Homeಮುಖಪುಟಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಆರ್‌ಜೆಡಿ ಮತ್ತು ಇತರ ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಸಮೀಕ್ಷೆಗಳು ಹೇಳಿವೆ.

- Advertisement -
- Advertisement -

ಇಂದು ಬಿಹಾರದಲ್ಲಿ ಮೂರನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಪಕ್ಷಗಳಿಗೆ ಸ್ಪಷ್ಟ ಬಹುಮತ ಲಭಿಸಲಿವೆ ಎಂದು ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ತಿಳಿಸಿವೆ. ಆರ್‌ಜೆಡಿ ಮತ್ತು ಎಡ ಪಕ್ಷಗಳು ಒಟ್ಟು 124 ಸ್ಥಾನಗಳಲ್ಲಿ ಗೆಲ್ಲಲಿದ್ದು, ಎನ್‌ಡಿಎ ಮತ್ತು ನಿತೀಶ್‌ಕುಮಾರ್ ಅವರ ಪಕ್ಷ 110 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಬಹತೇಕ ಎಲ್ಲಾ ಸಮೀಕ್ಷೆಗಳೂ ಹೇಳಿವೆ.

ಟೈಮ್ ನೌ-ಸಿ ಸಮೀಕ್ಷೆ ಪ್ರಕಾರ, ಎನ್‌ಡಿಎಗೆ 116 ಮತ್ತು ಪ್ರತಿಪಕ್ಷದ ಮಹಾಘಟಬಂಧನ್‌ಗೆ 120 ಸ್ಥಾನಗಳಲ್ಲಿ ಗೆಲುವಿನ ಭರವಸೆ ನೀಡಿದ್ದು, ತೇಜಸ್ವಿ ಯಾದವ್ ಮೈತ್ರಿಪಕ್ಷಕ್ಕೆ ಸ್ವಲ್ಪ ಮುನ್ನಡೆ ನೀಡಿದೆ. ಚಿರಾಗ್ ಪಾಸ್ವಾನ್‌ರ ಲೋಕ ತಾಂತ್ರಿಕ್ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಒಂದು ಸ್ಥಾನದಲ್ಲಿ ಗೆಲುವು ಸಿಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ದೇಶದ ರಾಜಕೀಯಕ್ಕೆ ತಿರುವು ನೀಡುವುದೇ ಬಿಹಾರ ಚುನಾವಣೆ?

ರಿಪಬ್ಲಿಕ್ ಟಿವಿ-ಜಾನ್ ಕಿ ಬಾತ್ ಸಮೀಕ್ಷೆ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 118 ರಿಂದ 138 ಸ್ಥಾನಗಳನ್ನು ಮತ್ತು ಆಡಳಿತಾರೂಢ ಎನ್‌ಡಿಎಗೆ 91-117 ಸ್ಥಾನಗಳನ್ನು ನೀಡಿದೆ. ಚಿರಾಗ್ ಪಾಸ್ವಾನ್ ಅವರ ಪಕ್ಷ 5-8 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನವೆಂಬರ್ 10 ರಂದು ಬಿಹಾರದ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. 243 ಸ್ಥಾನಗಳ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ ಯಾವುದೇ ಪಕ್ಷ ಅಥವಾ ಒಕ್ಕೂಟಕ್ಕೆ 122 ಸ್ಥಾನಗಳಲ್ಲಿ ಗೆಲ್ಲುವ ಅಗತ್ಯವಿದೆ.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳು ಚುನಾವಣಾ ಪೂರ್ವದಲ್ಲಿ ಸಾಕಷ್ಟು ಪ್ರಚಾರ ನಡೆಸಿವೆ. ಬಿಜೆಪಿ ಮತ್ತು ನಿತೀಶ್‌ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಮತ್ತು 19 ಲಕ್ಷ ಉದ್ಯೋಗಗನ್ನು ನೀಡುವ ಭರವಸೆ ನೀಡಿದೆ. ಆದರೂ ನಿತೀಶ್‌ ಕುಮಾರ್‌ ಅವರ ಮೇಲೆ ರಾಜ್ಯದ ಜನತೆ ಮುನಿಸಿಕೊಂಡಿರುವಂತೆ ಕಾಣುತ್ತಿದೆ. ಚಿರಾಗ್ ಪಾಸ್ವಾನ್ ಕೂಡ ನಿತೀಶ್‌ ಮೇಲಿನ ಮುನಿಸಿನಿಂದ ಮೈತ್ರಿಯಿಂದ ಹೊರಬಂದು ಅವರ ವಿರುದ್ಧ ಪ್ರಚಾರ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಇನ್ನು ತೇಜಸ್ವಿ ಯಾದವ್ ನೇತೃತ್ವದ ಕಾಂಗ್ರೆಸ್ ಮತ್ತು ಇತರ ಎಡ ಪಕ್ಷಗಳು ಒಟ್ಟಾಗಿದ್ದು, ಇವರ ಪರವಾದ ಒಲವು ರಾಜ್ಯದಲ್ಲಿ ಎದ್ದು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಮತ್ತು ಚುನಾವಣಾ ಪೂರ್ವದಲ್ಲಿ ಅವರು ನಡೆಸಿದ ರ್ಯಾಲಿಗಳು. ಹಾಗಾಗಿ ಬಿಹಾರದ ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂದು ಕಾದುನೋಡಬೇಕಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...