ಈ ಕಾರಣಕ್ಕಾಗಿ ಅವರು ದೀರ್ಘಾವಧಿಯ ನಾಯಕತ್ವ ವಹಿಸಿದ್ದಾರೆ. ಎಂಟು ವರ್ಷಗಳವರೆಗೆ ಈ ಸಾದನೆ ಮಾಡದಿದ್ದರೆ ಅವರನ್ನೂ ನಾಯಕತ್ವದ ಸ್ಥಾನದಿಂದ ತೆಗೆದುಹಾಕಲಾಗುತ್ತಿತ್ತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಬಾರಿಯ ಐಪಿಎಲ್‌ ಪಂದ್ಯದಲ್ಲಿ ಕೊಹ್ಲಿ ಉತ್ತಮ ಸಾಧನೆಯನ್ನು ತೋರಿಲ್ಲವಾದ್ದರಿಂದ ಹಲವು ಟೀಕೆಗಳನ್ನು ಎದುರಿಸುತ್ತಿದ್ದಾರೆ.


ಇದನ್ನೂ ಓದಿ: ಐಪಿಎಲ್ :ರಿಯಾನ್ ಪರಾಗ್ ಎಂಬ ತಾರೆಯ ಅದ್ಭುತ ಆಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...