Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...