Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...