Homeಚಳವಳಿಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸ್ಟ್ರಾ ಬಳಸಲು ಅನುಮತಿ ಕೇಳಿದ್ದರು, ಆದರೆ ಎನ್ಐಎ ಅದಕ್ಕೆ ಸಮಯ ಕೇಳಿದೆ

- Advertisement -
- Advertisement -

ಭೀಮಾ-ಕೋರೆಗಾಂವ್ ಪ್ರಕರಣದ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಲ್ಪಟ್ಟ 83 ವರ್ಷದ ಫಾದರ್ ಸ್ಟಾನ್ ಸ್ವಾಮಿ, ಕುಡಿಯಲು ನೆರವಾಗುವ ಸಿಪ್ಪರ್‌ ಕಪ್ ಮತ್ತು ಸ್ಟ್ರಾ ಬಳಸುವ ಅನುಮತಿಗಾಗಿ ಮುಂಬೈನ ವಿಶೇಷ ನ್ಯಾಯಾಲಯವನ್ನು ಕೋರಿದ್ದಾರೆ. ಜೈಲಿನ ಹೊರಗಿನಿಂದ ವಸ್ತುಗಳನ್ನು ಒಯ್ಯಲು ನ್ಯಾಯಾಲಯದ ಅನುಮತಿ ಬೇಕಾಗಿದ್ದು, ಆದರೆ ಎನ್‌ಐಎ ಕೋರಿಕೆಯ ವಿಚಾರಣೆ ನವೆಂಬರ್‌ 26 ರಂದು ನಡೆಯಲಿದೆ ಎಂದಿದೆ.

ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿರುವ ಸ್ಟಾನ್ ಸ್ವಾಮಿಯನ್ನು ಅಕ್ಟೋಬರ್ 8 ರಂದು ರಾಂಚಿಯಲ್ಲಿರುವ ಅವರ ನಿವಾಸದಿಂದ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಬಂಧಿಸಿತ್ತು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಾರ್ಕಿನ್ಸನ್ ಕಾಯಿಲೆಯು ನರಮಂಡಲವನ್ನು ದುರ್ಬಲಗೊಳಿಸುವ ಕಾಯಿಲೆಯಾಗಿದ್ದು, ಅಸ್ಥಿರವಾಗಿ ನಡುಕ ಅಥವಾ ಸ್ನಾಯು ಸೆಳೆತಕ್ಕೆ ಕಾರಣವಾಗುತ್ತದೆ. ಇದು ದೈನಂದಿನ ಕ್ರಿಯೆಗಳಾದ ಕುಡಿಯುವುದು ಸೇರಿದಂತೆ ನುಂಗಲು, ಅಥವಾ ಜಗಿಯಲು ಸಮಸ್ಯೆಯನ್ನು ಉಂಟು ಮಾಡುತ್ತದೆ.


ಇದನ್ನೂ ಓದಿ: ’ಬಿಜೆಪಿಯದ್ದು ಕೊಳಕು ರಾಜಕೀಯ’-ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧನಕ್ಕೆ ದೇಶದಾದ್ಯಂತ ಆಕ್ರೋಶ

“ಪಾರ್ಕಿನ್ಸನ್ ಕಾರಣದಿಂದಾಗಿ ನನ್ನ ಕೈಗಳು ಅಸ್ಥಿರವಾಗಿರುವುದರಿಂದ ನನಗೆ ಲೋಟವನ್ನು ಹಿಡಿದಿಡಲು ಸಾಧ್ಯವಿಲ್ಲ” ಎಂದು ತಾಲೋಜಾ ಸೆಂಟ್ರಲ್ ಜೈಲಿನಲ್ಲಿದ್ದ ಮತ್ತು ಪ್ರಸ್ತುತ ಜೈಲು ಆಸ್ಪತ್ರೆಯಲ್ಲಿರುವ ಸ್ಟಾನ್ ಸ್ವಾಮಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಲಾಗಿದ್ದ ಸ್ಟಾನ್ ಸ್ವಾಮಿಯ ಜಾಮೀನು ಅರ್ಜಿಯನ್ನು ವಿಶೇಷ ಎನ್‌ಐಎ ನ್ಯಾಯಾಲಯವು ಕಳೆದ ತಿಂಗಳು ತಿರಸ್ಕರಿಸಿತ್ತು. ಅವರ ವಿರುದ್ಧ ಕಠಿಣ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು-ತಡೆಗಟ್ಟುವಿಕೆ-ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆದ್ದರಿಂದ ಜಾಮೀನು ನೀಡಬಾರದು ಎಂದು ಜಾಮೀನು ನೀಡುವುದನ್ನು ಎನ್‌ಐಎ ವಿರೋಧಿಸಿತ್ತು.

ಭೀಮಾ-ಕೋರೆಗಾಂವ್ ಪ್ರಕರಣವು ಜನವರಿ 1, 2018 ರಂದು ಯುದ್ಧ ಸ್ಮಾರಕದ ಸುತ್ತಮುತ್ತ ಭುಗಿಲೆದ್ದ ಹಿಂಸಾಚಾರವನ್ನು ಉಲ್ಲೇಖಿಸುತ್ತದೆ. ಅದರ ಹಿಂದಿನ ದಿನ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಹಿಂಸಾಚಾರದ ನಡೆಯಿತು ಎಂದು ಎನ್ಐಎ ಆರೋಪಿಸಲಾಗಿದೆ.

ಇದನ್ನೂಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ಮಾವೋವಾದಿ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಇವರ ಪಾತ್ರವಿದೆ ಎಂದು ಎನ್ಐಎ ಹೇಳಿಕೊಂಡಿದೆ.

ಅವರ ಬಂಧನಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೇಂದ್ರ ಸರ್ಕಾರವು “ಎಲ್ಲ ಮಿತಿಗಳನ್ನು ಮೀರಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು. ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮತ್ತು ಡಿಎಂಕೆ ನಾಯಕಿ ಕನಿಮೋಳಿ ಸೇರಿದಂತೆ ಹಲವಾರು ಈ ಬಂಧನವನ್ನು ನಾಗರಿಕ ಸ್ವಾತಂತ್ರ್ಯಗಳ ಮೇಲಿನ ದಾಳಿ ಎಂದು ಕರೆದಿದ್ದರು.

ಕ್ಯಥೋಲಿಕ್ ಪಾದ್ರಿಯಾಗಿರುವ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದ ಸಂಬಂಧ ಬಂಧನಕ್ಕೊಳಗಾದ 16 ನೇ ವ್ಯಕ್ತಿಯಾಗಿದ್ದು, ಇದುವರೆಗೂ ಬಂಧಿಸಿದವರಲ್ಲಿ ಹಿರಿಯರಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...