Homeಮುಖಪುಟಕೇರಳ: ವಂಚನೆ ಪ್ರಕರಣದಲ್ಲಿ ಮುಸ್ಲಿಂ ಲೀಗ್ ಶಾಸಕನನ್ನು ಬಂಧಿಸಿದ ಪೊಲೀಸರು

ಕೇರಳ: ವಂಚನೆ ಪ್ರಕರಣದಲ್ಲಿ ಮುಸ್ಲಿಂ ಲೀಗ್ ಶಾಸಕನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಹೂಡಿಕೆ ವಂಚನೆ ಪ್ರಕರಣದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಮಂಜೇಶ್ವರ ಶಾಸಕ ಎಂ ಸಿ ಕಮರುದ್ದೀನ್ ಅವರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಅವರು ಅಧ್ಯಕ್ಷರಾಗಿರುವ ಪಕ್ಷದ ಸಹೋದ್ಯೋಗಿ ಟಿ.ಕೆ. ಪೂಕೋಯಾ ತಂಙಲ್ ನಡೆಸುತ್ತಿದ್ದ ಚಿನ್ನಾಭರಣ ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದ ಹಲವಾರು ಜನರು, ತಾವು ಕಷ್ಟಪಟ್ಟು ಸಂಪಾದಿಸಿದ ಹಣಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದರು.

“ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಗಳು ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಕಮರುದ್ದೀನ್ ಅವರನ್ನು ಬಂಧಿಸಲಾಗಿದೆ” ಎಎಸ್ಪಿ ವಿವೇಕ್ ಕುಮಾರ್ ಹೇಳಿದರು.

ಇದನ್ನೂ ಓದಿ: ಜೈಲು ಖೈದಿಗಳ ಮಕ್ಕಳ ಶಿಕ್ಷಣಕ್ಕೆ 20 ಲಕ್ಷ ಮೀಸಲಿಟ್ಟ ಕೇರಳ ಸರ್ಕಾರ!

ಕಮರುದ್ದೀನ್ ಮತ್ತು ಪೋಕೋಯ ತಂಙಲ್ ನಡೆಸುತ್ತಿರುವ ಫ್ಯಾಶನ್ ಗೋಲ್ಡ್ ಇಂಟರ್‌ನ್ಯಾಷನಲ್‌ನಲ್ಲಿ ಹೂಡಿಕೆ ಮಾಡಿದ ಹಲವಾರು ಜನರಿಗೆ ಸುಮಾರು 100 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಶಂಕಿಸಲಾಗಿಸದ್ದು, ಸಂಸ್ಥೆಯಲ್ಲಿ ಕಮರುದ್ದೀನ್ ಅಧ್ಯಕ್ಷ ಮತ್ತು ಪೂಕೋಯಾ ತಂಙಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಚಂದೇರಾ ಮತ್ತು ಕಾಸರಗೋಡು ಪೊಲೀಸ್ ಠಾಣೆಗಳಾದ್ಯಂತ ಎರಡು ಡಜನ್‌ಗೂ ಹೆಚ್ಚು ದೂರುಗಳು ಬಂದ ಹಿನ್ನಲೆಯಲ್ಲಿ ಅವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಗಳು ಆಭರಣ ಸರಪಳಿ ಸ್ಥಾಪಿಸಿ ಸುಮಾರು 800 ಜನರಿಂದ ಹಣವನ್ನು ಸಂಗ್ರಹಿಸಿ ಕಂಪನಿಯ ಲಾಭದಿಂದ ಮಾಸಿಕ ಲಾಭಾಂಶದ ಭರವಸೆ ನೀಡಿದ್ದರು. ಕಳೆದ ವರ್ಷದವರೆಗೆ ಹೂಡಿಕೆದಾರರು ನಿಯಮಿತವಾಗಿ ಲಾಭಾಂಶ ಪಡೆದಿದ್ದು, ಪಾವತಿ ಪಡೆಯಲು ವಿಫಲವಾದಾಗ ಪೊಲೀಸ್ ದೂರುಗಳನ್ನು ದಾಖಲಿಸಿದ್ದರು.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ಕಮರುದ್ದೀನ್ ಅವರ ಹಣಕಾಸಿನ ವ್ಯವಹಾರಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಐಯುಎಂಎಲ್ ಹೇಳಿದ್ದು, ಬಾಕಿ ಹಣವನ್ನು ಪಾವತಿಸುವಂತೆ ಪಕ್ಷವು ಕಮರುದ್ದೀನ್ ಅವರನ್ನು ಕೇಳಿಕೊಂಡಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಿಂದ  ಕಮರುದ್ದೀನ್ ಐಯುಎಂಎಲ್ ಪಕ್ಷದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಬಲಿಪಶುವನ್ನಾಗಿ ಮಾಡಲಾಯಿತು: ಶಾಸಕ

ಬಂಧನದ ನಂತರ ನೀಡಿದ ತನ್ನ ಮೊದಲ ಪ್ರತಿಕ್ರಿಯೆಯಲ್ಲಿ, “ತನ್ನದೇ ಆದ ಅಪರಾಧಗಳನ್ನು ಮುಚ್ಚಿಹಾಕುವ ಉದ್ದೇಶದಿಂದ ಸಿಪಿಎಂ ನೇತೃತ್ವದ ಸರ್ಕಾರವು ನನ್ನನ್ನು ಬಲಿಪಶು ಮಾಡುತ್ತಿದೆ. ಪೊಲೀಸ್ ಕ್ರಮ ರಾಜಕೀಯ ಪ್ರೇರಿತ. ಬಂಧನಕ್ಕೆ ಮುಂಚಿತವಾಗಿ ತನಗೆ ನೋಟಿಸ್ ನೀಡಿಲ್ಲ” ಎಂದ ಆರೋಪಿಸಿದ್ದಾರೆ.

ಶಾಸಕರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂದು ಕಮರುದ್ದೀನ್ ಪರ ವಕೀಲ ವಿನೋದ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಅತ್ಯುತ್ತಮ ಆಡಳಿತ ರಾಜ್ಯ: ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...