Homeಮುಖಪುಟಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಆರ್‌ಜೆಡಿ ಮತ್ತು ಇತರ ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

- Advertisement -
- Advertisement -

ಇಂದು ಬಿಹಾರದಲ್ಲಿ ಮೂರನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಲಿವೆ ಎಂದು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ತಿಳಿಸಿವೆ. ಆರ್‌ಜೆಡಿ ಮತ್ತು ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ ಅವರ ಪಕ್ಷ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಬಹತೇಕ ಎಲ್ಲಾ ಸಮೀಕ್ಷೆಗಳೂ ಹೇಳಿವೆ.

ಟೈಮ್ ನೌ-ಸಿ ಸಮೀಕ್ಷೆ ಪ್ರಕಾರ, ಎನ್‌ಡಿಎಗೆ 116 ಮತ್ತು ಪ್ರತಿಪಕ್ಷದ ಮಹಾಘಟಬಂಧನ್‌ಗೆ 120 ಸ್ಥಾನಗಳಲ್ಲಿ ಗೆಲುವಿನ ಭರವಸೆ ನೀಡಿದ್ದು, ತೇಜಸ್ವಿ ಯಾದವ್ ಮೈತ್ರಿಪಕ್ಷಕ್ಕೆ ಸ್ವಲ್ಪ ಮುನ್ನಡೆ ನೀಡಿದೆ. ಚಿರಾಗ್ ಪಾಸ್ವಾನ್‌ರ ಲೋಕ ತಾಂತ್ರಿಕ್ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಒಂದು ಸ್ಥಾನದಲ್ಲಿ ಗೆಲುವು ಸಿಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?

ರಿಪಬ್ಲಿಕ್ ಟಿವಿ-ಜಾನ್ ಕಿ ಬಾತ್ ಸಮೀಕ್ಷೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 118 ರಿಂದ 138 ಸ್ಥಾನಗಳನ್ನು ಮತ್ತು ಆಡಳಿತಾರೂಢ ಎನ್‌ಡಿಎಗೆ 91-117 ಸ್ಥಾನಗಳನ್ನು ನೀಡಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷ 5-8 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನವೆಂಬರ್ 10 ರಂದು ಬಿಹಾರದ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಒಕ್ಕೂಟಕ್ಕೆ 122 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳು ಚುನಾವಣಾ ಪೂರ್ವದಲ್ಲಿ ಸಾಕಷ್ಟು ಪ್ರಚಾರ ನಡೆಸಿವೆ. ಬಿಜೆಪಿ ಮತ್ತು ನಿತೀಶ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಮತ್ತು 19 ಲಕ್ಷ ಉದ್ಯೋಗಗನ್ನು ನೀಡುವ ಭರವಸೆ ನೀಡಿದೆ. ಆದರೂ ನಿತೀಶ್‌ ಕುಮಾರ್‌ ಅವರ ಮೇಲೆ ರಾಜ್ಯದ ಜನತೆ ಮುನಿಸಿಕೊಂಡಿರುವಂತೆ ಕಾಣುತ್ತಿದೆ. ಚಿರಾಗ್ ಪಾಸ್ವಾನ್ ಕೂಡ ನಿತೀಶ್‌ ಮೇಲಿನ ಮುನಿಸಿನಿಂದ ಮೈತ್ರಿಯಿಂದ ಹೊರಬಂದು ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಇನ್ನು ತೇಜಸ್ವಿ ಯಾದವ್ ನೇತೃತ್ವದ ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳು ಒಟ್ಟಾಗಿದ್ದು, ಇವರ ಪರವಾದ ಒಲವು ರಾಜ್ಯದಲ್ಲಿ ಎದ್ದು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಮತ್ತು ಚುನಾವಣಾ ಪೂರ್ವದಲ್ಲಿ ಅವರು ನಡೆಸಿದ ರ್ಯಾಲಿಗಳು. ಹಾಗಾಗಿ ಬಿಹಾರದ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...