Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...