Homeಅಂತರಾಷ್ಟ್ರೀಯವಿಶ್ವಸಂಸ್ಥೆ: ಆಡಳಿತ & ಹಣಕಾಸು ಪ್ರಶ್ನೆಗಳ ಸಲಹಾ ಸಮಿತಿಗೆ ಭಾರತದ ವಿದಿಷಾ ಮೈತ್ರಾ ಆಯ್ಕೆ

ವಿಶ್ವಸಂಸ್ಥೆ: ಆಡಳಿತ & ಹಣಕಾಸು ಪ್ರಶ್ನೆಗಳ ಸಲಹಾ ಸಮಿತಿಗೆ ಭಾರತದ ವಿದಿಷಾ ಮೈತ್ರಾ ಆಯ್ಕೆ

ಏಷ್ಯಾ ಪೆಸಿಫಿಕ್‌ ಭಾಗದಿಂದ ಈ ಸಲಹಾ ಸಮಿತಿಗೆ ಆಯ್ಕೆಯಾದ ಮೊದಲ ಭಾರತೀಯ ಪ್ರಜೆ ಮೈತ್ರಾ ಆಗಿದ್ದು...

- Advertisement -
- Advertisement -

ವಿಶ್ವಸಂಸ್ಥೆಯ ಆಡಳಿತಾತ್ಮಕ ಹಾಗೂ ಹಣಕಾಸು ಪ್ರಶ್ನೆಗಳ ಸಲಹಾ ಸಮಿತಿಗೆ (ACABQ) ನಡೆದ ಚುನಾವಣೆಯಲ್ಲಿ, ಭಾರತೀಯ ರಾಜತಾಂತ್ರಿಕ ಅಧಿಕಾರಿ ವಿದಿಷಾ ಮೈತ್ರಾ ಕಠಿಣ ಸ್ಪರ್ಧೆಯ ನಡುವೆ ಆಯ್ಕೆಯಾಗಿದ್ದಾರೆ.

ಏಷ್ಯಾ ಪೆಸಿಫಿಕ್‌ ಭಾಗದಿಂದ ಈ ಸಲಹಾ ಸಮಿತಿಗೆ ಆಯ್ಕೆಯಾದ ಮೊದಲ ಭಾರತೀಯ ಪ್ರಜೆ ವಿದಿಷಾ ಮೈತ್ರಾ ಆಗಿದ್ದು, ಉಳಿದ ಅಭ್ಯರ್ಥಿಗಳು ಇರಾಕ್ ಮೂಲದವರಾಗಿದ್ದಾರೆ. ಇವರೆಲ್ಲರೂ ACABQನಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದಾರೆ.

193 ಸದಸ್ಯರನ್ನೊಳಗೊಂಡ ಸಾಮಾನ್ಯ ಸಭೆಯು ACABQ ಸಮಿತಿಗೆ ಸದಸ್ಯರನ್ನು ನೇಮಕ ಮಾಡುತ್ತದೆ. ಭೌಗೋಳಿಕ ಪ್ರಾತಿನಿಧ್ಯ, ವೈಯಕ್ತಿಕ ಅರ್ಹತೆ ಹಾಗೂ ಅನುಭವಗಳನ್ನು ಪರಿಗಣಿಸಿ ಈ ನೇಮಕಾತಿ ನಡೆಯುತ್ತದೆ. ಮತ್ತೊಬ್ಬ ಅಭ್ಯರ್ಥಿ ಇರಾಕ್‌ನ ಆಲಿ ಮೊಹಮ್ಮದ್‌ ಫೇಕ್‌ ಆಲ್‌ ದಬಾಕ್‌ ಎದುರು 126 ಮತಗಳಿಗೆ 64 ಮತಗಳನ್ನು ಪಡೆಯುವ ಮೂಲಕ ವಿದಿಶಾ ಮೈತ್ರಾ ಅಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ACABQ ಸದಸ್ಯರಾಗಿ ಆಯ್ಕೆಯಾಗಿರುವ ವಿದಿಷಾ ಮೈತ್ರಾ ಅವರ ಅವಧಿ ಮೂರೂವರೆ ವರ್ಷಗಳಾಗಿದ್ದು, 2021 ಜನವರಿ 1ರಂದು ಆರಂಭವಾಗಲಿದೆ.

ಭಾರತವು ಭದ್ರತಾ ಮಂಡಳಿಯಲ್ಲಿ ಖಾಯಂ ಅಲ್ಲದ ಸದಸ್ಯ ದೇಶವಾಗಿ ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿರುವ ಬೆನ್ನಲ್ಲೇ ಮೈತ್ರಾ ಅವರು ವಿಶ್ವಸಂಸ್ಥೆಯ ಸಲಹಾ ಸಮಿತಿಗೆ ನೇಮಕವಾಗಿದ್ದಾರೆ. ಈ ಸಮಿತಿಯು 16 ಸದಸ್ಯರನ್ನೊಳಗೊಂಡಿರುತ್ತದೆ.

ಈ ಸಮಿತಿ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಅವರು ಸಾಮಾನ್ಯ ಸಭೆಗೆ ಸಲ್ಲಿಸಿದ ಬಜೆಟ್ ಪರಿಶೀಲನೆ ಮತ್ತು ಆಡಳಿತಾತ್ಮಕ ಮತ್ತು ಬಜೆಟ್ ವಿಷಯಗಳ ಬಗ್ಗೆ ಸಾಮಾನ್ಯ ಸಭೆಗೆ ಸಲಹೆ ನೀಡುವುದು ಸೇರಿದಂತೆ ಹಲವಾರು ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ.


ಇದನ್ನೂ ಓದಿ: ಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...