Homeಮುಖಪುಟಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ಸಂತ್ರಸ್ತೆಯನ್ನು ಬಲ್ಲಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಆಕೆಯನ್ನು ವಾರಣಾಸಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ

- Advertisement -
- Advertisement -

ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಿಲ್ಲ ಎಂಬ ಕಾರಣಕ್ಕೆ ಬಲ್ಲಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ 15 ವರ್ಷದ ದಲಿತ ಬಾಲಕಿಯೊಬ್ಬಳಿಗೆ ಅದೇ ಗ್ರಾಮದ ಯುವಕನೊಬ್ಬ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

21 ವರ್ಷದ ಯುವಕ ಕೃಷ್ಣ ಗುಪ್ತಾ ಎಂಬುವವನು ಬಾಲಕಿಗೆ ಶುಕ್ರವಾರ ಬೆಂಕಿ ಹಚ್ಚಿದ್ದು, ನಂತರ ಸಂತ್ರಸ್ತೆಯನ್ನು ಬಲ್ಲಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿಯ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಆಕೆಯನ್ನು ವಾರಣಾಸಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ದುಬಾರ್ ಪೊಲೀಸ್ ಠಾಣಾಧಿಕಾರಿ ಅನಿಲ್ ಚಂದ್ರ ತಿವಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ಬಾಲಕಿಯ ತಂದೆಯ ದೂರಿನ ಮೇರೆಗೆ ಪೊಲೀಸರು, ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತನ್ನ ಮಗಳನ್ನು ತನ್ನ ಮನೆಯಿಂದ ಅಪಹರಿಸಿ ಬೆಂಕಿ ಹಚ್ಚಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲಿಸರು ಹೇಳಿದರು.


ಇದನ್ನೂ ಓದಿ: ಉತ್ತರಪ್ರದೇಶ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 8 ಮಂದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...